AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಅಚ್ಚರಿಯ ಎಲಿಮಿನೇಷನ್; ಮನೆಯಿಂದ ನಂದಿನಿ ಔಟ್

‘ಬಿಗ್ ಬಾಸ್’ ಮನೆಯಿಂದ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಪ್ರತಿವಾರವೂ ಮೂಡುತ್ತದೆ. ಅದರಲ್ಲೂ ಕೊನೆಯ ವಾರ ಸಮೀಪಿಸಿದಾಗ ಯಾರು ಮನೆಯಿಂದ ಹೊರಹೋಗುತ್ತಾರೆ ಎಂಬ ಕೌತುಕ ಮತ್ತಷ್ಟು ಹೆಚ್ಚಾಗುತ್ತದೆ.

ಬಿಗ್ ಬಾಸ್​ನಲ್ಲಿ ಅಚ್ಚರಿಯ ಎಲಿಮಿನೇಷನ್; ಮನೆಯಿಂದ ನಂದಿನಿ ಔಟ್
ಜಶ್ವಂತ್​-ನಂದಿನಿ
TV9 Web
| Edited By: |

Updated on:Sep 10, 2022 | 8:49 PM

Share

ಬಿಗ್ ಬಾಸ್ ಕನ್ನಡ ಒಟಿಟಿ’ಯಲ್ಲಿ ಐದನೇ ವಾರ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಇನ್ನೊಂದು ವಾರ ಕಳೆದರೆ ಟಿವಿ ಸೀಸನ್ ಆರಂಭ ಆಗಲಿದೆ. ಈ ಕಾರಣದಿಂದಲೂ ‘ಬಿಗ್ ಬಾಸ್ ಒಟಿಟಿ’ (Bigg Boss OTT) ಸಾಕಷ್ಟು ಕುತೂಹಲ ಮೂಡಿಸಿದೆ. ಈಗ ಐದನೇ ವಾರದ ಎಲಿಮಿನೇಷನ್ ನಡೆದಿದೆ. ಬಿಗ್ ಬಾಸ್ ಮನೆಯಿಂದ ನಂದಿನಿ ಔಟ್ ಆಗಿದ್ದಾರೆ. ಈ ಮೂಲಕ ಮನೆಯ ಸದಸ್ಯರ ಸಂಖ್ಯೆ ಮತ್ತಷ್ಟು ಕಡಿಮೆ ಆಗಿದೆ. ಇನ್ನುಮುಂದೆ ಸ್ಪರ್ಧೆ ಮತ್ತಷ್ಟು ಕಠಿಣ ಆಗಲಿದೆ.

‘ಬಿಗ್ ಬಾಸ್’ ಮನೆಯಿಂದ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲ ಪ್ರತಿವಾರವೂ ಮೂಡುತ್ತದೆ. ಅದರಲ್ಲೂ ಕೊನೆಯ ವಾರ ಸಮೀಪಿಸಿದಾಗ ಯಾರು ಮನೆಯಿಂದ ಹೊರಹೋಗುತ್ತಾರೆ ಎಂಬ ಕೌತುಕ ಮತ್ತಷ್ಟು ಹೆಚ್ಚಾಗುತ್ತದೆ. ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳೇ ಆದ ಕಾರಣ ಯಾರೇ ಹೊರ ಹೋದರು ಮನೆಯವರಿಗೆ ಹಾಗೂ ವೀಕ್ಷಕರಿಗೆ ಬೇಸರ ಆಗುತ್ತದೆ. ಆದರೂ ಎಲಿಮಿನೇಷನ್ ಆಗಲೇಬೇಕು. ಶೋ ಮುಂದೆ ಸಾಗಲೇಬೇಕು. ಅದರಂತೆ ಐದನೇ ವಾರದ ಎಲಿಮಿನೇಷನ್ ಆಗಿದೆ.

ಫಿನಾಲೆ ವೀಕ್​​ಗೆ ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಅಯ್ಯರ್ ಈ ಮೊದಲೇ ಹೋಗಿದ್ದರು. ಉಳಿದಂತೆ ಆರ್ಯವರ್ಧನ್​ ಗುರೂಜಿ, ಜಶ್ವಂತ್ ಬೋಪಣ್ಣ, ಸೋನು ಶ್ರೀನಿವಾಸ್ ಗೌಡ, ಜಯಶ್ರೀ ಆರಾಧ್ಯ, ಸೋಮಣ್ಣ ಮಾಚಿಮಾಡ ಹಾಗೂ ನಂದಿನಿ ನಾಮಿನೇಷನ್​ ಲಿಸ್ಟ್​ನಲ್ಲಿ ಇದ್ದರು. ಈ ಪೈಕಿ ಆರ್ಯವರ್ಧನ್ ಮೊದಲು ಸೇವ್ ಆದರು. ಸೋಮಣ್ಣ, ಸೋನು, ಜಯಶ್ರೀ, ಸೋಮಣ್ಣ ನಂತರ ಸೇವ್ ಆದರು. ಕಡಿಮೆ ವೋಟ್ ಪಡೆದು ನಂದಿನಿ ಔಟ್ ಆಗಿದ್ದಾರೆ.

ಇದನ್ನೂ ಓದಿ
Image
ದೊಡ್ಮನೆಯಲ್ಲಿ ಎದೆ ಬಡಿದುಕೊಂಡು ಅತ್ತ ಜಯಶ್ರೀ; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
Image
BBK: ಬಿಗ್​ ಬಾಸ್​ಗೆ ಅವಮಾನ ಮಾಡಿದ ಸೋನು ಗೌಡ; ಮುಲಾಜಿಲ್ಲದೇ ಕ್ಲಾಸ್​ ತೆಗೆದುಕೊಂಡ ಕಿಚ್ಚ ಸುದೀಪ್​
Image
ಬಿಗ್​ ಬಾಸ್​ನಲ್ಲಿ ಹುಡುಗರಿಗೆ ಹೊರಗಿನಿಂದ ಸಿಗುತ್ತಿದೆ ಆ ಒಂದು ವಸ್ತು; ಸೋನು ಹೇಳಿಯೇ ಬಿಟ್ರು
Image
‘ಬಿಗ್​ ಬಾಸ್​ ಒಟಿಟಿ’ ಮನೆಯೊಳಗೆ ನಿಜವಾಗಿ ಏನೆಲ್ಲ ನಡೆಯಿತು? ಎಲ್ಲವನ್ನೂ ವಿವರಿಸಿದ ಸ್ಫೂರ್ತಿ ಗೌಡ

ಇದನ್ನೂ ಓದಿ: ಪ್ರಾಣಿಗಳ ಭಾಷೆಯಲ್ಲಿ ಮಾತಾಡಿಕೊಂಡ ನಂದಿನಿ, ಜಶ್ವಂತ್​; ಬಿಗ್​ ಬಾಸ್​ನಲ್ಲಿ ಪ್ರೇಮಿಗಳ ಸಲ್ಲಾಪ

ಜಶ್ವಂತ್ ಹಾಗೂ ನಂದಿನಿ ನಿಜ ಜೀವನದಲ್ಲಿ ಲವರ್ಸ್​. ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಹುಟ್ಟಿದ ಉದಾಹರಣೆ ಇದೆ. ಆದರೆ, ಈ ಬಾರಿ ಲವರ್ಸ್​​ ಅನ್ನೇ ಮನೆ ಒಳಗೆ ಕಳುಹಿಸಲಾಗಿತ್ತು. ಜಶ್ವಂತ್ ಬಗ್ಗೆ ನಂದಿನಿಗೆ ಸಾಕಷ್ಟು ಪೊಸೆಸಿವ್​ನೆಸ್​ ಇತ್ತು. ಇದು ಜಶ್ವಂತ್ ಆಟದ ಮೇಲೆ ಪ್ರಭಾವ ಬೀರುತ್ತಲೇ ಇತ್ತು. ‘ನಾನು ಈ ವಾರ ಮನೆಯಿಂದ ಹೊರ ಹೋಗುತ್ತೇನೆ’ ಎಂದು ನಂದಿನಿ ಈ ವಾರ ಅನೇಕ ಬಾರಿ ಹೇಳಿಕೊಂಡಿದ್ದಿದೆ. ಈ ಕಾರಣದಿಂದಲೂ ಅವರು ಔಟ್ ಆಗಿದ್ದಾರೆ. ಈ ಮೂಲಕ ರೂಪೇಶ್​, ಸಾನ್ಯಾ, ರಾಕೇಶ್, ಸೋಮಣ್ಣ, ಆರ್ಯವರ್ಧನ್, ಜಯಶ್ರೀ, ಸೋನು, ಜಶ್ವಂತ್ ಫಿನಾಲೆ ವೀಕ್ ತಲುಪಿದ್ದಾರೆ.

Published On - 8:41 pm, Sat, 10 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ