Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಪ್ರಿಯರಿಗೆ ಕಹಿ ಸುದ್ದಿ ನೀಡಿದ ಬಾಲಿವುಡ್​; ಸಿನಿಮಾ ರಿಲೀಸ್ ವಿಚಾರದಲ್ಲಿ ಭಾರೀ ಬದಲಾವಣೆ

ಚಿತ್ರಮಂದಿರದಲ್ಲಿ ಕಲೆಕ್ಷನ್ ಆಗದ ಕಾರಣ ಅನೇಕ ಸಿನಿಮಾಗಳು ರಿಲೀಸ್ ಆದ ಕೆಲವೇ ವಾರಗಳಲ್ಲಿ ಒಟಿಟಿಗೆ ಹೆಜ್ಜೆ ಹಾಕಿವೆ. ಆದರೆ, ಇನ್ನುಮುಂದೆ ಥಿಯೇಟರ್​ನಲ್ಲಿ ರಿಲೀಸ್ ಆದ ಚಿತ್ರಗಳು ಒಟಿಟಿಯಲ್ಲಿ ರಿಲೀಸ್ ಆಗಲು ಪ್ರೇಕ್ಷಕರು 8 ವಾರ ಕಾಯಲೇಬೇಕು.

ಒಟಿಟಿ ಪ್ರಿಯರಿಗೆ ಕಹಿ ಸುದ್ದಿ ನೀಡಿದ ಬಾಲಿವುಡ್​; ಸಿನಿಮಾ ರಿಲೀಸ್ ವಿಚಾರದಲ್ಲಿ ಭಾರೀ ಬದಲಾವಣೆ
ಒಟಿಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 09, 2022 | 10:08 AM

ಕೊವಿಡ್ (Covid) ಕಾಣಿಸಿಕೊಂಡ ನಂತರದಲ್ಲಿ ಸಿನಿಮಾ ರಂಗದವರು ಒಟಿಟಿಗೆ ಹೆಚ್ಚು ಆದ್ಯತೆ ನೀಡಲು ಆರಂಭಿಸಿದರು. ಹಲವು ಸಿನಿಮಾಗಳು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆದವು. ಕೆಲ ಸಿನಿಮಾಗಳು ಥಿಯೇಟರ್​ನಲ್ಲಿ ರಿಲೀಸ್ ಆದ ಹೊರತಾಗಿಯೂ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಗದೆ ಇದ್ದರೆ ಅದನ್ನು ಮೂರು ಅಥವಾ ನಾಲ್ಕೇ ವಾರಕ್ಕೆ ಒಟಿಟಿಗೆ ತರಲಾಗುತ್ತಿತ್ತು. ಆದರೆ, ಈಗ ಒಟಿಟಿ ವಿಚಾರದಲ್ಲಿ ಬಾಲಿವುಡ್ (Bollywood)​ ಮಂದಿ ದೊಡ್ಡ ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಇದರಿಂದ ಆನ್​ಲೈನ್​ನಲ್ಲಿ ಸಿನಿಮಾ ನೋಡಬೇಕು ಎಂದುಕೊಂಡಿದ್ದವರಿಗೆ ಕೊಂಚ ಬೇಸರ ಆಗಿದೆ.

ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್​ನಲ್ಲಿ ಸಾಕಷ್ಟು ದೊಡ್ಡ ಬಜೆಟ್ ಚಿತ್ರಗಳು ರಿಲೀಸ್ ಆಗಿವೆ. ಇದರಲ್ಲಿ ಗೆದ್ದಿದ್ದು ಬೆರಳೆಣಿಕೆಯ ಸಿನಿಮಾಗಳು ಮಾತ್ರ. ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ನಟರ ಸಿನಿಮಾಗಳೇ ಮಕಾಡೆ ಮಲಗಿದವು. ಚಿತ್ರಮಂದಿರದಲ್ಲಿ ಕಲೆಕ್ಷನ್ ಆಗದ ಕಾರಣ ಅನೇಕ ಸಿನಿಮಾಗಳು ರಿಲೀಸ್ ಆದ ಕೆಲವೇ ವಾರಗಳಲ್ಲಿ ಒಟಿಟಿಗೆ ಹೆಜ್ಜೆ ಹಾಕಿವೆ. ಆದರೆ, ಇನ್ನುಮುಂದೆ ಥಿಯೇಟರ್​ನಲ್ಲಿ ರಿಲೀಸ್ ಆದ ಚಿತ್ರಗಳು ಒಟಿಟಿಯಲ್ಲಿ ರಿಲೀಸ್ ಆಗಲು ಪ್ರೇಕ್ಷಕರು 8 ವಾರ ಕಾಯಲೇಬೇಕು. ಈ ಹೊಸ ನಿಯಮ ಆಗಸ್ಟ್​ 1ರಿಂದ ಜಾರಿಗೆ ಬರಲಿದೆ.

‘ರಕ್ಷಾ ಬಂಧನ’, ‘ಲಾಲ್ ಸಿಂಗ್ ಚಡ್ಡಾ’, ‘ಲೈಗರ್’, ‘ಬ್ರಹ್ಮಾಸ್ತ್ರ’ ಮೊದಲಾದ ದೊಡ್ಡ ಬಜೆಟ್ ಚಿತ್ರಗಳು ತೆರೆಗೆ ಬರಲು ರೆಡಿ ಆಗಿವೆ. ಈ ಸಿನಿಮಾವನ್ನು ಆನ್​ಲೈನ್​ನಲ್ಲಿ ನೋಡಬೇಕು ಎಂದರೆ ಎರಡು ತಿಂಗಳ ಕಾಯಬೇಕು. ಇದರಿಂದಾಗಿ ಒಟಿಟಿ ಪ್ರಿಯರಿಗೆ ಕೊಂಚ ಬೇಸರ ಆಗಿದೆ.

ಇದನ್ನೂ ಓದಿ
Image
Virata Parvam OTT Release: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?
Image
Sai Pallavi: ಥಿಯೇಟರ್​ಗೆ ಜನರನ್ನು ಕರೆಸುವಲ್ಲಿ ಸೋತ ಸಾಯಿ ಪಲ್ಲವಿ; ‘ಲೇಡಿ ಪವರ್​ ಸ್ಟಾರ್​’ ಬಿರುದು ಈಗೇನಾಯ್ತು?
Image
Sai Pallavi: ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಸಾವಿರಾರು ಮಂದಿ; ಸ್ಪಷ್ಟನೆ ವಿಡಿಯೋ ಕಂಡು ಜನರು ಹೇಳ್ತಿರೋದೇನು?
Image
Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ಇದನ್ನೂ ಓದಿ: ಥಿಯೇಟರ್​ನಲ್ಲಿ ಸೋತ ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ಚಿತ್ರಕ್ಕೀಗ ಒಟಿಟಿಯೇ ಗತಿ; ಪ್ರಸಾರ​ ಯಾವಾಗ?

ಮಹಾರಾಷ್ಟ್ರ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ಚಿತ್ರಮಂದಿರದಲ್ಲಿ ಶೇ.100 ಆಸನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುತ್ತಿವೆ. ಒಂದೇ ತಿಂಗಳಿಗೆ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎಂಬ ಕಾರಣಕ್ಕೆ ಹಲವು ಪ್ರೇಕ್ಷಕರು ಚಿತ್ರಮಂದಿರಕ್ಕೆ ಹೋಗುತ್ತಿರಲಿಲ್ಲ. ಈ ಕಾರಣದಿಂದ  8 ವಾರಗಳ ನಂತರ ಸಿನಿಮಾಗಳು ಒಟಿಟಿಯಲ್ಲಿ ಬಿಡುಗಡೆ ಆದರೆ ಒಂದಷ್ಟು ಮಂದಿ ಥಿಯೇಟರ್​ನತ್ತ ಹೆಜ್ಜೆ ಹಾಕುವ ಸಾಧ್ಯತೆ ಇರುತ್ತದೆ.

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ