AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹುಟ್ಟುಹಬ್ಬಕ್ಕೆ ಸರ್ಪ್ರೈಸ್​ ನೀಡಿದ ಬಿಗ್​ ಬಾಸ್​ ಒಟಿಟಿ ಸ್ಪರ್ಧಿಗಳು; ಪ್ರೀತಿಗೆ ಕರಗಿದ ಕಿಚ್ಚ

Kichcha Sudeep Birthday: ಕಿಚ್ಚ ಸುದೀಪ್​ ಅವರ ಪಾಲಿಗೆ ‘ಬಿಗ್​ ಬಾಸ್​’ ವೇದಿಕೆ ತುಂಬ ಸ್ಪೆಷಲ್​. ಆ ವಿಶೇಷ ವೇದಿಕೆಯಲ್ಲಿ ಅವರಿಗೆ ಬರ್ತ್​ಡೇ ಶುಭಾಶಯ ತಿಳಿಸಲಾಗಿದೆ.

ಸುದೀಪ್​ ಹುಟ್ಟುಹಬ್ಬಕ್ಕೆ ಸರ್ಪ್ರೈಸ್​ ನೀಡಿದ ಬಿಗ್​ ಬಾಸ್​ ಒಟಿಟಿ ಸ್ಪರ್ಧಿಗಳು; ಪ್ರೀತಿಗೆ ಕರಗಿದ ಕಿಚ್ಚ
ಬಿಗ್ ಬಾಸ್ ಕನ್ನಡ ಒಟಿಟಿ
TV9 Web
| Edited By: |

Updated on:Sep 03, 2022 | 7:32 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆ ದೊಡ್ಡ ಅಭಿಮಾನಿ ಬಳಗಕ್ಕೆ ಸೆಪ್ಟೆಂಬರ್​ 2ರ ದಿನಾಂಕ ಎಂದರೆ ಹಬ್ಬಕ್ಕೆ ಸಮ. ಯಾಕೆಂದರೆ ಅಂದು ಸುದೀಪ್​ ಜನ್ಮದಿನ (Kichcha Sudeep Birthday). ಹೌದು, ಈ ದಿನವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲೂ ಈ ಸಡಗರದ ವಾತಾವರಣ ನಿರ್ಮಾಣ ಆಗಿದೆ. ಬರ್ತ್​ಡೇ ಮರುದಿನವೇ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss OTT Kannada) ವೀಕೆಂಡ್​ ಎಪಿಸೋಡ್​ ನಡೆಸಿಕೊಟ್ಟಿದ್ದಾರೆ. ಈ ವೇಳೆ ಎಲ್ಲ ಸ್ಪರ್ಧಿಗಳು ಸುದೀಪ್​ಗೆ ಸ್ಪೆಷಲ್​ ಆಗಿ ವಿಶ್​ ಮಾಡಿದ್ದಾರೆ. ಸ್ಪರ್ಧಿಗಳು ನೀಡಿದ ಈ ಸರ್ಪ್ರೈಸ್​ ನೋಡಿ ಕಿಚ್ಚನಿಗೆ ಖುಷಿ ಆಗಿದೆ. ಈ ಸಂಭ್ರಮದ ಮೂಲಕವೇ ವೀಕೆಂಡ್​ ಸಂಚಿಕೆ ಆರಂಭ ಆಗಿದೆ.

ಕನ್ನಡ ಬಿಗ್​ ಬಾಸ್​ ಮೊದಲ ಸೀಸನ್​ನಿಂದಲೂ ಸುದೀಪ್​ ಅವರೇ ನಿರೂಪಣೆ ಮಾಡುತ್ತ ಬಂದಿದ್ದಾರೆ. ಈ ಶೋನಲ್ಲಿ ವಿವಾದಾತ್ಮಕ ಸ್ಪರ್ಧಿಗಳು ಕೂಡ ಭಾಗವಹಿಸುತ್ತಾರೆ. ಎಂಥದ್ದೇ ಪರಿಸ್ಥಿತಿ ಬಂದರೂ ಸುದೀಪ್​ ಅವರು ಚೆನ್ನಾಗಿ ನಿಭಾಯಿಸುತ್ತಾರೆ. ಆ ಕಾರಣಕ್ಕೆ ಅವರನ್ನು ಪ್ರೇಕ್ಷಕರು ಇಷ್ಟಪಡುತ್ತಾರೆ. ಇನ್ನು, ಬಿಗ್​ ಬಾಸ್​ ಶೋ ಬಗ್ಗೆ ಸುದೀಪ್​ ಅವರಿಗೆ ವಿಶೇಷ ಪ್ರೀತಿ ಇದೆ. ತುಂಬ ಕಾಳಜಿಯಿಂದ ಅವರು ಈ ಶೋ ನಡೆಸಿಕೊಡುತ್ತಾರೆ.

ಬಿಗ್​ ಬಾಸ್​ ಆಟ ಮುಗಿದ ಬಳಿಕವೂ ಸ್ಪರ್ಧಿಗಳ ಜೊತೆ ಸುದೀಪ್​ ಸ್ನೇಹ ಮುಂದುವರಿಯುತ್ತದೆ. ಮಾಜಿ ಸ್ಪರ್ಧಿಗಳ ಸಿನಿಮಾ ಕರಿಯರ್​ಗೆ ಅವರು ಸದಾ ಬೆಂಬಲ ನೀಡುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಸುದೀಪ್ ಅವರಿಗೆ ಬಿಗ್​ ಬಾಸ್​ ಶೋ ತುಂಬ ಸ್ಪೆಷಲ್​. ಅಂಥ ವೇದಿಕೆಯಿಂದ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹರಿದುಬಂದಿದೆ. ಎಲ್ಲರೂ ಎದ್ದು ನಿಂತು ಕಿಚ್ಚನಿಗೆ ವಿಶ್​ ಮಾಡಿದ್ದಾರೆ. ಎಲ್ಲರ ಪ್ರೀತಿಗೆ ಸುದೀಪ್​ ತಲೆ ಬಾಗಿದ್ದಾರೆ.

ಇದನ್ನೂ ಓದಿ
Image
‘ಇನ್ಮುಂದೆ ಆರು ತಿಂಗಳಿಗೊಮ್ಮೆ ನನ್ನ ಸಿನಿಮಾ ರಿಲೀಸ್ ಆಗತ್ತೆ’; ಕಿಚ್ಚ ಸುದೀಪ್ ಘೋಷಣೆ
Image
Kichcha Sudeep: ‘ಬಾದ್​​ಶಾ’ ಸುದೀಪ್​ ಜನ್ಮದಿನಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ರಾಜಸ್ಥಾನ ರಾಯಲ್ಸ್
Image
ಸುದೀಪ್ ಬರ್ತ್​ಡೇ: ಮನೆ ಎದುರು ಫ್ಯಾನ್ಸ್ ಸಂಭ್ರಮಾಚರಣೆ ನೋಡಿ ಕೈ ಮುಗಿದು ಧನ್ಯವಾದ ಹೇಳಿದ ಕಿಚ್ಚ
Image
Kichcha Sudeep: ‘ಬಾದ್​​ಶಾ’ ಸುದೀಪ್​ಗೆ ಬರ್ತ್​ಡೇ ಸಂಭ್ರಮ; ಇಷ್ಟು ಯಂಗ್ ಆಗಿ ಕಾಣುವ ಕಿಚ್ಚನಿಗೆ ವಯಸ್ಸೆಷ್ಟು?

ಇಷ್ಟು ವರ್ಷಗಳ ಕಾಲ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ’ ಶೋ ನಡೆದುಕೊಂಡು ಬಂದಿತ್ತು. ಒಟ್ಟು 8 ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ. 9ನೇ ಸೀಸನ್​ ಆರಂಭಕ್ಕೂ ಮುನ್ನ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಶುರುವಾಗಿದೆ. ಇದು ಕನ್ನಡದ ಪ್ರೇಕ್ಷಕರಿಗೆ ಹೊಸದು. ವೂಟ್​ ಸೆಲೆಕ್ಟ್​ ಮೂಲಕ ಈ ಶೋ ಪ್ರಸಾರ ಆಗುತ್ತಿದ್ದು, ಅಂತಿಮ ಘಟ್ಟ ತಲುಪುತ್ತಿದೆ. ಆರು ವಾರದ ಈ ಶೋನಲ್ಲಿ ಭಾಗವಹಿಸಿದ ಕೆಲವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಎಂಟ್ರಿ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:32 pm, Sat, 3 September 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ