AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು. ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ.

ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  
TV9 Web
| Edited By: |

Updated on: Mar 07, 2022 | 3:01 PM

Share

ಹಿಂದಿಯಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಒಟಿಟಿ’ (Bigg Boss OTT) ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ (Divya Agarwal) ಹೊರಹೊಮ್ಮಿದ್ದರು. ಕಳೆದ ಸೆಪ್ಟೆಂಬರ್​ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡುತ್ತಿದ್ದಂತೆ ಅವರು ಕುಣಿದು ಕುಪ್ಪಳಿಸಿದ್ದರು. ಈಗ ಅವರ ಬಾಳಲ್ಲಿ ಕಹಿ ಘಟನೆ ಒಂದು ನಡೆದಿದೆ. ಹಲವು ವರ್ಷಗಳ ಕಾಲ ಜತೆಗೆ ಇದ್ದ ಬಾಯ್​ಫ್ರೆಂಡ್ ವರುಣ್ ಸೂದ್​ (Varun Sood) ಜತೆಗೆ ದಿವ್ಯಾ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಘೋಷಣೆ ಮಾಡಿದ್ದಾರೆ. ಇನ್ನು, ವರುಣ್​ ಅವರನ್ನು ಟ್ರೋಲ್​ ಮಾಡಿದ ಕೆಲವರಿಗೆ ಅವರು ತಿರುಗೇಟು ನೀಡಿದ್ದಾರೆ.

‘ಜೀವನ ಒಂದು ರೀತಿಯಲ್ಲಿ ಸರ್ಕಸ್​. ಎಲ್ಲರನ್ನೂ ಸಂತೋಷವಾಗಿಡಲು ಪ್ರಯತ್ನಿಸಿ. ನಮ್ಮ ಮೇಲೆ ನಮಗೆ ಪ್ರೀತಿ ಕಡಿಮೆಯಾಗಲು ಪ್ರಾರಂಭಿಸಿದಾಗ ಏನಾಗುತ್ತದೆ? ನಾನು ಈಗ ತೆಗೆದುಕೊಳ್ಳುತ್ತಿರುವ ನಿರ್ಧಾರಕ್ಕೆ ಯಾರನ್ನೂ ದ್ವೇಷಿಸುತ್ತಿಲ್ಲ. ನಾನು ನನಗಾಗಿ ಬದುಕಲು ಬಯಸುತ್ತೇನೆ. ನಾನು ನಮ್ಮ ರಿಲೇಷನ್​ಶಿಪ್​ನಿಂದ ಹೊರಬರುತ್ತಿದ್ದೇನೆ. ಇದು ನನ್ನ ಆಯ್ಕೆ. ವರುಣ್ ಜತೆ ಕಳೆದ ಸಮಯ ನನಗೆ ಈಗಲೂ ಖುಷಿ ನೀಡುತ್ತದೆ’ ಎಂದಿದ್ದಾರೆ ದಿವ್ಯಾ.

‘ವರುಣ್​ ನೀನು ಮಾಡಿದ ಎಲ್ಲಾ ಸಹಾಯಕ್ಕೆ ಧನ್ಯವಾದಗಳು. ನೀನು ಯಾವಾಗಲೂ ನನ್ನ ಉತ್ತಮ ಗೆಳೆಯನಾಗಿರುತ್ತೀಯ’ ಎಂದು ಹೇಳಿದ್ದಾರೆ ದಿವ್ಯಾ. ಈ ಮೂಲಕ ಬ್ರೇಕಪ್ ವಿಚಾರವನ್ನು ಅಧಿಕೃತ ಮಾಡಿದ್ದಾರೆ.  ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ದಿವ್ಯಾ ಸದಾ ವರುಣ್​ ಬಗ್ಗೆ ಮಾತನಾಡುತ್ತಿದ್ದರು. ಶೀಘ್ರವೇ ಇಬ್ಬರೂ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ.

ಮಧುರಿಮಾ ರಾಯ್​ ಜತೆ ವರುಣ್​​ ಅಫೇರ್​ ಇಟ್ಟುಕೊಂಡಿದ್ದಾರೆ ಹಾಗೂ ಇದೇ ಕಾರಣಕ್ಕೆ ಬ್ರೇಕಪ್​ ಆಗಿದೆ ಎಂದು ಕೆಲವರು ವಾದ ಮುಂದಿಟ್ಟಿದ್ದರು.

ಇದಕ್ಕೂ ದಿವ್ಯಾ ಉತ್ತರಿಸಿದ್ದಾರೆ. ‘ವರುಣ್ ಬಗ್ಗೆ ಯಾರೂ ಏನನ್ನೂ ಹೇಳಬೇಡಿ. ವರುಣ್​ ಪ್ರಾಮಾಣಿಕ ವ್ಯಕ್ತಿ. ಒಂಟಿಯಾಗಿ ಇರಬೇಕು ಎಂಬುದು ನನ್ನ ನಿರ್ಧಾರ. ಯಾರಿಗೂ ಏನನ್ನೂ ಮಾತನಾಡುವ ಹಕ್ಕು ಇಲ್ಲ. ಜೀವನದಲ್ಲಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಕಷ್ಟು ಶಕ್ತಿ ಬೇಕು’ ಎಂದು ದಿವ್ಯಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ