ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು. ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 07, 2022 | 3:01 PM

ಹಿಂದಿಯಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ (Divya Agarwal) ಹೊರಹೊಮ್ಮಿದ್ದರು. ಕಳೆದ ಸೆಪ್ಟೆಂಬರ್​ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡುತ್ತಿದ್ದಂತೆ ಅವರು ಕುಣಿದು ಕುಪ್ಪಳಿಸಿದ್ದರು. ಈಗ ಅವರ ಬಾಳಲ್ಲಿ ಕಹಿ ಘಟನೆ ಒಂದು ನಡೆದಿದೆ. ಹಲವು ವರ್ಷಗಳ ಕಾಲ ಜತೆಗೆ ಇದ್ದ ಬಾಯ್​ಫ್ರೆಂಡ್ ವರುಣ್ ಸೂದ್​ (Varun Sood) ಜತೆಗೆ ದಿವ್ಯಾ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಣೆ ಮಾಡಿದ್ದಾರೆ. ಇನ್ನು, ವರುಣ್​ ಅವರನ್ನು ಟ್ರೋಲ್​ ಮಾಡಿದ ಕೆಲವರಿಗೆ ಅವರು ತಿರುಗೇಟು ನೀಡಿದ್ದಾರೆ.

‘ಜೀವನ ಒಂದು ರೀತಿಯಲ್ಲಿ ಸರ್ಕಸ್​. ಎಲ್ಲರನ್ನೂ ಸಂತೋಷವಾಗಿಡಲು ಪ್ರಯತ್ನಿಸಿ. ನಮ್ಮ ಮೇಲೆ ನಮಗೆ ಪ್ರೀತಿ ಕಡಿಮೆಯಾಗಲು ಪ್ರಾರಂಭಿಸಿದಾಗ ಏನಾಗುತ್ತದೆ? ನಾನು ಈಗ ತೆಗೆದುಕೊಳ್ಳುತ್ತಿರುವ ನಿರ್ಧಾರಕ್ಕೆ ಯಾರನ್ನೂ ದ್ವೇಷಿಸುತ್ತಿಲ್ಲ. ನಾನು ನನಗಾಗಿ ಬದುಕಲು ಬಯಸುತ್ತೇನೆ. ನಾನು ನಮ್ಮ ರಿಲೇಷನ್​ಶಿಪ್​ನಿಂದ ಹೊರಬರುತ್ತಿದ್ದೇನೆ. ಇದು ನನ್ನ ಆಯ್ಕೆ. ವರುಣ್ ಜತೆ ಕಳೆದ ಸಮಯ ನನಗೆ ಈಗಲೂ ಖುಷಿ ನೀಡುತ್ತದೆ’ ಎಂದಿದ್ದಾರೆ ದಿವ್ಯಾ.

‘ವರುಣ್​ ನೀನು ಮಾಡಿದ ಎಲ್ಲಾ ಸಹಾಯಕ್ಕೆ ಧನ್ಯವಾದಗಳು. ನೀನು ಯಾವಾಗಲೂ ನನ್ನ ಉತ್ತಮ ಗೆಳೆಯನಾಗಿರುತ್ತೀಯ’ ಎಂದು ಹೇಳಿದ್ದಾರೆ ದಿವ್ಯಾ. ಈ ಮೂಲಕ ಬ್ರೇಕಪ್ ವಿಚಾರವನ್ನು ಅಧಿಕೃತ ಮಾಡಿದ್ದಾರೆ.  ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ದಿವ್ಯಾ ಸದಾ ವರುಣ್​ ಬಗ್ಗೆ ಮಾತನಾಡುತ್ತಿದ್ದರು. ಶೀಘ್ರವೇ ಇಬ್ಬರೂ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ.

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು.

ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ. ‘ವರುಣ್ ಬಗ್ಗೆ ಯಾರೂ ಏನನ್ನೂ ಹೇಳಬೇಡಿ. ವರುಣ್​ ಪ್ರಾಮಾಣಿಕ ವ್ಯಕ್ತಿ. ಒಂಟಿಯಾಗಿ ಇರಬೇಕು ಎಂಬುದು ನನ್ನ ನಿರ್ಧಾರ. ಯಾರಿಗೂ ಏನನ್ನೂ ಮಾತನಾಡುವ ಹಕ್ಕು ಇಲ್ಲ. ಜೀವನದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಕಷ್ಟು ಶಕ್ತಿ ಬೇಕು’ ಎಂದು ದಿವ್ಯಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ