ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

Shamita Shetty: ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮದ ವೀಕೆಂಡ್​ ಎಪಿಸೋಡ್​ನಲ್ಲಿ ಶಮಿತಾ ಶೆಟ್ಟಿ ಅವರು ತಮ್ಮ ನೋವು ತೋಡಿಕೊಂಡಿದ್ದಾರೆ. ಶಿಲ್ಪಾ ಶೆಟ್ಟಿಯ ತಂಗಿ ಎಂಬ ಕಾರಣಕ್ಕೆ ತಮಗಾದ ಹಿಂಸೆಯನ್ನು ಅವರು ವಿವರಿಸಿದ್ದಾರೆ.

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ
ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: Aug 17, 2021 | 12:04 PM

ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರು ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆಯೇ ಅವರ ನಾದಿನಿ ಶಮಿತಾ ಶೆಟ್ಟಿ (Shamita Shetty) ಅವರು ವಿಪರೀತ ಟ್ರೋಲ್​ಗೆ ಒಳಗಾಗುತ್ತಿದ್ದಾರೆ. ಶಿಲ್ಪಾ ಶೆಟ್ಟಿ (Shilpa Shetty) ಬಗ್ಗೆಯೂ ನೆಟ್ಟಿಗರಿಂದ ಕಟು ಟೀಕೆ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ಶಮಿತಾ ಶೆಟ್ಟಿ ಅವರು ಬಿಗ್​ ಬಾಸ್​ ಓಟಿಟಿ (Bigg Boss OTT) ಶೋನಲ್ಲಿ ಸ್ಪರ್ಧಿಸುತ್ತಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ. ಪ್ರತಿ ಎಪಿಸೋಡ್​ನಲ್ಲಿಯೂ ಶಮಿತಾ ಶೆಟ್ಟಿ ಒಂದಿಲ್ಲೊಂದು ಕಾರಣಕ್ಕೆ ಶೈನ್​ ಆಗುತ್ತಿದ್ದಾರೆ. ತಮ್ಮ ಬದುಕಿನ ಹಲವು ವಿವರಗಳನ್ನು ಜನರ ಮುಂದೆ ತೆರೆದಿಡುತ್ತ, ಅವರು ಕರುಣೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. 

ಬಾಲಿವುಡ್​ನಲ್ಲಿ ಶಿಲ್ಪಾ ಶೆಟ್ಟಿ ಮಾಡಿರುವ ಸಾಧನೆ ದೊಡ್ಡದು. ಶಮಿತಾ ಶೆಟ್ಟಿ ಸಹ ಒಂದಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿದ್ದರೂ ಕೂಡ ಅಕ್ಕನಷ್ಟು ಯಶಸ್ಸು ಪಡೆಯಲು ಅವರಿಗೆ ಸಾಧ್ಯವಾಗಲಿಲ್ಲ. ಆ ಕಾರಣಕ್ಕಾಗಿ ಅವರಿಗೆ ಸ್ವಂತ ಗುರುತು ಸಿಗಲೇ ಇಲ್ಲ. ಅದು ಶಮಿತಾಗೆ ಪ್ರತಿದಿನ ಕಾಡುತ್ತಿದೆ. ಆ ವಿಚಾರವನ್ನು ಹೇಳಿಕೊಂಡು ಬಿಗ್​ ಬಾಸ್​ ಮನೆಯಲ್ಲಿ ಅವರು ಗಳಗಳನೆ ಅತ್ತಿದ್ದಾರೆ.

ತಾವು ಇಂದಿಗೂ ಶಿಲ್ಪಾ ಶೆಟ್ಟಿಯ ನೆರಳಿನಲ್ಲಿ ಬದುಕುತ್ತಿರುವುದಕ್ಕೆ ಶಮಿತಾ ಶೆಟ್ಟಿಗೆ ಸಖತ್​ ನೋವಿದೆ. ಈ ವೀಕೆಂಡ್​ ಎಪಿಸೋಡ್​ನಲ್ಲಿ ಅವರು ಆ ನೋವನ್ನು ತೋಡಿಕೊಂಡಿದ್ದಾರೆ. ಶಿಲ್ಪಾ ಶೆಟ್ಟಿಯ ತಂಗಿ ಎಂದೇ ಜನರು ಅವರನ್ನು ಗುರುತಿಸುತ್ತಾರೆ. ಅದರಿಂದ ಹೊರಬರಬೇಕು ಎಂದು ಶಮಿತಾ ಸಿಕ್ಕಾಪಟ್ಟೆ ಕಷ್ಟ ಪಟ್ಟಿದ್ದಾರೆ. ಈಗ ತಮ್ಮತನವನ್ನು ತೋರಿಸಲು ಬಿಗ್​ ಬಾಸ್​ ಮನೆಗೆ ಕಾಲಿಟ್ಟಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ನೆರಳಿನಲ್ಲಿ ತಾವು ಇರುವುದು ಕಷ್ಟಕರವೇ ಹೌದಾದರೂ ಅದು ತಮ್ಮನ್ನು ರಕ್ಷಿಸುತ್ತಿದೆ ಎಂಬ ಸತ್ಯವನ್ನೂ ಶಮಿತಾ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ತಾವು ಲಕ್ಕಿ ಎಂದೂ ಅವರು ಹೇಳಿದ್ದಾರೆ. ಬಿಗ್​ ಬಾಸ್​ ಓಟಿಟಿ ಕಾರ್ಯಕ್ರಮವನ್ನು ಖ್ಯಾತ ನಿರ್ಮಾಪಕ ನಿರ್ದೇಶಕ ಕರಣ್​ ಜೋಹರ್​ ನಿರೂಪಿಸುತ್ತಿದ್ದಾರೆ. ಶಮಿತಾ ಚೆನ್ನಾಗಿ ಆಟ ಆಡುತ್ತಿರುವುದಕ್ಕೆ ಕರಣ್​ ಮೆಚ್ಚುಗೆ ಸೂಚಿಸಿದ್ದಾರೆ.

ನೇಹಾ ಭಾಸಿನ್​, ರಿಧಿಕಾ ಪಂಡಿತ್​, ನಿಶಾಂತ್​ ಭಟ್​, ದಿವ್ಯಾ ಅಗರ್​ವಾಲ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಣಾಹಣಿ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ಬಿಗ್​ಬಾಸ್​ನಲ್ಲಿ ಸ್ಪರ್ಧಿಗಳ ಸಂಭಾವನೆ ಎಷ್ಟು?; ಶಮಿತಾ ಶೆಟ್ಟಿಗಿಂತಲೂ ಹೆಚ್ಚು ಸಂಭಾವನೆ ಪಡೀತಾರೆ ಈ ನಟಿ

ಕೈಯಲ್ಲಿ ಸಿನಿಮಾಗಳೇ ಇಲ್ಲದಿದ್ರೂ ರಾಜ್​ ಕುಂದ್ರಾ ನಾದಿನಿ ಶಮಿತಾ ಶೆಟ್ಟಿ 35 ಕೋಟಿ ಆಸ್ತಿಯ ಒಡತಿ; ಹೇಗೆ ಗೊತ್ತಾ?

ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು