AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ

Bigg Boss OTT Kannada Nomination: 16 ಸ್ಪರ್ಧಿಗಳ ಪೈಕಿ ಸೋನು ಗೌಡ ಸೇರಿದಂತೆ ಒಟ್ಟು 8 ಜನರನ್ನು ನಾಮಿನೇಟ್​ ಮಾಡಲಾಗಿದೆ.​ ಮೊದಲ ವಾರ ಯಾರು ಬಿಗ್​ ಬಾಸ್​ ಮನೆಯಿಂದ ಹೊರಬರುತ್ತಾರೆ ಎಂಬ ಕೌತುಕ ಮೂಡಿದೆ.

Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ
ಸೋನು ಶ್ರೀನಿವಾಸ್ ಗೌಡ
Follow us
TV9 Web
| Updated By: ಮದನ್​ ಕುಮಾರ್​

Updated on: Aug 07, 2022 | 5:39 PM

ಶುರುವಿನಲ್ಲೇ ಅನೇಕ ಟ್ವಿಸ್ಟ್​ಗಳನ್ನು ಪಡೆದುಕೊಳ್ಳುತ್ತ ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಮೊದಲ ಸೀಸನ್​ ಸಾಗುತ್ತಿದೆ. ಸ್ಪರ್ಧಿಗಳು ದೊಡ್ಮನೆಗೆ ಕಾಲಿಟ್ಟು ಕೆಲವೇ ಗಂಟೆಗಳು ಕಳೆಯುತ್ತಿದ್ದಂತೆಯೇ ನಾಮಿನೇಷನ್​ ಪ್ರಕ್ರಿಯೆ ಶುರುವಾಗಿದೆ. ಮೊದಲ ವಾರ ಯಾರು ಹೊರಗೆ ಹೋಗಬೇಕು ಎಂಬ ಚರ್ಚೆ ಆರಂಭ ಆಗಿದೆ. ವಾಡಿಕೆಯಂತೆ ಸ್ಪರ್ಧಿಗಳೆಲ್ಲರೂ ಒಂದಷ್ಟು ಹೆಸರನ್ನು ಗೌಪ್ಯವಾಗಿ ಬಿಗ್​ ಬಾಸ್​ಗೆ ಸೂಚಿಸಿದ್ದಾರೆ. ಆ ಪೈಕಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಹೆಸರು ಕೂಡ ಇದೆ. ಹಾಗಾದರೆ ಅವರು ಮೊದಲ ವಾರವೇ ಬಿಗ್​ ಬಾಸ್​ ಮನೆಯಿಂದ ಹೊರ ನಡೆಯುತ್ತಾರಾ ಎಂಬ ಕೌತುಕ ಮೂಡಿದೆ. ಸೋನು ಆಯ್ಕೆ ಆಗಿರುವ ಬಗ್ಗೆ ನೆಟ್ಟಿಗರಿಗೆ ಅಸಮಾಧಾನ ಇದೆ. ಅವರು ಬೇಗ ಎಲಿಮಿನೇಟ್​ ಆಗಲಿ ಎಂದು ತುಂಬ ಜನರು ಕಮೆಂಟ್​ ಮಾಡುತ್ತಿದ್ದಾರೆ. ಈಗ ಅವರು ನಾಮಿನೇಟ್​ ಆಗಿರುವುದರಿಂದ ಬಿಗ್​ ಬಾಸ್​ (Bigg Boss) ಒಟಿಟಿ ಮೊದಲ ವಾರದ ಎಪಿಸೋಡ್​ಗಳು ಬಹಳ ಕುತೂಹಲ ಹುಟ್ಟುಹಾಕಿವೆ.

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು.

ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಕಡಿಮೆ ಸಮಯದಲ್ಲಿಯೇ ವೀಕ್ಷಕರಿಂದ ಹೆಚ್ಚ ವೋಟ್​ ಪಡೆಯಲು ಪ್ರಯತ್ನಿಸಬೇಕು.

ಇದನ್ನೂ ಓದಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು
Image
‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
Image
ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

ಕನ್ನಡದಲ್ಲಿ ಇದೇ ಮೊದಲ ಸಲ ‘ಬಿಗ್​ ಬಾಸ್​ ಒಟಿಟಿ’ ಶುರುವಾಗಿದೆ. ‘ವೂಟ್​ ಸೆಲೆಕ್ಟ್​’ ಮೂಲಕ ಈ ಶೋ ಪ್ರಸಾರ ಆಗುತ್ತಿದೆ. ಇದು ವೀಕ್ಷಕರಿಗೆ ಹೊಸ ಅನುಭವ ನೀಡುತ್ತಿದೆ. ಟಿವಿಗೆ ಹೋಲಿಸಿದರೆ ಇಲ್ಲಿ ಒಂದಷ್ಟು ಬದಲಾವಣೆಗಳು ಎದುರಾಗುವ ಸಾಧ್ಯತೆ ಇದೆ. ದಿನ 24 ಗಂಟೆಯೂ ಸ್ಪರ್ಧಿಗಳ ಚಟುವಟಿಕೆಯನ್ನು ವೀಕ್ಷಿಸಲು ‘ವೂಟ್​ ಸೆಲೆಕ್ಟ್​’ ಚಂದಾದಾರರಿಗೆ ಅವಕಾಶ ಇದೆ. ಪ್ರತಿದಿನ ಸಂಜೆ 7 ಗಂಟೆಗೆ ಹೈಲೈಟ್ಸ್​ ಎಪಿಸೋಡ್​ ಪ್ರಸಾರ ಆಗಲಿದೆ.

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ