Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿನ ವಿಷ ಪೂರೈಕೆ ಒಪ್ಪಿಕೊಂಡ ಬಿಗ್ ಬಾಸ್ ವಿನ್ನರ್; ಹೊರ ಬರಲಿದೆ ಗಣ್ಯರ ಹೆಸರು?

ಇತ್ತೀಚೆಗೆ ಎಲ್ವಿಶ್ ಯಾದವ್ ಅವರು ಸಖತ್ ಸುದ್ದಿಯಲ್ಲಿ ಇದ್ದಾರೆ. ಅವರು ಹೋದಲ್ಲೆಲ್ಲ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕವಾಗಿ ಎಲ್ಲರಿಗೂ ಹೊಡೆದು ಅವರು ಸುದ್ದಿ ಆಗುತ್ತಿದ್ದಾರೆ. ಭಾನುವಾರ (ಮಾರ್ಚ್ 17) ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಹಾವಿನ ವಿಷ ಪೂರೈಕೆ ಒಪ್ಪಿಕೊಂಡ ಬಿಗ್ ಬಾಸ್ ವಿನ್ನರ್; ಹೊರ ಬರಲಿದೆ ಗಣ್ಯರ ಹೆಸರು?
ಎಲ್ವಿಶ್
Follow us
ರಾಜೇಶ್ ದುಗ್ಗುಮನೆ
|

Updated on: Mar 18, 2024 | 10:53 AM

ಯೂಟ್ಯೂಬರ್ ಹಾಗೂ ‘ಬಿಗ್ ಬಾಸ್ ಒಟಿಟಿ ಸೀಸನ್ 2’ ವಿನ್ನರ್ ಎಲ್ವಿಶ್ ಯಾದವ್​ಗೆ (Elvish Yadav) ಸಂಕಷ್ಟ ಹೆಚ್ಚಿದೆ. ರೇವ್ ಪಾರ್ಟಿಗೆ ಅವರು ಹಾವಿನ ವಿಷವನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾರೆ. ಬಂಧನದ ಬಳಿಕ ಅವರು ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ. ಹಾವಿನ ವಿಷ ಮಾರಾಟ ಅಪರಾಧ ಆಗಿದ್ದು, ಅವರಿಗೆ ಶಿಕ್ಷೆ ಆಗುತ್ತದೆಯೇ ಎನ್ನುವ ಪ್ರಶ್ನೆ ಕಾಡಿದೆ.

ಇತ್ತೀಚೆಗೆ ಎಲ್ವಿಶ್ ಯಾದವ್ ಅವರು ಸಖತ್ ಸುದ್ದಿಯಲ್ಲಿ ಇದ್ದಾರೆ. ಅವರು ಹೋದಲ್ಲೆಲ್ಲ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕವಾಗಿ ಎಲ್ಲರಿಗೂ ಹೊಡೆದು ಅವರು ಸುದ್ದಿ ಆಗುತ್ತಿದ್ದಾರೆ. ಭಾನುವಾರ (ಮಾರ್ಚ್ 17) ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಪಾರ್ಟಿಗಳಿಗೆ ಅವರು ಹಾವಿನ ವಿಷ ಪೂರೈಕೆ ಮಾಡುತ್ತಿದ್ದ ಆರೋಪ ಹೊತ್ತಿದ್ದಾರೆ.

ಎಲ್ವಿಶ್ ಯಾದವ್ ಅವರು ಪೊಲೀಸರ ಎದುರು ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ರೇವ್ ಪಾರ್ಟಿಗಳಿಗೆ ಅವರು ತೆರಳಿ ವಿಷ ಪೂರೈಸುತ್ತಿದ್ದರು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಅವರು ಪಾರ್ಟಿಯಲ್ಲಿ ಅನೇಕರನ್ನು ಭೇಟಿ ಮಾಡಿದ್ದಾಗಿ ಹೇಳಿದ್ದಾರೆ. ಈ ಮೊದಲು ಎಲ್ವಿಶ್ ಯಾದವ್ ಅವರು ಈ ವಿಚಾರವನ್ನು ಅಲ್ಲಗಳೆದಿದ್ದರು. ಈಗ ಅವರು ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ನಾರ್ಕೋಟಿಕ್ ಡ್ರಗ್ಸ್ ಆ್ಯಕ್ಟ್ ಅಡಿಯಲ್ಲಿ ಎಲ್ವಿಶ್ ಯಾದವ್ ವಿರುದ್ಧ ಕೇಸ್ ದಾಖಲಾಗಿದೆ. ಸೆಕ್ಷನ್ 29 (ಡ್ರಗ್ಸ್ ಮಾರಾಟ ಮತ್ತು ಪೂರೈಕೆ) ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​

ಕಳೆದ ವರ್ಷ ನವೆಂಬರ್​ನಲ್ಲಿ ರೇವ್ ಪಾರ್ಟಿ ಮಾಡಿದ ಐದು ಜನರನ್ನು ಬಂಧಿಸಲಾಗಿತ್ತು. ಈ ವೇಳೆ 20 ಎಂಎಲ್ ಹಾವಿನ ವಿಷ ಸಿಕ್ಕಿತ್ತು. ಈ ಪ್ರಕರಣದ ಜಾಡು ಹಿಡಿದು ಹೋದ ಪೊಲೀಸರಿಗೆ ಎಲ್ವಿಶ್ ಯಾದವ್ ಅವರ ಹೆಸರು ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ನವೆಂಬರ್​ನಲ್ಲಿ ವಿಚಾರಣೆ ಮಾಡಲಾಗಿತ್ತು. ಈಗ ಹೊಸ ಸಾಕ್ಷ್ಯಗಳೊಂದಿಗೆ ಎಲ್ವಿಶ್ ಯಾದವ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಈ ವೇಳೆ ಅವರು ಹಲವರ ಹೆಸರು ಹೇಳುವ ಸಾಧ್ಯತೆ ಇದೆ. ಗಣ್ಯರ ಹೆಸರನ್ನು ಅವರು ಹೇಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ