AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ಐದನೇ ವಿಕೆಟ್ ಪತನ; ಉದಯ್​ ಹೊರಹೋಗಲು ಕಾರಣವಾದ ವಿಚಾರಗಳೇನು?

ಕಿಚ್ಚ ಸುದೀಪ್ ಅವರು ಪ್ರತಿ ವಾರ ನಿರೂಪಣೆ ಮಾಡುತ್ತಾರೆ. ಟಿವಿ ಸೀಸನ್​ಗಳಲ್ಲಿ ಭಾನುವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಒಟಿಟಿಯಲ್ಲಿ ಶನಿವಾರವೇ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ.

ಬಿಗ್ ಬಾಸ್​​ನಲ್ಲಿ ಐದನೇ ವಿಕೆಟ್ ಪತನ; ಉದಯ್​ ಹೊರಹೋಗಲು ಕಾರಣವಾದ ವಿಚಾರಗಳೇನು?
ಉದಯ್
TV9 Web
| Edited By: |

Updated on:Aug 27, 2022 | 8:42 PM

Share

‘ಬಿಗ್ ಬಾಸ್​ ಕನ್ನಡ ಒಟಿಟಿ’ (Bigg Boss OTT) ದಿನಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಇದರ ಜತೆಗೆ ಸ್ಪರ್ಧೆ ಕೂಡ ಹೆಚ್ಚುತ್ತಿದೆ. ಈಗ ಮನೆಯಲ್ಲಿ ಐದನೇ ವಿಕೆಟ್ ಬಿದ್ದಿದೆ. ಈ ವಾರ ಮನೆಯಿಂದ  ಉದಯ್ ಸೂರ್ಯ (Uday Surya) ಔಟ್ ಆಗಿದ್ದಾರೆ. ಈ ಮೂಲಕ ದೊಡ್ಮನೆ ಸೇರಿದ್ದ 16 ಮಂದಿಯಲ್ಲಿ ಈಗ 11 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಇನ್ನು ಕೇವಲ ಮೂರು ವಾರಗಳ ಕಾಲ ‘ಬಿಗ್ ಬಾಸ್ ಒಟಿಟಿ’ ನಡೆಯುವುದರಿಂದ ಕಾಂಪಿಟೇಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕಿಚ್ಚ ಸುದೀಪ್ ಅವರು ಪ್ರತಿ ವಾರ ನಿರೂಪಣೆ ಮಾಡುತ್ತಾರೆ. ಟಿವಿ ಸೀಸನ್​ಗಳಲ್ಲಿ ಭಾನುವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಒಟಿಟಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದೆ. ಶನಿವಾರವೇ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಈ ವಾರ ಬಿಗ್ ಬಾಸ್ ಮನೆಯಿಂದ ಉದಯ್ ಹೊರ ಹೋಗುತ್ತಿರುವ ಬಗ್ಗೆ ಸುದೀಪ್ ಘೋಷಣೆ ಮಾಡಿದರು. ಈ ಮೂಲಕ ಮೂರನೇ ವಾರಕ್ಕೆ ಉದಯ್ ಪ್ರಯಾಣ ಮುಗಿಸಿದ್ದಾರೆ.

ಉದಯ್ ಸೂರ್ಯ, ರೂಪೇಶ್ ಶೆಟ್ಟಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀ, ಸೊಮಣ್ಣ ಮೇಲೆ ಈ ವಾರದ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಆರ್ಯವರ್ಧನ್ ಗುರೂಜಿ ಮೊದಲು ಸೇವ್ ಆದರು. ಆ ಬಳಿಕ ರೂಪೇಶ್​ ಶೆಟ್ಟಿ, ಸೋಮಣ್ಣ, ಅಕ್ಷತಾ, ಚೈತ್ರಾ, ಜಯಶ್ರೀ ಉಳಿದುಕೊಂಡರು. ಕೊನೆಯಲ್ಲಿ ಉದಯ್ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ
Image
ಸಾನ್ಯಾ, ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ ಸಿಕ್ಕಿ ಬಿದ್ದ ಉದಯ್ ಸೂರ್ಯ
Image
ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
Image
ಆ್ಯಟಿಟ್ಯೂಡ್ ತೋರಿಸಿದ ಜಯಶ್ರೀಗೆ ಕಠಿಣ ಶಿಕ್ಷೆ ಕೊಟ್ಟ ಬಿಗ್ ಬಾಸ್; ಎಲಿಮಿನೇಷನ್​ಗೆ ಮತ್ತಷ್ಟು ಹತ್ತಿರ
Image
ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಬಾಡಿ ಶೇಮಿಂಗ್? ಅಭಿಪ್ರಾಯ ಹೊರ ಹಾಕಿದ ಸಾನ್ಯಾ ಅಯ್ಯರ್

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೇಳಿದ ಮಾತನ್ನು ನಡೆಸಿಕೊಡಲೇ ಇಲ್ಲ ಸಾನ್ಯಾ ಅಯ್ಯರ್​

‘ಬಿಗ್ ಬಾಸ್’ ಮನೆಯಲ್ಲಿ ಉದಯ್​ ಸೂರ್ಯ ಅವರು ಒಂದು ಎಡವಟ್ಟು ಮಾಡಿಕೊಂಡಿದ್ದರು. ಕೆಲವರ ಬಗ್ಗೆ ಅವರು ಕೆಟ್ಟ ರೀತಿಯಲ್ಲಿ ಮಾತನಾಡಿದ್ದಾರೆ, ಹೆಣ್ಣು ಮಕ್ಕಳನ್ನು ಕೀಳಾಗಿ ನೋಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಇಡೀ ಮನೆಯವರು ಉದಯ್ ವಿರುದ್ಧ ತಿರುಗಿ ಬಿದ್ದರು. ಇನ್ನು, ಮನೆಯಲ್ಲಿ ಅವರು ಡಬಲ್​ಗೇಮ್ ಆಡುತ್ತಿದ್ದರು ಎಂಬ ಆರೋಪ ಕೂಡ ಇದೆ. ಇದರಿಂದ ಕೂಡ ಅವರಿಗೆ ಹಿನ್ನಡೆ ಆಗಿದೆ.

Published On - 8:32 pm, Sat, 27 August 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ