AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಲ್ಟಾ-ಪಲ್ಟಾ ಆಯ್ತು ಸ್ಫೂರ್ತಿ ಗೌಡ ಲೆಕ್ಕಾಚಾರ; ಎಲ್ಲವನ್ನೂ ಬಿಟ್ಟು ಮನೆಗೆ ಹೋಗ್ತೀನಿ ಎಂದ ನಟಿ

‘ಬಿಗ್ ಬಾಸ್’ ಮನೆಯಲ್ಲಿ ಸಮಯ ಕಳೆಯುವುದು ಸುಲಭದ ಮಾತಲ್ಲ. ಈ ಜಗತ್ತು ತುಂಬಾನೇ ಭಿನ್ನ. ಕುಟುಂಬದಿಂದ ದೂರ ಇರಬೇಕು. ಈ ಕಾರಣದಿಂದ ದೊಡ್ಮನೆಯಲ್ಲಿ ಉಳಿಯೋಕೆ ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ.

ಉಲ್ಟಾ-ಪಲ್ಟಾ ಆಯ್ತು ಸ್ಫೂರ್ತಿ ಗೌಡ ಲೆಕ್ಕಾಚಾರ; ಎಲ್ಲವನ್ನೂ ಬಿಟ್ಟು ಮನೆಗೆ ಹೋಗ್ತೀನಿ ಎಂದ ನಟಿ
ರಾಕೇಶ್​-ಸ್ಫೂರ್ತಿ
TV9 Web
| Edited By: |

Updated on: Aug 18, 2022 | 8:17 PM

Share

‘ಬಿಗ್ ಬಾಸ್ ಒಟಿಟಿ’ಯಲ್ಲಿ ಸ್ಫೂರ್ತಿ ಗೌಡ (Spoorthi Gowda) ಅವರು ಯಶಸ್ವಿಯಾಗಿ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಒಟಿಟಿಯಿಂದ ಯಾರು ಹೊರಹೋಗುತ್ತಾರೆ ಅನ್ನೋದು ಸದ್ಯದ ಕುತೂಹಲ. 9 ಸ್ಪರ್ಧಿಗಳ ಮೇಲೆ ನಾಮಿನೇಷನ್​ ತೂಗುಗತ್ತಿ ಇದೆ. ಸ್ಫೂರ್ತಿ ಗೌಡ ಅವರ ಮೇಲೂ ನಾಮಿನೇಷನ್ ತೂಗುಗತ್ತಿ ಇದೆ. ಈ ಮಧ್ಯೆ ಅವರ ಲೆಕ್ಕಾಚಾರ ಉಲ್ಟಾ-ಪಲ್ಟಾ ಆಗಿದೆ. ಈ ಕಾರಣದಿಂದ ಅವರು ಮನೆಯಿಂದ ಹೊರಹೋಗುವ ಆಲೋಚನೆಯಲ್ಲಿ ಇದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಸಮಯ ಕಳೆಯುವುದು ಸುಲಭದ ಮಾತಲ್ಲ. ಹೊರ ಜಗತ್ತಿಗೆ ಹೋಲಿಸಿದರೆ, ಈ ಜಗತ್ತು ತುಂಬಾನೇ ಭಿನ್ನ. ಇಲ್ಲಿ ಮೊಬೈಲ್​ ಬಳಕೆ ಮಾಡುವಂತಿಲ್ಲ. ಹೊರಗಿನ ಜಗತ್ತಿನ ಜತೆ ಸಂಪರ್ಕ ಇರುವುದಿಲ್ಲ. ಕುಟುಂಬದಿಂದ ದೂರ ಇರಬೇಕು. ಈ ಕಾರಣದಿಂದ ದೊಡ್ಮನೆಯಲ್ಲಿ ಉಳಿಯೋಕೆ ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ. ಸ್ಫೂರ್ತಿ ಗೌಡ ಕೂಡ ಬಿಗ್ ಬಾಸ್ ಮನೆಯಲ್ಲಿ ಕಷ್ಟ ಪಡುತ್ತಿದ್ದಾರೆ. ಅವರಿಗೆ ಮನೆ ಕಷ್ಟ ಎನಿಸಿದೆ.

ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಲ್ಲ. ಎಲ್ಲರೂ ನನ್ನನ್ನು ಕಳಪೆ ಎಂದು ಹೇಳಿದರೆ ನಾನು ಜೈಲಿಗೆ ಹೋಗಲ್ಲ’ ಎಂದರು. ಇದಕ್ಕೆ ಜಯಶ್ರೀ ಕೊಟ್ಟ ಉತ್ತರ ನೋಡಿ ಸ್ಫೂರ್ತಿ ಲೆಕ್ಕಾಚಾರ ತಲೆಕೆಳಗಾದಂತೆ ಆಯಿತು.

ಇದನ್ನೂ ಓದಿ
Image
‘ನಾನು ಸಖತ್ ಆಗಿ ಕಬಡ್ಡಿ ಆಡ್ತೀನಿ’ ಎಂದು ಬಿಗ್ ಬಾಸ್ ಮನೆಯಲ್ಲಿ ಗಾಯ ಮಾಡಿಕೊಂಡ ಸೋನು ಶ್ರೀನಿವಾಸ್ ಗೌಡ
Image
ಗರ್ಲ್​​ಫ್ರೆಂಡ್ ವಿಚಾರಕ್ಕೆ ಬಂದ ಸೋನು ಗೌಡ ವಿರುದ್ಧ ಸೇಡು ತೀರಿಸಿಕೊಂಡ ಜಶ್ವಂತ್
Image
‘ಪ್ಲೀಸ್ ದಯವಿಟ್ಟು ಬಿಟ್ಟುಬಿಡಿ’; ಮನೆಗೆ ಬಂದ ಅತಿಥಿ ಕಂಡು ಕಿರುಚಾಡಿದ ಸಾನ್ಯಾ ಅಯ್ಯರ್
Image
‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!

‘ಕಳಪೆ ಅನ್ನೋದು ಮನೆಯವರ ನಿರ್ಧಾರ. ಅದರಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ. ಕಳಪೆ ಎಂದು ಬಂದರೆ ಹೊರಗೆ ಕೂರೋಕೆ ಸಾಧ್ಯವಿಲ್ಲ’ ಎಂಬ ಉತ್ತರ ಜಯಶ್ರೀ ಕಡೆಯಿಂದ ಬಂತು. ಆ ಮಾತನ್ನು ಕೇಳಿ ಸ್ಫೂರ್ತಿ ತುಂಬಾನೇ ಬೇಸರಗೊಂಡರು.

ಇದನ್ನೂ ಓದಿ: ‘ಇನ್ನು ಯಾವುದೇ ಆಟ ಆಡಲ್ಲ’; ಬಿಗ್ ಬಾಸ್ ಮನೆಯಿಂದ ಹೊರಹೋಗ್ತಾರಾ ಜಯಶ್ರೀ?

ಇನ್ನು, ಬಿಗ್ ಬಾಸ್ ಮನೆಯಲ್ಲಿ ಸಮಯ ಕಳೆಯೋಕೆ ಸ್ಫೂರ್ತಿ ಬಳಿ ಸಾಧ್ಯವಾಗುತ್ತಿಲ್ಲ. ‘ದಿನ ಕಳೆದಂತೆ ನಾನು ಡೌನ್ ಆಗುತ್ತಿದ್ದೇನೆ ಅನಿಸಿತು. ಹೀಗಾಗಿ, ಮನೆಯಿಂದ ಹೊರ ಹೋಗಬೇಕು ಅನಿಸುತ್ತಿದೆ’ ಎಂದಿದ್ದಾರೆ ಸ್ಫೂರ್ತಿ. ಈ ವಾರ ಅವರು ನಾಮಿನೇಟ್ ಆಗಿದ್ದಾರೆ. ಅವರು ಮನೆಯಿಂದ ಹೊರ ಹೋದರು ಯಾವುದೇ ಅಚ್ಚರಿ ಇಲ್ಲ ಎಂಬ ಮಾತು ಕೇಳಿ ಬಂದಿದೆ.

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ