AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ

Bigg Boss OTT Kannada Nomination: 16 ಸ್ಪರ್ಧಿಗಳ ಪೈಕಿ ಸೋನು ಗೌಡ ಸೇರಿದಂತೆ ಒಟ್ಟು 8 ಜನರನ್ನು ನಾಮಿನೇಟ್​ ಮಾಡಲಾಗಿದೆ.​ ಮೊದಲ ವಾರ ಯಾರು ಬಿಗ್​ ಬಾಸ್​ ಮನೆಯಿಂದ ಹೊರಬರುತ್ತಾರೆ ಎಂಬ ಕೌತುಕ ಮೂಡಿದೆ.

Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ
ಸೋನು ಶ್ರೀನಿವಾಸ್ ಗೌಡ
TV9 Web
| Edited By: |

Updated on: Aug 07, 2022 | 5:39 PM

Share

ಶುರುವಿನಲ್ಲೇ ಅನೇಕ ಟ್ವಿಸ್ಟ್​ಗಳನ್ನು ಪಡೆದುಕೊಳ್ಳುತ್ತ ‘ಬಿಗ್​ ಬಾಸ್​ ಕನ್ನಡ ಒಟಿಟಿ’ (Bigg Boss Kannada OTT) ಮೊದಲ ಸೀಸನ್​ ಸಾಗುತ್ತಿದೆ. ಸ್ಪರ್ಧಿಗಳು ದೊಡ್ಮನೆಗೆ ಕಾಲಿಟ್ಟು ಕೆಲವೇ ಗಂಟೆಗಳು ಕಳೆಯುತ್ತಿದ್ದಂತೆಯೇ ನಾಮಿನೇಷನ್​ ಪ್ರಕ್ರಿಯೆ ಶುರುವಾಗಿದೆ. ಮೊದಲ ವಾರ ಯಾರು ಹೊರಗೆ ಹೋಗಬೇಕು ಎಂಬ ಚರ್ಚೆ ಆರಂಭ ಆಗಿದೆ. ವಾಡಿಕೆಯಂತೆ ಸ್ಪರ್ಧಿಗಳೆಲ್ಲರೂ ಒಂದಷ್ಟು ಹೆಸರನ್ನು ಗೌಪ್ಯವಾಗಿ ಬಿಗ್​ ಬಾಸ್​ಗೆ ಸೂಚಿಸಿದ್ದಾರೆ. ಆ ಪೈಕಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಹೆಸರು ಕೂಡ ಇದೆ. ಹಾಗಾದರೆ ಅವರು ಮೊದಲ ವಾರವೇ ಬಿಗ್​ ಬಾಸ್​ ಮನೆಯಿಂದ ಹೊರ ನಡೆಯುತ್ತಾರಾ ಎಂಬ ಕೌತುಕ ಮೂಡಿದೆ. ಸೋನು ಆಯ್ಕೆ ಆಗಿರುವ ಬಗ್ಗೆ ನೆಟ್ಟಿಗರಿಗೆ ಅಸಮಾಧಾನ ಇದೆ. ಅವರು ಬೇಗ ಎಲಿಮಿನೇಟ್​ ಆಗಲಿ ಎಂದು ತುಂಬ ಜನರು ಕಮೆಂಟ್​ ಮಾಡುತ್ತಿದ್ದಾರೆ. ಈಗ ಅವರು ನಾಮಿನೇಟ್​ ಆಗಿರುವುದರಿಂದ ಬಿಗ್​ ಬಾಸ್​ (Bigg Boss) ಒಟಿಟಿ ಮೊದಲ ವಾರದ ಎಪಿಸೋಡ್​ಗಳು ಬಹಳ ಕುತೂಹಲ ಹುಟ್ಟುಹಾಕಿವೆ.

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು.

ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಕಡಿಮೆ ಸಮಯದಲ್ಲಿಯೇ ವೀಕ್ಷಕರಿಂದ ಹೆಚ್ಚ ವೋಟ್​ ಪಡೆಯಲು ಪ್ರಯತ್ನಿಸಬೇಕು.

ಇದನ್ನೂ ಓದಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ
Image
Bigg Boss OTT Kannada: ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ಕಣ್ಣೀರ ಕೋಡಿ; ನೋವು ತೋಡಿಕೊಂಡು ಗಳಗಳನೆ ಅತ್ತ ಸ್ಪರ್ಧಿಗಳು
Image
‘ನಾನು ಸ್ಮೋಕ್​ ಮಾಡ್ತೀನಿ, ಅದ್ರಲ್ಲಿ ತಪ್ಪೇನಿದೆ?’ ‘ಬಿಗ್​ ಬಾಸ್​​’ನಲ್ಲಿ ಸೋನು ಗೌಡ ನೇರ ಪ್ರಶ್ನೆ
Image
ಭಿಕ್ಷೆ ಬೇಡುತ್ತಿದ್ದ ಈ ವ್ಯಕ್ತಿ ಬಿಗ್​ ಬಾಸ್​​ಗೆ ಸ್ಪರ್ಧಿ; ಈ ಕಲಾವಿದನ ಬದುಕು ಎಷ್ಟು ಕಷ್ಟ ಇತ್ತು ಗೊತ್ತಾ?

ಕನ್ನಡದಲ್ಲಿ ಇದೇ ಮೊದಲ ಸಲ ‘ಬಿಗ್​ ಬಾಸ್​ ಒಟಿಟಿ’ ಶುರುವಾಗಿದೆ. ‘ವೂಟ್​ ಸೆಲೆಕ್ಟ್​’ ಮೂಲಕ ಈ ಶೋ ಪ್ರಸಾರ ಆಗುತ್ತಿದೆ. ಇದು ವೀಕ್ಷಕರಿಗೆ ಹೊಸ ಅನುಭವ ನೀಡುತ್ತಿದೆ. ಟಿವಿಗೆ ಹೋಲಿಸಿದರೆ ಇಲ್ಲಿ ಒಂದಷ್ಟು ಬದಲಾವಣೆಗಳು ಎದುರಾಗುವ ಸಾಧ್ಯತೆ ಇದೆ. ದಿನ 24 ಗಂಟೆಯೂ ಸ್ಪರ್ಧಿಗಳ ಚಟುವಟಿಕೆಯನ್ನು ವೀಕ್ಷಿಸಲು ‘ವೂಟ್​ ಸೆಲೆಕ್ಟ್​’ ಚಂದಾದಾರರಿಗೆ ಅವಕಾಶ ಇದೆ. ಪ್ರತಿದಿನ ಸಂಜೆ 7 ಗಂಟೆಗೆ ಹೈಲೈಟ್ಸ್​ ಎಪಿಸೋಡ್​ ಪ್ರಸಾರ ಆಗಲಿದೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು