AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ವಿಚಾರದಲ್ಲೂ ಪರ್ಫೆಕ್ಟ್ ಆದ ರೂಪೇಶ್ ಶೆಟ್ಟಿ; ಮನೆಯವರ ಟೀಕೆಗೆ ನೇರ ತಿರುಗೇಟು

ಕಳೆದ ಮೂರು ವಾರಗಳಿಂದ ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಎಲ್ಲರಿಗೂ ಮನರಂಜನೆ ನೀಡುತ್ತಿದ್ದಾರೆ. ಆದರೆ, ಕೆಲ ಟಾಸ್ಕ್​ಗಳಲ್ಲಿ ಅವರು ಒಳ್ಳೆಯ ಪರ್ಫಾರ್ಮೆನ್ಸ್ ತೋರಿಸಿರಲಿಲ್ಲ. ಈ ಕಾರಣಕ್ಕೆ ಅವರು ಟೀಕೆಗೆ ಗುರಿಯಾಗಿದ್ದರು.

ಎಲ್ಲಾ ವಿಚಾರದಲ್ಲೂ ಪರ್ಫೆಕ್ಟ್ ಆದ ರೂಪೇಶ್ ಶೆಟ್ಟಿ; ಮನೆಯವರ ಟೀಕೆಗೆ ನೇರ ತಿರುಗೇಟು
ರೂಪೇಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 31, 2022 | 6:55 PM

Share

ರೂಪೇಶ್ ಶೆಟ್ಟಿ (Roopesh Shetty) ಅವರು ‘ಬಿಗ್ ಬಾಸ್​ ಒಟಿಟಿ’ಯಲ್ಲಿ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿ ಆಗಿದ್ದಾರೆ. ಮನೆಯಲ್ಲಿ ಸಾಂಗ್ ಹಾಡುತ್ತಾ ಎಲ್ಲರನ್ನೂ ಎಂಟರ್​ಟೇನ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರು ಈ ವಾರ ನಾಮಿನೇಟ್ ಆಗಿಲ್ಲ. ಮನೆಯ ಎಲ್ಲಾ ಸ್ಪರ್ಧಿಗಳಿಗೆ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ ತೆರಳುವ ಸ್ಪರ್ಧಿಗಳ ಪೈಕಿ ರೂಪೇಶ್ ಕೂಡ ಇರುತ್ತಾರೆ ಎಂದು ವೀಕ್ಷಕರು ಅಭಿಪ್ರಾಯ ಪಡುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ರೂಪೇಶ್ ತಮ್ಮ ಆಟ ಆಡುತ್ತಿದ್ದಾರೆ.

ಕಳೆದ ಮೂರು ವಾರಗಳಿಂದ ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಎಲ್ಲರಿಗೂ ಮನರಂಜನೆ ನೀಡುತ್ತಿದ್ದಾರೆ. ಆದರೆ, ಕೆಲ ಟಾಸ್ಕ್​ಗಳಲ್ಲಿ ಅವರು ಒಳ್ಳೆಯ ಪರ್ಫಾರ್ಮೆನ್ಸ್ ತೋರಿಸಿರಲಿಲ್ಲ. ಈ ಕಾರಣಕ್ಕೆ ಅವರು ಟೀಕೆಗೆ ಗುರಿಯಾಗಿದ್ದರು. ‘ರೂಪೇಶ್ ಒಳ್ಳೆಯ ರೀತಿಯಲ್ಲಿ ಮನರಂಜನೆ ನೀಡುತ್ತಾರೆ. ಆದರೆ, ಟಾಸ್ಕ್​ ಆಡುವುದಿಲ್ಲ’ ಎಂಬ ಮಾತುಗಳು ಮನೆಯಲ್ಲಿ ಕೇಳಿ ಬಂದಿದ್ದವು. ಇದನ್ನು ರೂಪೇಶ್ ಸುಳ್ಳು ಮಾಡಿದ್ದಾರೆ. ತಮ್ಮ ಸಾಮರ್ಥ್ಯ ಏನು ಎಂಬುದನ್ನು ಮನೆಯವರ ಎದುರು ತೋರಿಸಿದ್ದಾರೆ. ಅವರ ಪರ್ಫಾರ್ಮೆನ್ಸ್ ನೋಡಿ ಮನೆ ಮಂದಿ ಮೆಚ್ಚಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಎರಡು ಟೀಂ ಮಾಡಲಾಗಿದೆ. ಒಂದು ತಂಡಕ್ಕೆ ಅಕ್ಷತಾ ನಾಯಕಿ. ಮತ್ತೊಂದು ಟೀಂಗೆ ಜಯಶ್ರೀ ಕ್ಯಾಪ್ಟನ್. ಜಯಶ್ರೀ ಅವರ ತಂಡದಲ್ಲಿ ರೂಪೇಶ್ ಇದ್ದಾರೆ. ಆಗಸ್ಟ್ 30ರ ಎಪಿಸೋಡ್​ನಲ್ಲಿ ನೀಡಲಾದ ಎರಡೂ ಟಾಸ್ಕ್​ನಲ್ಲಿ ರೂಪೇಶ್ ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದ್ದಾರೆ.

ಒಂದು ಟೇಬಲ್ ಮೇಲೆ ಬಾಲ್ ಇಡಲಾಗುತ್ತದೆ. ಬಾಯಿಂದ ಆ ಬಾಲನ್ನು ಊದುತ್ತಾ ಮತ್ತೊಂದು ತುದಿಯಲ್ಲಿರುವ ಡಬ್ಬಿಗೆ ಆ ಬಾಲ್​ಅನ್ನು ಹಾಕಬೇಕು. ಇದರಲ್ಲಿ ಅವರು ಉತ್ತಮವಾಗಿ ಆಡಿದರು. ಆ ಬಳಿಕ ಮರಳು ಚೀಲ ಹಿಡಿದು ನಿಲ್ಲುವ ಟಾಸ್ಕ್​ನಲ್ಲೂ ರೂಪೇಶ್ ಒಳ್ಳೆಯ ಪ್ರದರ್ಶನ ನೀಡಿದರು. ಇದರಿಂದ ಜಯಶ್ರೀ, ನಂದಿನಿ, ಸಾನ್ಯಾ, ಆರ್ಯವರ್ಧನ್ ಗುರೂಜಿ ಸೇರಿದಂತೆ ಎಲ್ಲಾ ಸ್ಪರ್ಧಿಗಳು ರೂಪೇಶ್ ಅವರ ಬೆನ್ನು ತಟ್ಟಿದರು.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ರೂಪೇಶ್ ಶೆಟ್ಟಿಗೆ ಹೆಚ್ಚುತ್ತಿದೆ ಫ್ಯಾನ್​​ ಬೇಸ್; ವಿಫಲವಾಗಲಿದೆ ಮನೆಯವರ ತಂತ್ರ?

‘ಟಾಸ್ಕ್​ ಆಡುವುದರಲ್ಲಿ ವೀಕ್ ಇದ್ದೀಯಾ’ ಎಂದು ರೂಪೇಶ್​ ಬಗ್ಗೆ ಮನೆ ಮಂದಿ ಹೇಳುತ್ತಿದ್ದ ಮಾತುಗಳು ಅವರಿಗೆ ಹಿನ್ನಡೆ ಆಗುತ್ತಿದ್ದವು. ಆದರೆ, ರೂಪೇಶ್ ಟಾಸ್ಕ್​​ನಲ್ಲಿ ಉತ್ತಮವಾಗಿ ಆಡುವ ಮೂಲಕ ಎಲ್ಲರಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಇರುವ ಒಂದು ಕೊರತೆಯನ್ನೂ ಅವರು ನೀಗಿಸಿಕೊಂಡಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ