AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು. ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  
TV9 Web
| Edited By: |

Updated on: Mar 07, 2022 | 3:01 PM

Share

ಹಿಂದಿಯಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ (Divya Agarwal) ಹೊರಹೊಮ್ಮಿದ್ದರು. ಕಳೆದ ಸೆಪ್ಟೆಂಬರ್​ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡುತ್ತಿದ್ದಂತೆ ಅವರು ಕುಣಿದು ಕುಪ್ಪಳಿಸಿದ್ದರು. ಈಗ ಅವರ ಬಾಳಲ್ಲಿ ಕಹಿ ಘಟನೆ ಒಂದು ನಡೆದಿದೆ. ಹಲವು ವರ್ಷಗಳ ಕಾಲ ಜತೆಗೆ ಇದ್ದ ಬಾಯ್​ಫ್ರೆಂಡ್ ವರುಣ್ ಸೂದ್​ (Varun Sood) ಜತೆಗೆ ದಿವ್ಯಾ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಣೆ ಮಾಡಿದ್ದಾರೆ. ಇನ್ನು, ವರುಣ್​ ಅವರನ್ನು ಟ್ರೋಲ್​ ಮಾಡಿದ ಕೆಲವರಿಗೆ ಅವರು ತಿರುಗೇಟು ನೀಡಿದ್ದಾರೆ.

‘ಜೀವನ ಒಂದು ರೀತಿಯಲ್ಲಿ ಸರ್ಕಸ್​. ಎಲ್ಲರನ್ನೂ ಸಂತೋಷವಾಗಿಡಲು ಪ್ರಯತ್ನಿಸಿ. ನಮ್ಮ ಮೇಲೆ ನಮಗೆ ಪ್ರೀತಿ ಕಡಿಮೆಯಾಗಲು ಪ್ರಾರಂಭಿಸಿದಾಗ ಏನಾಗುತ್ತದೆ? ನಾನು ಈಗ ತೆಗೆದುಕೊಳ್ಳುತ್ತಿರುವ ನಿರ್ಧಾರಕ್ಕೆ ಯಾರನ್ನೂ ದ್ವೇಷಿಸುತ್ತಿಲ್ಲ. ನಾನು ನನಗಾಗಿ ಬದುಕಲು ಬಯಸುತ್ತೇನೆ. ನಾನು ನಮ್ಮ ರಿಲೇಷನ್​ಶಿಪ್​ನಿಂದ ಹೊರಬರುತ್ತಿದ್ದೇನೆ. ಇದು ನನ್ನ ಆಯ್ಕೆ. ವರುಣ್ ಜತೆ ಕಳೆದ ಸಮಯ ನನಗೆ ಈಗಲೂ ಖುಷಿ ನೀಡುತ್ತದೆ’ ಎಂದಿದ್ದಾರೆ ದಿವ್ಯಾ.

‘ವರುಣ್​ ನೀನು ಮಾಡಿದ ಎಲ್ಲಾ ಸಹಾಯಕ್ಕೆ ಧನ್ಯವಾದಗಳು. ನೀನು ಯಾವಾಗಲೂ ನನ್ನ ಉತ್ತಮ ಗೆಳೆಯನಾಗಿರುತ್ತೀಯ’ ಎಂದು ಹೇಳಿದ್ದಾರೆ ದಿವ್ಯಾ. ಈ ಮೂಲಕ ಬ್ರೇಕಪ್ ವಿಚಾರವನ್ನು ಅಧಿಕೃತ ಮಾಡಿದ್ದಾರೆ.  ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ದಿವ್ಯಾ ಸದಾ ವರುಣ್​ ಬಗ್ಗೆ ಮಾತನಾಡುತ್ತಿದ್ದರು. ಶೀಘ್ರವೇ ಇಬ್ಬರೂ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ.

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು.

ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ. ‘ವರುಣ್ ಬಗ್ಗೆ ಯಾರೂ ಏನನ್ನೂ ಹೇಳಬೇಡಿ. ವರುಣ್​ ಪ್ರಾಮಾಣಿಕ ವ್ಯಕ್ತಿ. ಒಂಟಿಯಾಗಿ ಇರಬೇಕು ಎಂಬುದು ನನ್ನ ನಿರ್ಧಾರ. ಯಾರಿಗೂ ಏನನ್ನೂ ಮಾತನಾಡುವ ಹಕ್ಕು ಇಲ್ಲ. ಜೀವನದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಕಷ್ಟು ಶಕ್ತಿ ಬೇಕು’ ಎಂದು ದಿವ್ಯಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?