AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss OTT: ‘ಬಿಗ್​ ಬಾಸ್​ ಒಟಿಟಿ’ ಲಾಭವೋ ನಷ್ಟವೋ? ಇನ್ನೊಂದು ಸೀಸನ್​ ಬರೋದು ಅನುಮಾನ

ಸೆನ್ಸಾರ್​ ವಿಚಾರದಲ್ಲಿ ಹೆಚ್ಚೇನೂ ಮಡಿವಂತಿಕೆ ಇಲ್ಲದೇ ಈ ಶೋ ಪ್ರಸಾರ ಆಯಿತು. ತುಂಬ ಬೋಲ್ಡ್​ ಎನಿಸುವಂತಹ ಟಾಸ್ಕ್​ಗಳನ್ನು ನೀಡಲಾಗಿತ್ತು.

Bigg Boss OTT: ‘ಬಿಗ್​ ಬಾಸ್​ ಒಟಿಟಿ’ ಲಾಭವೋ ನಷ್ಟವೋ? ಇನ್ನೊಂದು ಸೀಸನ್​ ಬರೋದು ಅನುಮಾನ
ಬಿಗ್ ಬಾಸ್ ಒಟಿಟಿ
TV9 Web
| Edited By: |

Updated on: Sep 21, 2022 | 7:00 AM

Share

ಬಿಗ್​ ಬಾಸ್ (Bigg Boss)​ ರಿಯಾಲಿಟಿ ಶೋ ವರ್ಷದಿಂದ ವರ್ಷಕ್ಕೆ ಹೊಸ ಸ್ವರೂಪ ಪಡೆದುಕೊಂಡು ಸಾಗುತ್ತಿದೆ. ಹಿಂದಿ ಬಿಗ್​ ಬಾಸ್​ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಬೇರೆ ಬೇರೆ ಥೀಮ್​ಗಳನ್ನು ಪರಿಚಯಿಸಲಾಗುತ್ತಿದೆ. ಕಳೆದ ವರ್ಷ ಮೊದಲ ಬಾರಿಗೆ ‘ಬಿಗ್​ ಬಾಸ್​ ಹಿಂದಿ ಒಟಿಟಿ’ (Bigg Boss OTT) ಆವೃತ್ತಿ ಆರಂಭ ಮಾಡಲಾಯಿತು. ಅಲ್ಲಿಯವರೆಗೆ ಟಿವಿಯಲ್ಲಿ ಪ್ರಸಾರ ಆಗುತ್ತಿದ್ದ ಈ ಜನಪ್ರಿಯ ರಿಯಾಲಿಟಿ ಶೋ ಮೊದಲ ಬಾರಿಗೆ 2021ರಲ್ಲಿ ಒಟಿಟಿಯಲ್ಲಿ ಬಿತ್ತರವಾಯಿತು. ಅದನ್ನು ಕರಣ್​ ಜೋಹರ್​ (Karan Johar) ಅವರು ನಿರೂಪಣೆ ಮಾಡಿದ್ದರು. ಆದರೆ ಅದರ ಎರಡನೇ ಸೀಸನ್​ ಬರುತ್ತದೆ ಎಂದು ಕಾದು ಕುಳಿತಿದ್ದ ವೀಕ್ಷಕರಿಗೆ ಬೇಸರ ಆಗುವಂತಹ ಸುದ್ದಿ ಕೇಳಿಬಂದಿದೆ. ‘ಬಿಗ್​ ಬಾ​ಸ್​ ಹಿಂದಿ ಒಟಿಟಿ ಸೀಸನ್​ 2’ ಪ್ರಸಾರ ಆಗುವುದು ಅನುಮಾನ ಎನ್ನಲಾಗಿದೆ.

ಟಿವಿ ಆವೃತ್ತಿಗೆ ಹೋಲಿಸಿದರೆ ಒಟಿಟಿಯಲ್ಲಿ ಪ್ರಸಾರವಾದ ಬಿಗ್​ ಬಾಸ್​ ಬೇರೆಯದೇ ರೀತಿ ಇತ್ತು. ಭಿನ್ನ ಮನಸ್ಥಿತಿಯ ಅನೇಕ ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು. ಸೆನ್ಸಾರ್​ ವಿಚಾರದಲ್ಲಿ ಹೆಚ್ಚೇನೂ ಮಡಿವಂತಿಕೆ ಇಲ್ಲದೇ ಈ ಶೋ ಪ್ರಸಾರ ಆಯಿತು. ತುಂಬ ಬೋಲ್ಡ್​ ಎನಿಸುವಂತಹ ಟಾಸ್ಕ್​ಗಳನ್ನು ನೀಡಲಾಗಿತ್ತು. ಸ್ಪರ್ಧಿಗಳು ಕೂಡ ಯಾವುದೇ ಮುಲಾಜಿಲ್ಲದೇ ಅದರಲ್ಲಿ ಭಾಗವಹಿಸಿದ್ದರು. ಏನೇ ಸರ್ಕಸ್​ ಮಾಡಿದರೂ ನಿರೀಕ್ಷಿತ ಪ್ರಮಾಣದಲ್ಲಿ ಟಿಆರ್​ಪಿ ಗಿಟ್ಟಿಸಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.

ಅಂದುಕೊಂಡ ರೀತಿಯಲ್ಲಿ ವೀವ್ಸ್​ ಸಿಕ್ಕಿಲ್ಲ ಎಂಬ ಕಾರಣಕ್ಕೆ ಮತ್ತೊಮ್ಮೆ ಒಟಿಟಿ ಸೀಸನ್​ ಆರಂಭಿಸಲು ನಿರ್ಮಾಪಕರು ಧೈರ್ಯ ತೋರಿಸುತ್ತಿಲ್ಲ. ಹಾಗಾಗಿ ‘ಬಿಗ್​ ಬಾಸ್​ ಒಟಿಟಿ 2’ ಶುರುವಾಗುವುದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ಅದರ ಬದಲು ನೇರವಾಗಿ ಟಿವಿ ಸೀಸನ್​​ ಶುರುವಾಗಲಿದೆ. ಅದನ್ನು ಸಲ್ಮಾನ್​ ಖಾನ್​ ಅವರು ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ
Image
Bigg Boss Kannada OTT Finale: ಜಯಶ್ರೀ, ಜಶ್ವಂತ್​, ಸೋಮಣ್ಣ, ಸೋನು ಗೌಡ ಪಾಲಿಗೆ ಅಂತ್ಯವಾಯ್ತು ಬಿಗ್​ ಬಾಸ್​ ಪಯಣ
Image
Roopesh Shetty: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಟಾಪರ್​ ಆದ ರೂಪೇಶ್​ ಶೆಟ್ಟಿಗೆ 5 ಲಕ್ಷ ರೂ. ಬಹುಮಾನ
Image
BBK9 ಶೋನಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದ ರಾಕೇಶ್​, ರೂಪೇಶ್​, ಆರ್ಯವರ್ಧನ್​, ಸಾನ್ಯಾ ಐಯ್ಯರ್​
Image
Aryavardhan Guruji: ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗೆ ಎಂಟ್ರಿ ಪಡೆದ ಮೊದಲ ಸ್ಪರ್ಧಿ ಆರ್ಯವರ್ಧನ್​ ಗುರೂಜಿ

ದಿನದಿಂದ ದಿನಕ್ಕೆ ಒಟಿಟಿ ವ್ಯಾಪ್ತಿ ಹಿರಿದಾಗುತ್ತಿದೆ. ಹೊಸ ಹೊಸ ಕಾರ್ಯಕ್ರಮಗಳನ್ನು ಪರಿಚಯಿಸುವಲ್ಲಿ, ಹೊಸ ಸಿನಿಮಾಗಳನ್ನು ಕೊಂಡುಕೊಳ್ಳುವಲ್ಲಿ, ನೂತನ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವಲ್ಲಿ ಒಟಿಟಿ ಸಂಸ್ಥೆಗಳ ನಡುವೆ ಭಾರಿ ಪೈಪೋಟಿ ಇದೆ. ಆ ಕಾರಣದಿಂದಲೇ ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಹಿಂದಿ ಒಟಿಟಿ’ ಮೊದಲ ಸೀಸನ್​ ಪ್ರಸಾರವಾಗಿತ್ತು. ದಿವ್ಯಾ ಅಗರ್​ವಾಲ್​, ಪ್ರತೀಕ್​ ಸೆಹಜ್ಪಾಲ್​, ರಾಕೇಶ್​ ಬಾಪಟ್​, ಶಮಿತಾ ಶೆಟ್ಟಿ, ಉರ್ಫಿ ಜಾವೇದ್​, ನೇಹಾ ಬಾಸಿನ್​, ರಿಧಿಮಾ ಪಂಡಿತ್​, ಅಕ್ಷರಾ ಸಿಂಗ್​ ಮುಂತಾದವರು ಭಾಗವಹಿಸಿದ್ದರು. ದಿವ್ಯಾ ಅಗರ್​ವಾಲ್​ ಅವರು ವಿನ್ನರ್​ ಆಗಿ ಹೊರಹೊಮ್ಮಿದರು. ಆ ಶೋನಲ್ಲಿ ಭಾಗವಹಿಸಿದ ಬಳಿಕ ಉರ್ಫಿ ಜಾವೇದ್​ ಅವರ ಖ್ಯಾತಿ ದುಪ್ಪಟ್ಟಾಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ