ಕಾಮಿಡಿ ಶೋ ವೇದಿಕೆಯಲ್ಲಿ ಕಣ್ಣೀರು ಹಾಕಿದ ‘ಅನಿಮಲ್​’ ನಟ ಬಾಬಿ ಡಿಯೋಲ್​

ಧರ್ಮೇಂದ್ರ ಅವರ ಮಕ್ಕಳಾದ ಸನ್ನಿ ಡಿಯೋಲ್​ ಮತ್ತು ಬಾಬಿ ಡಿಯೋಲ್​ ಅವರು 2023ರಲ್ಲಿ ಭರ್ಜರಿ ಕಮ್​ಬ್ಯಾಕ್​ ಮಾಡಿದರು. ಅದಕ್ಕೂ ಮುನ್ನ ಅವರ ವೃತ್ತಿಜೀವನ ಬಹಳ ಕಷ್ಟದ ಪರಿಸ್ಥಿತಿಯಲ್ಲಿತ್ತು. ಆ ದಿನಗಳನ್ನು ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ವೇದಿಕೆಯಲ್ಲಿ ಅವರು ನೆನಪಿಸಿಕೊಂಡಿದ್ದಾರೆ. ಈ ಎಪಿಸೋಡ್​ನಲ್ಲಿ ಬಾಬಿ ಡಿಯೋಲ್​ ಅವರು ಅತ್ತಿದ್ದಾರೆ.

ಕಾಮಿಡಿ ಶೋ ವೇದಿಕೆಯಲ್ಲಿ ಕಣ್ಣೀರು ಹಾಕಿದ ‘ಅನಿಮಲ್​’ ನಟ ಬಾಬಿ ಡಿಯೋಲ್​
ಬಾಬಿ ಡಿಯೋಲ್​
Follow us
|

Updated on: Apr 30, 2024 | 5:52 PM

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗುತ್ತಿರುವ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ (The Great Indian Kapil Show) ಕಾರ್ಯಕ್ರಮಕ್ಕೆ ಭಾರಿ ಜನಮೆಚ್ಚುಗೆ ಸಿಗುತ್ತಿದೆ. ಕಳೆದ ಎಪಿಸೋಡ್​ನಲ್ಲಿ ನಟ ಆಮಿರ್​ ಖಾನ್​ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡರು. ಈಗ ಈ ಶೋಗೆ ಸನ್ನಿ ಡಿಯೋಲ್​ ಮತ್ತು ಬಾಬಿ ಡಿಯೋಲ್​ (Bobby Deol) ಅವರು ಅತಿಥಿಯಾಗಿ ಬಂದಿದ್ದಾರೆ. ಈ ಹೊಸ ಸಂಚಿಕೆಗಳು ಶನಿವಾರ ರಾತ್ರಿ 8 ಗಂಟೆಗೆ ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಪ್ರಸಾರ ಆಗಲಿವೆ. ಇದು ಕಾಮಿಡಿ ಶೋ. ಹಾಗಿದ್ದರೂ ಕೂಡ ಬಾಬಿ ಡಿಯೋಲ್​ ಅವರು ಕಣ್ಣೀರು ಹಾಕಿದ್ದಾರೆ. ಅದರ ಪ್ರೋವೋವನ್ನು ನೆಟ್​ಫ್ಲಿಕ್ಸ್​ (Netflix) ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಸದ್ಯಕ್ಕೆ ಡಿಯೋಲ್​ ಕುಟುಂಬಕ್ಕೆ ಒಳ್ಳೆಯ ಕಾಲ ಬಂದಿದೆ. ಸನ್ನಿ ಡಿಯೋಲ್​ ನಟಿಸಿದ ‘ಗದರ್​ 2’, ಬಾಬಿ ಡಿಯೋಲ್​ ನಟಿಸಿದ ‘ಅನಿಮಲ್​’, ಧರ್ಮೇಂದ್ರ ಅಭಿನಯಿಸಿದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗಳು 2023ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆದವು. ಈ ವಿಚಾರದ ಬಗ್ಗೆ ಸನ್ನಿ ಡಿಯೋಲ್​ ಮಾತನಾಡುವಾಗ ಬಾಬಿ ಡಿಯೋಲ್​ ಅವರು ಎಮೋಷನಲ್​ ಆಗಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದಲ್ಲಿ ಕ್ರೂರಿಯಾದ ಬಾಬಿ ಡಿಯೋಲ್​ ನಿಜ ಜೀವನದಲ್ಲಿ ಎಷ್ಟು ಸ್ವೀಟ್​ ನೋಡಿ..

‘ನಾವು 1960ರ ದಶಕದಿಂದಲೂ ಚಿತ್ರರಂಗದಲ್ಲಿ ಇದ್ದೇವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಎಷ್ಟೇ ಪ್ರಯತ್ನ ಮಾಡಿದರೂ ಯಶಸ್ಸು ಸಿಗುತ್ತಿರಲಿಲ್ಲ. ಅದು ಯಾಕೆ ಅಂತ ಗೊತ್ತಾಗುತ್ತಿರಲಿಲ್ಲ. ಆದರೆ 2023ರಲ್ಲಿ ನನ್ನ ಮಗನ ಮದುವೆ ಆಯ್ತು, ನಂತರ ‘ಗದರ್​ 2’ ಸಿನಿಮಾ ಬಂತು. ಅದಕ್ಕೂ ಮುನ್ನ ಅಪ್ಪನ ಸಿನಿಮಾ ಗೆಲುವು ಕಂಡಿತು. ಬಳಿಕ ‘ಅನಿಮಲ್​’ ಚಿತ್ರ ಬಂದು ಧೂಳೆಬ್ಬಿಸಿತು. ಇಷ್ಟೆಲ್ಲ ಆಶೀರ್ವಾದ ಹೇಗೆ ಬಂತೋ ಗೊತ್ತಿಲ್ಲ’ ಎಂದು ಸನ್ನಿ ಡಿಯೋಲ್​ ಹೇಳುವಾಗ ಪಕ್ಕದಲ್ಲಿ ಕುಳಿತ ಬಾಬಿ ಡಿಯೋಲ್​ ಅವರು ಕಣ್ಣೀರು ಹಾಕಿದ್ದಾರೆ.

View this post on Instagram

A post shared by Netflix India (@netflix_in)

‘ಗದರ್​ 2’ ಗೆಲುವಿನ ಬಳಿಕ ಸನ್ನಿ ಡಿಯೋಲ್​ ಅವರ ಡಿಮ್ಯಾಂಡ್​ ಮತ್ತೆ ಹೆಚ್ಚಾಗಿದೆ. ಹೊಸ ಹೊಸ ಅವಕಾಶಗಳು ಅವರಿಗೆ ಸಿಗುತ್ತಿವೆ. ಅದೇ ರೀತಿ, ‘ಅನಿಮಲ್​’ ಸಿನಿಮಾ ಗೆದ್ದ ಬಳಿಕ ಬಾಬಿ ಡಿಯೋಲ್​ ಅವರಿಗೆ ಆಫರ್​ ಹೆಚ್ಚಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ಅವಕಾಶ ಪಡೆಯುತ್ತಿದ್ದಾರೆ. ಮತ್ತೆ ಲೈಮ್​ಲೈಟ್​ಗೆ ಬಂದಿದ್ದಕ್ಕೆ ಈ ಸಹೋದರರಿಗೆ ಖುಷಿ ಇದೆ. ಕೆಲವು ತಮಾಷೆಯ ಪ್ರಸಂಗಗಳನ್ನು ಕೂಡ ಅವರು ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್