AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​​ ಸಂಬಂಧಕ್ಕೆ ಮನೆಯವರ ಒಪ್ಪಿಗೆ? ಶಿಲ್ಪಾ ಶೆಟ್ಟಿ ತಾಯಿಯಿಂದ ಹೊಗಳಿಕೆ​

ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮಕ್ಕೆ ಕಾಲಿಟ್ಟ ದಿನದಿಂದಲೂ ಶಮಿತಾ ಶೆಟ್ಟಿ ಮತ್ತು ರಾಕೇಶ್​ ಬಾಪಟ್​ ಹೆಚ್ಚು ಆಪ್ತವಾಗಿದ್ದಾರೆ. ಇಬ್ಬರೂ ಒಂದೇ ವಯೋಮಾನದವರಾದ ಕಾರಣ ಹೆಚ್ಚು ಸಲುಗೆ ಬೆಳೆದಿದೆ.

ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​​ ಸಂಬಂಧಕ್ಕೆ ಮನೆಯವರ ಒಪ್ಪಿಗೆ? ಶಿಲ್ಪಾ ಶೆಟ್ಟಿ ತಾಯಿಯಿಂದ ಹೊಗಳಿಕೆ​
ಸುನಂದಾ ಶೆಟ್ಟಿ, ಶಮಿತಾ ಶೆಟ್ಟಿ, ರಾಕೇಶ್ ಬಾಪಟ್
TV9 Web
| Edited By: |

Updated on: Sep 14, 2021 | 4:06 PM

Share

ನಟಿ ಶಮಿತಾ ಶೆಟ್ಟಿ ಅವರಿಗೆ ಸಿನಿಮಾರಂಗದಲ್ಲಿ ಹೆಚ್ಚು ಮಿಂಚಲು ಸಾಧ್ಯವಾಗಲಿಲ್ಲ. ಆದರೆ ಅವರಿಗೆ ಬಿಗ್​ ಬಾಸ್​ ಓಟಿಟಿ ವೇದಿಕೆಯಲ್ಲಿ ಬಹಳ ಜನಪ್ರಿಯತೆ ಸಿಗುತ್ತಿದೆ. ಅವರ ಭಾವ, ಅಂದರೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯ ಆರೋಪದಲ್ಲಿ ಜೈಲು ಸೇರಿದ್ದಾರೆ. ಈ ಸಂದರ್ಭದಲ್ಲಿ ಅವರ ಇಡೀ ಫ್ಯಾಮಿಲಿ ಬೇರೆ ಬೇರೆ ಕೆಲಸಗಳತ್ತ ಗಮನ ಹರಿಸಿದೆ. ಆ ಮೂಲಕ ನೆಗೆಟಿವ್​ ವಿಚಾರವನ್ನು ಮೆಟ್ಟಿ ನಿಲ್ಲಲು ಪ್ರಯತ್ನಿಸುತ್ತಿದ್ದಾರೆ. ಶಮಿತಾ ಶೆಟ್ಟಿ ಅವರಂತೂ ಬಿಗ್​ ಬಾಸ್​ ಓಟಿಟಿಯಲ್ಲಿ ರಾಕೇಶ್​ ಬಾಪಟ್​ ಜೊತೆಗಿನ ಆಪ್ತತೆಯ ಕಾರಣಕ್ಕೆ ಹೆಚ್ಚು ಸುದ್ದಿ ಮಾಡುತ್ತಿದ್ದಾರೆ. ಅವರಿಬ್ಬರ ಸಂಬಂಧಕ್ಕೆ ಶಮಿತಾ ತಾಯಿ ಕಡೆಯಿಂದ ಗ್ರೀನ್​ ಸಿಗ್ನಲ್​ ಕೂಡ ಸಿಕ್ಕಿದೆ.

ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮಕ್ಕೆ ಕಾಲಿಟ್ಟ ದಿನದಿಂದಲೂ ಶಮಿತಾ ಶೆಟ್ಟಿ ಮತ್ತು ರಾಕೇಶ್​ ಬಾಪಟ್​ ಹೆಚ್ಚು ಆಪ್ತವಾಗಿದ್ದಾರೆ. ಇಬ್ಬರೂ ಒಂದೇ ವಯೋಮಾನದವರಾದ ಕಾರಣ ಹೆಚ್ಚು ಸಲುಗೆ ಬೆಳೆದಿದೆ. ಅಲ್ಲದೇ, ಪರಸ್ಪರ ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಅವರಿಬ್ಬರು ಮದುವೆ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಕೆಲವರು ಅಭಿಪ್ರಾಯ ಪಡುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಶಮಿತಾಗೆ ಹಲವು ಬಾರಿ ರಾಕೇಶ್​ ಕಿಸ್​ ಮಾಡಿದ ಬಳಿಕವಂತೂ ಈ ವಿಚಾರ ಇನ್ನಷ್ಟು ಪುಷ್ಠಿ ಪಡೆದುಕೊಂಡಿದೆ.

ಇತ್ತೀಚೆಗೆ ಬಿಗ್​ ಬಾಸ್​ ಮನೆಗೆ ಶಮಿತಾ ಶೆಟ್ಟಿಯವರ ತಾಯಿ ಸುನಂದಾ ಶೆಟ್ಟಿ ಭೇಟಿ ನೀಡಿದ್ದರು. ಮಗಳ ಪರ್ಫಾಮೆನ್ಸ್​ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದರು. ಅಲ್ಲದೇ ಈ ವೇಳೆ ರಾಕೇಶ್​ ಬಾಪಟ್​​ ಬಗ್ಗೆಯೂ ಪ್ರಶ್ನೆ ಎದುರಾಯಿತು. ‘ಎಂತಹ ಒಳ್ಳೆಯ ಮನುಷ್ಯ. ಆತ ಒಬ್ಬ ಜಂಟಲ್​ಮ್ಯಾನ್​’ ಎಂದು ಹೇಳುವ ಮೂಲಕ ರಾಕೇಶ್​ ಬಾಪಟ್​ಗೆ ಸುನಂದಾ ಶೆಟ್ಟಿ ಫುಲ್​ ಮಾರ್ಕ್ಸ್​ ನೀಡಿದರು. ಹಾಗಾಗಿ ಶಮಿತಾ-ರಾಕೇಶ್​ ಸಂಬಂಧಕ್ಕೆ ಮನೆಯವರ ಒಪ್ಪಿಗೆ ಇದೆ ಎಂಬುದು ಬಹುತೇಕ ಖಚಿತ ಆದಂತಾಗಿದೆ.

ಅಕ್ಕನ ಬಗ್ಗೆ ಕೂಡ ಶಮಿತಾ ವಿಚಾರಿಸಿದರು. ಮನೆಯಲ್ಲಿ ವಾತಾವರಣ ಹೇಗಿದೆ ಎಂಬ ಬಗ್ಗೆ ಸುನಂದಾ ವರದಿ ನೀಡಿದರು. ‘ಶಿಲ್ಪಾ ಚೆನ್ನಾಗಿದ್ದಾಳೆ. ಆಕೆ ನಿನ್ನನ್ನು ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದಾಳೆ. ನಿನ್ನ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇದೆ. ಶಿಲ್ಪಾ ಬ್ಯುಸಿ ಆಗಿದ್ದರೂ ಕೂಡ ನನ್ನ ಬಳಿ ಕೇಳಿ ನಿನ್ನ ಬಗ್ಗೆ ಅಪ್​ಡೇಟ್​ ತಿಳಿದುಕೊಳ್ಳುತ್ತಾಳೆ. ನಾವು ಮೂವರು ಈ ಕುಟುಂಬದ ಗಟ್ಟಿ ಮಹಿಳೆಯರು’ ಎಂದು ಸುನಂದಾ ಧೈರ್ಯ ತುಂಬಿದ್ದಾರೆ. ಇದರಿಂದಾಗಿ ಶಮಿತಾಗೆ ಬಲ ಸಿಕ್ಕಂತಾಗಿದೆ.

ಇದನ್ನೂ ಓದಿ:

ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ

‘ಅನುಭವ ಪಡೆಯೋಕೆ ಬಂದಿದೀನಿ’; ಶಮಿತಾ ಶೆಟ್ಟಿ ಎದುರು ಸತ್ಯ ಒಪ್ಪಿಕೊಂಡ ರಾಕೇಶ್​ ಬಾಪಟ್​

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ