‘ನೀನು ಡೈಪರ್​ ಹಾಕ್ಕೋ’; ಪುರುಷ ಸ್ಪರ್ಧಿಗೆ ಖಡಕ್​ ಆದೇಶ ನೀಡಿದ ಶಮಿತಾ ಶೆಟ್ಟಿ

ಒಬ್ಬರು ಮಾಡುವ ತಪ್ಪಿನಿಂದಾಗಿ ಅದೇ ತಂಡದ ಇನ್ನೊಬ್ಬರು ಸೋಲಬೇಕಾಗುತ್ತದೆ. ಶಮಿತಾ ಶೆಟ್ಟಿಗೆ ಇತ್ತೀಚೆಗಿನ ಟಾಸ್ಕ್​ನಲ್ಲಿ ಹೀಗೆಯೇ ಆಗಿದೆ. ಅದರಿಂದ ಅವರು ಕೋಪಗೊಂಡಿದ್ದಾರೆ.

‘ನೀನು ಡೈಪರ್​ ಹಾಕ್ಕೋ’; ಪುರುಷ ಸ್ಪರ್ಧಿಗೆ ಖಡಕ್​ ಆದೇಶ ನೀಡಿದ ಶಮಿತಾ ಶೆಟ್ಟಿ
ರಾಕೇಶ್​ ಬಾಟಪ್, ಶಮಿತಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: Aug 20, 2021 | 4:33 PM

ಇದೇ ಮೊದಲ ಬಾರಿಗೆ ‘ಬಿಗ್​ ಬಾಸ್​ ಓಟಿಟಿ’ ಕಾರ್ಯಕ್ರಮ ನಡೆಯುತ್ತಿದ್ದು, ಇದರ ರೀತಿ-ನೀತಿ ಬೇರೆಯೇ ಆಗಿದೆ. ಖ್ಯಾತ ನಿರ್ಮಾಪಕ ಕರಣ್​ ಜೋಹರ್​ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮಾತ್ರವಲ್ಲದೆ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹತ್ತು ಹಲವು ಕಾರಣಗಳಿಂದಾಗಿ ಅವರು ದೊಡ್ಮನೆಯಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಇತ್ತೀಚೆಗೆ ಅವರು ಪುರುಷ ಸ್ಪರ್ಧಿಯೊಬ್ಬರಿಗೆ ಖಡಕ್​ ಆದೇಶ ನೀಡಿದ್ದಾರೆ. ‘ನೀನು ಡೈಪರ್​ ಹಾಕ್ಕೋ’ ಎಂದು ನೇರವಾಗಿ ಹೇಳಿದ್ದಾರೆ. ಏನಿದು ಘಟನೆ? ಇಲ್ಲಿದೆ ವಿವರ.

ಬಿಗ್ ಬಾಸ್​ ಓಟಿಟಿ ಕಾರ್ಯಕ್ರಮವನ್ನು ಶಮಿತಾ ಶೆಟ್ಟಿ ತುಂಬ ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗಾಗಿ ಅವರು ಎಲ್ಲ ಟಾಸ್ಕ್​ನಲ್ಲಿಯೂ ಆ್ಯಕ್ಟೀವ್​ ಆಗಿ ಪಾಲ್ಗೊಳ್ಳುತ್ತಿದ್ದಾರೆ. ತಮ್ಮ ಬಗ್ಗೆ ಯಾರಾದರೂ ಇಲ್ಲಸಲ್ಲದ ಆರೋಪ ಮಾಡಲು ಬಂದರೆ ನೇರವಾಗಿ ಜಗಳಕ್ಕೆ ಇಳಿಯುತ್ತಿದ್ದಾರೆ. ಇದೆಲ್ಲದರ ನಡುವೆ ತಮ್ಮ ಟೀಮ್​ನವರ ಕಾರಣದಿಂದ ಟಾಸ್ಕ್​ನಲ್ಲಿ ಹಿನ್ನಡೆ ಉಂಟಾದರೆ ಅವರು ಅದನ್ನು ಕಿಂಚಿತ್ತೂ ಸಹಿಸುತ್ತಿಲ್ಲ. ಇದೇ ವಿಚಾರವಾಗಿ ಅವರು ಸಹ-ಸ್ಪರ್ಧಿ ರಾಕೇಶ್​ ಬಾಪಟ್​ಗೆ ಎಚ್ಚರಿಕೆ ನೀಡಿದ್ದಾರೆ. ಆ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ವೈಯಕ್ತಿಕ ಟಾಸ್ಕ್​ ಮಾತ್ರವಲ್ಲದೇ ಕೆಲವು ಸಲ ಎರಡು ಟೀಮ್​ಗಳ ನಡುವೆ ಪೈಪೋಟಿ ಬೀಳುತ್ತದೆ. ಆಗ ಒಬ್ಬರು ಮಾಡುವ ತಪ್ಪಿನಿಂದಾಗಿ ಅದೇ ತಂಡದ ಇನ್ನೊಬ್ಬರು ಸೋಲಬೇಕಾಗುತ್ತದೆ. ಶಮಿತಾ ಶೆಟ್ಟಿಗೆ ಇತ್ತೀಚೆಗಿನ ಟಾಸ್ಕ್​ನಲ್ಲಿ ಹೀಗೆಯೇ ಆಗಿದೆ. ಟಾಸ್ಕ್​ ಮಧ್ಯೆ ರಾಕೇಶ್ ಬಾಪಟ್​ ಅವರು ಪದೇಪದೇ ಶೌಚಾಲಯಕ್ಕೆ ಹೋಗಿ ಬಂದಿರುವುದನ್ನು ಶಮಿತಾ ವಿರೋಧಿಸಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಾಗ ಅವರು ಕೊಂಚ ಖಾರವಾಗಿಯೇ ಮಾತನಾಡಿದ್ದಾರೆ.

‘ನನ್ನ ಮತ್ತು ನಿನ್ನ ನಡುವೆ ಕಮ್ಯೂನಿಕೇಷನ್​ ಗ್ಯಾಪ್​ ಇದೆ. ಟಾಸ್ಕ್​ ಮಧ್ಯೆದಲ್ಲಿ ನೀನು ಶೌಚಾಲಯಕ್ಕೆ ಹೋದರೆ ಹುಷಾರ್​! ನೀನು ಇಲ್ಲಿಗೆ ಯಾಕೆ ಬಂದಿದ್ದೀಯಾ? ಊಟ-ನಿದ್ರೆ ಮಾಡಿ, ಶೌಚಾಲಯಕ್ಕೆ ಹೋಗುತ್ತ ಟೈಮ್​ ಪಾಸ್​ ಮಾಡೋಕಾ? ಎಲ್ಲವನ್ನೂ ಕಂಟ್ರೋಲ್​ ಮಾಡಿಕೋ ಅಥವಾ ಡೈಪರ್​ ಬೇಕಾದ್ರೆ ಹಾಕ್ಕೋ. ಐ ಡೋಂಟ್​​ ಕೇರ್​’ ಎಂದು ಶಮಿತಾ ಕೂಗಾಡಿದ್ದಾರೆ. ‘ಡೈಪರ್​ ಇದ್ದಿದ್ದರೆ ನಾನು ಖಂಡಿತಾ ಧರಿಸುತ್ತಿದ್ದೆ. ಬಿಗ್​ ಬಾಸ್​ ನನಗೆ ದಯವಿಟ್ಟು ಡೈಪರ್​ ಕಳಿಸಿಕೊಡಿ’ ಎಂದು ರಾಕೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್