AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಡೈಪರ್​ ಹಾಕ್ಕೋ’; ಪುರುಷ ಸ್ಪರ್ಧಿಗೆ ಖಡಕ್​ ಆದೇಶ ನೀಡಿದ ಶಮಿತಾ ಶೆಟ್ಟಿ

ಒಬ್ಬರು ಮಾಡುವ ತಪ್ಪಿನಿಂದಾಗಿ ಅದೇ ತಂಡದ ಇನ್ನೊಬ್ಬರು ಸೋಲಬೇಕಾಗುತ್ತದೆ. ಶಮಿತಾ ಶೆಟ್ಟಿಗೆ ಇತ್ತೀಚೆಗಿನ ಟಾಸ್ಕ್​ನಲ್ಲಿ ಹೀಗೆಯೇ ಆಗಿದೆ. ಅದರಿಂದ ಅವರು ಕೋಪಗೊಂಡಿದ್ದಾರೆ.

‘ನೀನು ಡೈಪರ್​ ಹಾಕ್ಕೋ’; ಪುರುಷ ಸ್ಪರ್ಧಿಗೆ ಖಡಕ್​ ಆದೇಶ ನೀಡಿದ ಶಮಿತಾ ಶೆಟ್ಟಿ
ರಾಕೇಶ್​ ಬಾಟಪ್, ಶಮಿತಾ ಶೆಟ್ಟಿ
TV9 Web
| Edited By: |

Updated on: Aug 20, 2021 | 4:33 PM

Share

ಇದೇ ಮೊದಲ ಬಾರಿಗೆ ‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮ ನಡೆಯುತ್ತಿದ್ದು, ಇದರ ರೀತಿ-ನೀತಿ ಬೇರೆಯೇ ಆಗಿದೆ. ಖ್ಯಾತ ನಿರ್ಮಾಪಕ ಕರಣ್​ ಜೋಹರ್​ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮಾತ್ರವಲ್ಲದೆ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹತ್ತು ಹಲವು ಕಾರಣಗಳಿಂದಾಗಿ ಅವರು ದೊಡ್ಮನೆಯಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಇತ್ತೀಚೆಗೆ ಅವರು ಪುರುಷ ಸ್ಪರ್ಧಿಯೊಬ್ಬರಿಗೆ ಖಡಕ್​ ಆದೇಶ ನೀಡಿದ್ದಾರೆ. ‘ನೀನು ಡೈಪರ್​ ಹಾಕ್ಕೋ’ ಎಂದು ನೇರವಾಗಿ ಹೇಳಿದ್ದಾರೆ. ಏನಿದು ಘಟನೆ? ಇಲ್ಲಿದೆ ವಿವರ.

ಬಿಗ್ ಬಾಸ್​ ಓಟಿಟಿ ಕಾರ್ಯಕ್ರಮವನ್ನು ಶಮಿತಾ ಶೆಟ್ಟಿ ತುಂಬ ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗಾಗಿ ಅವರು ಎಲ್ಲ ಟಾಸ್ಕ್​ನಲ್ಲಿಯೂ ಆ್ಯಕ್ಟೀವ್​ ಆಗಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮ ಬಗ್ಗೆ ಯಾರಾದರೂ ಇಲ್ಲಸಲ್ಲದ ಆರೋಪ ಮಾಡಲು ಬಂದರೆ ನೇರವಾಗಿ ಜಗಳಕ್ಕೆ ಇಳಿಯುತ್ತಿದ್ದಾರೆ. ಇದೆಲ್ಲದರ ನಡುವೆ ತಮ್ಮ ಟೀಮ್​ನವರ ಕಾರಣದಿಂದ ಟಾಸ್ಕ್​ನಲ್ಲಿ ಹಿನ್ನಡೆ ಉಂಟಾದರೆ ಅವರು ಅದನ್ನು ಕಿಂಚಿತ್ತೂ ಸಹಿಸುತ್ತಿಲ್ಲ. ಇದೇ ವಿಚಾರವಾಗಿ ಅವರು ಸಹ-ಸ್ಪರ್ಧಿ ರಾಕೇಶ್​ ಬಾಪಟ್​ಗೆ ಎಚ್ಚರಿಕೆ ನೀಡಿದ್ದಾರೆ. ಆ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ವೈಯಕ್ತಿಕ ಟಾಸ್ಕ್​ ಮಾತ್ರವಲ್ಲದೇ ಕೆಲವು ಸಲ ಎರಡು ಟೀಮ್​ಗಳ ನಡುವೆ ಪೈಪೋಟಿ ಬೀಳುತ್ತದೆ. ಆಗ ಒಬ್ಬರು ಮಾಡುವ ತಪ್ಪಿನಿಂದಾಗಿ ಅದೇ ತಂಡದ ಇನ್ನೊಬ್ಬರು ಸೋಲಬೇಕಾಗುತ್ತದೆ. ಶಮಿತಾ ಶೆಟ್ಟಿಗೆ ಇತ್ತೀಚೆಗಿನ ಟಾಸ್ಕ್​ನಲ್ಲಿ ಹೀಗೆಯೇ ಆಗಿದೆ. ಟಾಸ್ಕ್​ ಮಧ್ಯೆ ರಾಕೇಶ್ ಬಾಪಟ್​ ಅವರು ಪದೇಪದೇ ಶೌಚಾಲಯಕ್ಕೆ ಹೋಗಿ ಬಂದಿರುವುದನ್ನು ಶಮಿತಾ ವಿರೋಧಿಸಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಾಗ ಅವರು ಕೊಂಚ ಖಾರವಾಗಿಯೇ ಮಾತನಾಡಿದ್ದಾರೆ.

‘ನನ್ನ ಮತ್ತು ನಿನ್ನ ನಡುವೆ ಕಮ್ಯೂನಿಕೇಷನ್​ ಗ್ಯಾಪ್​ ಇದೆ. ಟಾಸ್ಕ್​ ಮಧ್ಯೆದಲ್ಲಿ ನೀನು ಶೌಚಾಲಯಕ್ಕೆ ಹೋದರೆ ಹುಷಾರ್​! ನೀನು ಇಲ್ಲಿಗೆ ಯಾಕೆ ಬಂದಿದ್ದೀಯಾ? ಊಟ-ನಿದ್ರೆ ಮಾಡಿ, ಶೌಚಾಲಯಕ್ಕೆ ಹೋಗುತ್ತ ಟೈಮ್​ ಪಾಸ್​ ಮಾಡೋಕಾ? ಎಲ್ಲವನ್ನೂ ಕಂಟ್ರೋಲ್​ ಮಾಡಿಕೋ ಅಥವಾ ಡೈಪರ್​ ಬೇಕಾದ್ರೆ ಹಾಕ್ಕೋ. ಐ ಡೋಂಟ್​​ ಕೇರ್​’ ಎಂದು ಶಮಿತಾ ಕೂಗಾಡಿದ್ದಾರೆ. ‘ಡೈಪರ್​ ಇದ್ದಿದ್ದರೆ ನಾನು ಖಂಡಿತಾ ಧರಿಸುತ್ತಿದ್ದೆ. ಬಿಗ್​ ಬಾಸ್​ ನನಗೆ ದಯವಿಟ್ಟು ಡೈಪರ್​ ಕಳಿಸಿಕೊಡಿ’ ಎಂದು ರಾಕೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ