AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುತು ಸಿಗದಂತೆ ಬದಲಾದ ಬಿಗ್​ ಬಾಸ್​ ಮಹಿಳಾ ಸ್ಪರ್ಧಿ; ಈ ಪರಿವರ್ತನೆ ನಂಬಲು ಸಾಧ್ಯವೇ?

ಏಕ್ತಾ ಕಪೂರ್​ ನಿರ್ಮಾಣ ಮಾಡಿರುವ ‘ಕಾರ್ಟೆಲ್’​ ವೆಬ್​ ಸರಣಿಯಲ್ಲಿ ದಿವ್ಯಾ ಅಗರ್​ವಾಲ್​ ನಟಿಸಿದ್ದಾರೆ. ಇತ್ತೀಚೆಗೆ ಅದು ಬಿಡುಗಡೆ ಆಗಿದ್ದು, ಅದರ ಒಂದು ಲುಕ್​ ಅನ್ನು ಅವರು​ ಶೇರ್​ ಮಾಡಿಕೊಂಡಿದ್ದಾರೆ.

ಗುರುತು ಸಿಗದಂತೆ ಬದಲಾದ ಬಿಗ್​ ಬಾಸ್​ ಮಹಿಳಾ ಸ್ಪರ್ಧಿ; ಈ ಪರಿವರ್ತನೆ ನಂಬಲು ಸಾಧ್ಯವೇ?
ಮುದುಕನ ರೀತಿ ಕಾಣಲು ದಿವ್ಯಾ ಅಗರ್​ವಾಲ್​ ಅವರು ಗಂಟೆಗಟ್ಟಲೆ ಮೇಕಪ್ ಮಾಡಿಕೊಳ್ಳಬೇಕಿತ್ತು
TV9 Web
| Edited By: |

Updated on: Oct 01, 2021 | 9:34 AM

Share

ನಟಿ ದಿವ್ಯಾ ಅಗರ್​ವಾಲ್​ ಅವರು ಈ ಬಾರಿಯ ಬಿಗ್​ ಬಾಸ್​ ಓಟಿಟಿ ಶೋನಲ್ಲಿ ವಿನ್ನರ್​ ಪಟ್ಟ ಗಿಟ್ಟಿಸಿಕೊಂಡರು. ಗೆದ್ದ ಬಳಿಕ ಎಲ್ಲೆಲ್ಲೂ ಅವರದ್ದೇ ಸುದ್ದಿ. ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿದ ನಂತರ ಅವರಿಗೆ ಸಿಗುತ್ತಿರುವ ಅವಕಾಶಗಳ ಕೂಡ ಹೇರಳವಾಗಿವೆ. ವೆಬ್​ ಸಿರೀಸ್​ ಲೋಕದಲ್ಲಂತೂ ಅವರಿಗೆ ಭಾರಿ ಡಿಮ್ಯಾಂಡ್​ ಇದೆ. ಇಷ್ಟೆಲ್ಲ ಸಮಾಚಾರದ ನಡುವೆ ದಿವ್ಯಾ ಅಗರ್​ವಾಲ್​ ಅಚ್ಚರಿಯ ರೀತಿಯಲ್ಲಿ ಬದಲಾಗಿರುವುದು ವಿಶೇಷ. ಏಕಾಏಕಿ ಅವರು ಮುದುಕನ ಅವತಾರ ತಾಳಿದ್ದಾರೆ. ಅದಕ್ಕೆ ಕಾರಣ ಏನೆಂದು ಅಭಿಮಾನಿಗಳು ತಲೆ ಕೆರೆದುಕೊಳ್ಳುವುದಕ್ಕೂ ಮುನ್ನವೇ ಸ್ವತಃ ದಿವ್ಯಾ ಅಗರ್​ವಾಲ್​ ಎಲ್ಲವನ್ನೂ ವಿವರಿಸಿದ್ದಾರೆ.

ರಿಯಾಲಿಟಿ ಶೋ, ಧಾರಾವಾಹಿ, ವೆಬ್​​ ಸರಣಿ, ಮ್ಯೂಸಿಕ್​ ವಿಡಿಯೋಗಳ ಮೂಲಕ ದಿವ್ಯಾ ಅಗರ್​ವಾಲ್​ ಅವರು ಜನಪ್ರಿಯತೆ ಸಂಪಾದಿಸಿದ್ದಾರೆ. ಏಕ್ತಾ ಕಪೂರ್​ ನಿರ್ಮಾಣ ಮಾಡಿರುವ ‘ಕಾರ್ಟೆಲ್’​ ವೆಬ್​ ಸರಣಿಯಲ್ಲೂ ಅವರು ನಟಿಸಿದ್ದಾರೆ. ಇತ್ತೀಚೆಗೆ ಅದು ಬಿಡುಗಡೆ ಆಗಿದ್ದು, ಅದರ ಒಂದು ಲುಕ್​ ಅನ್ನು ದಿವ್ಯಾ ಅಗರ್​ವಾಲ್​ ಶೇರ್​ ಮಾಡಿಕೊಂಡಿದ್ದಾರೆ. ‘ಆಲ್ಟ್​ ಬಾಲಾಜಿ’ ಓಟಿಟಿ ಮೂಲಕ ಈ ವೆಬ್​​ ಸಿರೀಸ್​ ಬಿಡುಗಡೆ ಆಗಿದೆ.

‘ಕಾರ್ಟೆಲ್​ ಯಶಸ್ವಿ ಆಗಿರುವುಕ್ಕೆ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದಿರುವ ದಿವ್ಯಾ ಅವರ್​ವಾಲ್​ ಅವರು ತಮಗೆ ಅವಕಾಶ ನೀಡಿದ ಏಕ್ತಾ ಕಪೂರ್​ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ‘ಏಕ್ತಾ ಕಪೂರ್​ ಅವರೇ, ನನ್ನ ಮೇಲೆ ನಂಬಿಕೆ ಇಟ್ಟು ಈ ಪಾತ್ರ ನೀಡಿದ್ದಕ್ಕೆ ನಿಮಗೆ ಧನ್ಯವಾದಗಳು. ಸಿನಿಮಾ ಬಗ್ಗೆ ನಾನು ಹೊಂದಿರುವ ಆಸಕ್ತಿ ಎಂಥದ್ದು ಎಂಬುದನ್ನು ಈ ಪಾತ್ರ ವಿವರಿಸುತ್ತದೆ. ನನ್ನಲ್ಲಿ ಈ ಗುಣಗಳನ್ನು ಮೊದಲು ಗುರುತಿಸಿದವರೇ ನೀವು’ ಎಂದು ಅವರು ಬರೆದುಕೊಂಡಿದ್ದಾರೆ.

ಮುದುಕನ ರೀತಿ ಕಾಣಲು ದಿವ್ಯಾ ಅವರ್​ವಾಲ್​ ಅವರು ಗಂಟೆಗಟ್ಟಲೆ ಮೇಕಪ್​ ಮಾಡಿಕೊಳ್ಳಬೇಕಿತ್ತು. ಪ್ರಾಸ್ಥೆಟಿಕ್​ ಮೇಕಪ್​ ಮೂಲಕ ಅವರು ಈ ವೇಷ ತಾಳಿದ್ದಾರೆ.

ಬಿಗ್​ ಬಾಸ್​ ಓಟಿಟಿ ಶೋನಲ್ಲಿ ಇದ್ದಾಗ ದಿವ್ಯಾ ಅವರು ತಮ್ಮದೇ ಛಾಪು ಮೂಡಿಸಿದ್ದರು. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಗುಣ ಅವರದ್ದು. ಅದೇ ಕಾರಣಕ್ಕಾಗಿ ಅವರು ನಿರೂಪಕ ಕರಣ್​ ಜೋಹರ್​ ಜೊತೆಗೂ ಜಗಳ ಮಾಡಿದ್ದರು. ಅಂತಿಮವಾಗಿ ಅವರೇ ವಿನ್​ ಆಗುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ:

ಬಾಯ್​ಫ್ರೆಂಡ್​ ಜತೆ ಬಿಗ್ ಬಾಸ್​ ಒಟಿಟಿ ವಿನ್ನರ್​ ದಿವ್ಯಾ ಅಗರ್​ವಾಲ್​ ಮೋಜು ಮಸ್ತಿ; ವಿಡಿಯೋ ವೈರಲ್​

ಸೆನ್ಸಾರ್​ ಇಲ್ಲದೆ ನಾಚಿಕೆ ಆಗುವಂತಹ ಟಾಸ್ಕ್​ ನೀಡಿದ ಸನ್ನಿ ಲಿಯೋನ್​; ಬಿಗ್​ ಬಾಸ್​ ಸ್ಪರ್ಧಿಗಳಿಗೆ ಶಾಕ್​

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!