AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

ದಿವ್ಯಾ ಪತ್ರಿಕೋದ್ಯಮ ವಿದ್ಯಾರ್ಥಿನಿ. ಕೋರಿಯೋಗ್ರಾಫರ್​ ಹಾಗೂ ನಟಿ ಆಗಬೇಕು ಎಂದು ಕನಸು ಕಂಡವರು. ‘ರಾಗಿಣಿ ಎಂಎಂಎಸ್​: ರಿಟರ್ನ್​​ 2’ನಲ್ಲಿ ಅವರು ಕಾಣಿಸಿಕೊಂಡಿದ್ದರು.

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​
ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​
TV9 Web
| Edited By: |

Updated on: Sep 19, 2021 | 3:58 PM

Share

‘ಬಿಗ್​ ಬಾಸ್​ ಒಟಿಟಿ’ ವಿನ್ನರ್​ ಆಗಿ ದಿವ್ಯಾ ಅಗರ್​ವಾಲ್​ ಹೊರಹೊಮ್ಮಿದ್ದಾರೆ. ಭಾನುವಾರ (ಸೆಪ್ಟೆಂಬರ್​ 18) ನಡೆದ ಫಿನಾಲೆ ಎಪಿಸೋಡ್​ನಲ್ಲಿ ದಿವ್ಯಾ ಹೆಸರನ್ನು ವಿನ್ನರ್​ ಎಂದು ನಿರೂಪಕ ಕರಣ್​ ಜೋಹರ್​ ಘೋಷಣೆ ಮಾಡುತ್ತಿದ್ದಂತೆ ಅವರು ಕುಣಿದು ಕುಪ್ಪಳಿಸಿದ್ದಾರೆ. ಆಕರ್ಷಕ ಟ್ರೋಫಿ ಹಾಗೂ 25 ಲಕ್ಷ ರೂಪಾಯಿ ಚೆಕ್​ನೊಂದಿಗೆ ದಿವ್ಯಾ ಮನೆಗೆ ಬಂದಿದ್ದಾರೆ. ಮನೆಗೆ ಬಂದ ಬೆನ್ನಲ್ಲೇ ಬಾಯ್​ಫ್ರೆಂಡ್​ ವರುಣ್​ ಸೂದ್​ ಜತೆ ಈ ಖುಷಿಯನ್ನು ದಿವ್ಯಾ ಸೆಲೆಬ್ರೇಟ್​ ಮಾಡಿದ್ದಾರೆ.  

ದಿವ್ಯಾ ಪತ್ರಿಕೋದ್ಯಮ ವಿದ್ಯಾರ್ಥಿನಿ. ಕೋರಿಯೋಗ್ರಾಫರ್​ ಹಾಗೂ ನಟಿ ಆಗಬೇಕು ಎಂದು ಕನಸು ಕಂಡವರು. ‘ರಾಗಿಣಿ ಎಂಎಂಎಸ್​: ರಿಟರ್ನ್​​ 2’ನಲ್ಲಿ ಅವರು ಕಾಣಿಸಿಕೊಂಡಿದ್ದರು. ‘ಏಸ್​ ಆಫ್​ ಸ್ಪೇಸ್​ 1’ ವಿನ್ನರ್​ ಆದರೆ, ‘ಎಂಟಿವಿ ಸ್ಪಿಟ್ಸ್​ವಿಲ್ಲಾ 10’ನ ರನ್ನರ್​ ಅಪ್​ ಆಗಿದ್ದಾರೆ ದಿವ್ಯಾ. ಈಗ ಬಿಗ್​ ಬಾಸ್​ ಒಟಿಟಿ ವಿನ್ನರ್​ ಪಟ್ಟ ಕೂಡ ಸಿಕ್ಕಿದೆ. ಅವರ ಗೆಲುವಿನಿಂದ ವರುಣ್​ ಸೂದ್​ ಸಾಕಷ್ಟು ಖುಷಿಪಟ್ಟಿದ್ದಾರೆ.

ವರುಣ್​ ಜತೆ ದಿವ್ಯಾ ಅವರುಈ ಖುಷಿಯನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಕೇಕ್​ ಕತ್ತರಿಸಿ ಅವರು ಈ ಖುಷಿಯನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್​ ಬಾಸ್ ನಿರೂಪಣೆಯನ್ನು ಸಲ್ಮಾನ್​ ಖಾನ್​ ಮಾಡಿದ್ದರು. ಆದರೆ, ‘ಬಿಗ್​ ಬಾಸ್​ ಒಟಿಟಿ’ಯನ್ನು ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್​ ಜೋಹರ್​ ನಡೆಸಿಕೊಟ್ಟಿದ್ದಾರೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ, ರಾಕೇಶ್ ಬಾಪಟ್, ದಿವ್ಯಾ ಅಗರ್ವಾಲ್, ನಿಶಾಂತ್ ಭಟ್ ಹಾಗೂ ಪ್ರತೀಕ್ ಸೆಹಜ್ಪಾಲ್ ಫಿನಾಲೆಯಲ್ಲಿ ಇದ್ದರು. ಅಂತಿಮವಾಗಿ ದಿವ್ಯಾ ಗೆದ್ದಿದ್ದಾರೆ. ಶಮಿತಾ ಮತ್ತು ದಿವ್ಯಾ ನಡುವೆ ಸಾಕಷ್ಟು ಬಾರಿ ಜಗಳ ಆಗಿತ್ತು. ಇದರಿಂದಲೂ ಅವರು ಹೈಲೈಟ್​ ಆಗಿದ್ದರು. ಶೀಘ್ರವೇ ‘ಬಿಗ್​ ಬಾಸ್​ ಸೀಸನ್ 15’ ಆರಂಭಗೊಳ್ಳಲಿದೆ.

ಇದನ್ನೂ ಓದಿ: ಬಿಗ್​ಬಾಸ್​ ಒಟಿಟಿ ನಿರೂಪಕ ಕರಣ್ ಜೋಹರ್ ವಿರುದ್ಧ ಜೋರಾಯ್ತು ಅಸಮಾಧಾನ; ಕಾರಣವೇನು?

ದಿವ್ಯಾ ಅಗರ್​ವಾಲ್​ಗೆ ಒಲಿದ ಬಿಗ್​ ಬಾಸ್​ ಒಟಿಟಿ; ಶಮಿತಾ ಶೆಟ್ಟಿಗೆ ನಿರಾಸೆ, ಇವರಿಗೆ ಸಿಗ್ತಿರೋ ಹಣ ಎಷ್ಟು?

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?