AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು. ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  
TV9 Web
| Edited By: |

Updated on: Mar 07, 2022 | 3:01 PM

Share

ಹಿಂದಿಯಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ (Divya Agarwal) ಹೊರಹೊಮ್ಮಿದ್ದರು. ಕಳೆದ ಸೆಪ್ಟೆಂಬರ್​ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡುತ್ತಿದ್ದಂತೆ ಅವರು ಕುಣಿದು ಕುಪ್ಪಳಿಸಿದ್ದರು. ಈಗ ಅವರ ಬಾಳಲ್ಲಿ ಕಹಿ ಘಟನೆ ಒಂದು ನಡೆದಿದೆ. ಹಲವು ವರ್ಷಗಳ ಕಾಲ ಜತೆಗೆ ಇದ್ದ ಬಾಯ್​ಫ್ರೆಂಡ್ ವರುಣ್ ಸೂದ್​ (Varun Sood) ಜತೆಗೆ ದಿವ್ಯಾ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಣೆ ಮಾಡಿದ್ದಾರೆ. ಇನ್ನು, ವರುಣ್​ ಅವರನ್ನು ಟ್ರೋಲ್​ ಮಾಡಿದ ಕೆಲವರಿಗೆ ಅವರು ತಿರುಗೇಟು ನೀಡಿದ್ದಾರೆ.

‘ಜೀವನ ಒಂದು ರೀತಿಯಲ್ಲಿ ಸರ್ಕಸ್​. ಎಲ್ಲರನ್ನೂ ಸಂತೋಷವಾಗಿಡಲು ಪ್ರಯತ್ನಿಸಿ. ನಮ್ಮ ಮೇಲೆ ನಮಗೆ ಪ್ರೀತಿ ಕಡಿಮೆಯಾಗಲು ಪ್ರಾರಂಭಿಸಿದಾಗ ಏನಾಗುತ್ತದೆ? ನಾನು ಈಗ ತೆಗೆದುಕೊಳ್ಳುತ್ತಿರುವ ನಿರ್ಧಾರಕ್ಕೆ ಯಾರನ್ನೂ ದ್ವೇಷಿಸುತ್ತಿಲ್ಲ. ನಾನು ನನಗಾಗಿ ಬದುಕಲು ಬಯಸುತ್ತೇನೆ. ನಾನು ನಮ್ಮ ರಿಲೇಷನ್​ಶಿಪ್​ನಿಂದ ಹೊರಬರುತ್ತಿದ್ದೇನೆ. ಇದು ನನ್ನ ಆಯ್ಕೆ. ವರುಣ್ ಜತೆ ಕಳೆದ ಸಮಯ ನನಗೆ ಈಗಲೂ ಖುಷಿ ನೀಡುತ್ತದೆ’ ಎಂದಿದ್ದಾರೆ ದಿವ್ಯಾ.

‘ವರುಣ್​ ನೀನು ಮಾಡಿದ ಎಲ್ಲಾ ಸಹಾಯಕ್ಕೆ ಧನ್ಯವಾದಗಳು. ನೀನು ಯಾವಾಗಲೂ ನನ್ನ ಉತ್ತಮ ಗೆಳೆಯನಾಗಿರುತ್ತೀಯ’ ಎಂದು ಹೇಳಿದ್ದಾರೆ ದಿವ್ಯಾ. ಈ ಮೂಲಕ ಬ್ರೇಕಪ್ ವಿಚಾರವನ್ನು ಅಧಿಕೃತ ಮಾಡಿದ್ದಾರೆ.  ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ದಿವ್ಯಾ ಸದಾ ವರುಣ್​ ಬಗ್ಗೆ ಮಾತನಾಡುತ್ತಿದ್ದರು. ಶೀಘ್ರವೇ ಇಬ್ಬರೂ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ.

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು.

ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ. ‘ವರುಣ್ ಬಗ್ಗೆ ಯಾರೂ ಏನನ್ನೂ ಹೇಳಬೇಡಿ. ವರುಣ್​ ಪ್ರಾಮಾಣಿಕ ವ್ಯಕ್ತಿ. ಒಂಟಿಯಾಗಿ ಇರಬೇಕು ಎಂಬುದು ನನ್ನ ನಿರ್ಧಾರ. ಯಾರಿಗೂ ಏನನ್ನೂ ಮಾತನಾಡುವ ಹಕ್ಕು ಇಲ್ಲ. ಜೀವನದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಕಷ್ಟು ಶಕ್ತಿ ಬೇಕು’ ಎಂದು ದಿವ್ಯಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!