ಅತಿಯಾಯ್ತು ನಟಿಯ ಹಾಟ್​ ಡ್ರೆಸ್​ ಹಾವಳಿ; ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ ನೆಟ್ಟಿಗರು

ದಿನಕ್ಕೊಂದು ಹಾಟ್​ ವೇಷ ಧರಿಸಿ ಊರ್ಫಿ ಜಾವೇದ್​ ಪೋಸ್​ ನೀಡುತ್ತಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಬಗೆಬಗೆಯ ಫೋಟೋಗಳನ್ನು ಪೋಸ್ಟ್​ ಮಾಡಿಕೊಳ್ಳುತ್ತಿದ್ದಾರೆ.

ಅತಿಯಾಯ್ತು ನಟಿಯ ಹಾಟ್​ ಡ್ರೆಸ್​ ಹಾವಳಿ; ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ ನೆಟ್ಟಿಗರು
ಊರ್ಫಿ ಜಾವೇದ್
Follow us
| Updated By: ಮದನ್​ ಕುಮಾರ್​

Updated on:Nov 28, 2021 | 10:08 AM

‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಫೇಮಸ್​ ಆಗಿದ್ದ ನಟಿ ಊರ್ಫಿ ಜಾವೇದ್​ (Urfi Javed) ಅವರು ಚಿತ್ರ ವಿಚಿತ್ರ ಕಾಸ್ಟ್ಯೂಮ್​ಗಳಿಂದ ಗಮನ ಸೆಳೆಯುತ್ತಿದ್ದಾರೆ. ಆದರೆ ನೆಟ್ಟಿಗರಿಗೆ ಇದು ಕೆಲವೊಮ್ಮೆ ಕಿರಿಕಿರಿ ಕೂಡ ಉಂಟು ಮಾಡುತ್ತಿದೆ. ಆ ಕಾರಣದಿಂದ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ (Troll)​ ಮಾಡಲಾಗುತ್ತಿದೆ. ದಿನಕ್ಕೊಂದು ಹಾಟ್​ ವೇಷ ಧರಿಸಿ ಊರ್ಫಿ ಜಾವೇದ್​ ಪೋಸ್​ ನೀಡುತ್ತಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಬಗೆಬಗೆಯ ಫೋಟೋಗಳನ್ನು (Urfi Javed Photos) ಪೋಸ್ಟ್​ ಮಾಡಿಕೊಳ್ಳುತ್ತಿದ್ದಾರೆ. ಜನರ ಗಮನವನ್ನು ತಮ್ಮತ್ತ ಸೆಳೆದುಕೊಳ್ಳಲು ಅವರು ಇದನ್ನೆಲ್ಲ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಬಟ್ಟೆಗಳನ್ನು ನಾವೇ ಡಿಸೈನ್​ ಮಾಡಿಕೊಳ್ಳುವ ಮೂಲಕ ಊರ್ಫಿ ಜಾವೇದ್​ ಫೇಮಸ್​ ಆಗಿದ್ದಾರೆ. ಕರಣ್​ ಜೋಹರ್​ ನಡೆಸಿಕೊಟ್ಟ ‘ಬಿಗ್​ ಬಾಸ್​ ಓಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆಯ ಒಳಗೆ ಕಾಲಿಟ್ಟಾಗಲೂ ಊರ್ಫಿ ಅದೇ ರೀತಿ ಮಾಡಿದ್ದರು. ದೊಡ್ಮನೆಯೊಳಗೆ ತಮ್ಮ ಇಷ್ಟದ ಪ್ರಕಾರ ಕಾಸ್ಟ್ಯೂಮ್​ ಡಿಸೈನ್​ ಮಾಡಿಕೊಳ್ಳಲು ಅವರಿಗೆ ಎಲ್ಲ ಪರಿಕರಗಳು ಸಿಕ್ಕಿರಲಿಲ್ಲ. ಹಾಗಾಗಿ ಇರುವ ಕೆಲವು ವಸ್ತುಗಳನ್ನೇ ಬಳಸಿಕೊಂಡು ಅವರು ತಮ್ಮ ಕ್ರಿಯೇಟಿವಿಟಿ ತೋರಿಸುತ್ತಿದ್ದರು. ಅಚ್ಚರಿ ಎಂದರೆ ಅವರು ಕಸದ ಚೀಲವನ್ನು ಬಳಸಿಕೊಂಡು ತಮ್ಮ ಹೊಸ ಕಾಸ್ಟ್ಯೂಮ್ ವಿನ್ಯಾಸ ಮಾಡಿದ್ದರು.

‘ಬಿಗ್​ ಬಾಸ್​ ಓಟಿಟಿ’ ಬಳಿಕ ಊರ್ಫಿ ಜಾವೇದ್​ ಅವರ ಖ್ಯಾತಿ ಹೆಚ್ಚಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ 19 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಊರ್ಫಿ ಹಾಕುವ ಡ್ರೆಸ್​ಗಳನ್ನು ಕೆಲವರು ಇಷ್ಟ ಪಡುತ್ತಾರೆ. ಆದರೆ ಇತ್ತೀಚೆಗೆ ಅದರಿಂದ ನೆಟ್ಟಿಗರಿಗೆ ಕಿರಿಕಿರಿ ಆಗುತ್ತಿದೆ. ಹಾಗಾಗಿ ಖಾರದ ಕಮೆಂಟ್​ಗಳ ಮೂಲಕ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

ಇದನ್ನೂ ಓದಿ:

ವಿಜಯ್​ ದೇವರಕೊಂಡ ಭೇಟಿ ಮಾಡಲು ಅಮೆರಿಕದ ವಿಮಾನ ಹತ್ತಿದ್ರಾ ನಟಿ ರಶ್ಮಿಕಾ ಮಂದಣ್ಣ?

‘ಕತ್ರಿನಾ-ವಿಕ್ಕಿ ಮದುವೆ ನಡೆಯುತ್ತಿಲ್ಲ’; ಅಚ್ಚರಿಯ​ ವಿಚಾರ ತೆರೆದಿಟ್ಟ ವಿಕ್ಕಿ ಕೌಶಲ್​ ಸಂಬಂಧಿ

Published On - 9:58 am, Sun, 28 November 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ