AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ಲೋಗೋ ತೋರಿಸಿ ಪೇಚಿಗೆ ಸಿಲುಕಿದ್ದ ‘ಸ್ಕ್ಯಾಮ್​ 1992’ ವೆಬ್​ ಸಿರೀಸ್​ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್​

ಬ್ಯಾಂಕ್​ ನೀಡಿದ ದೂರನ್ನು ಪ್ರಶ್ನಿಸಿ ‘ಸ್ಕ್ಯಾಮ್​ 1992’ ನಿರ್ಮಾಪಕರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ಕೇಸ್​ನ ತನಿಖೆಗೆ ತಡೆ ನೀಡಿದೆ.

ಬ್ಯಾಂಕ್​ ಲೋಗೋ ತೋರಿಸಿ ಪೇಚಿಗೆ ಸಿಲುಕಿದ್ದ ‘ಸ್ಕ್ಯಾಮ್​ 1992’ ವೆಬ್​ ಸಿರೀಸ್​ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್​
ಬ್ಯಾಂಕ್​ ಲೋಗೋ ತೋರಿಸಿ ಪೇಚಿಗೆ ಸಿಲುಕಿದ್ದ ‘ಸ್ಕ್ಯಾಮ್​ 1992’ ವೆಬ್​ ಸಿರೀಸ್​ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್​
TV9 Web
| Edited By: |

Updated on: Aug 23, 2021 | 6:03 PM

Share

ಹರ್ಷದ್​ ಮೆಹ್ತಾ (Harshad Mehta) ನಡೆಸಿದ್ದ ಷೇರು ಮಾರ್ಕೆಟ್​ ಹಗರಣದ ಕುರಿತು ಮೂಡಿಬಂದಿದ್ದ ‘ಸ್ಕ್ಯಾಮ್​ 1992’ (Scam 1992) ವೆಬ್​ ಸಿರೀಸ್​ಗೆ ಜನರು ಫಿದಾ ಆಗಿದ್ದರು. ಕಳೆದ ವರ್ಷ ಅಕ್ಟೋಬರ್​ನಲ್ಲಿ ಈ ವೆಬ್​ ಸಿರೀಸ್​ (Web Series) ಬಿಡುಗಡೆ ಆಗಿತ್ತು. ಸೋನಿ ಲಿವ್​ ಓಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾದ ಈ ವೆಬ್ ಸರಣಿಯಲ್ಲಿ ಒಂದು ಎಡವಟ್ಟು ಆಗಿತ್ತು. ಹಾಗಾಗಿ ನಿರ್ಮಾಪಕರ ವಿರುದ್ಧ ಕರಾಡ್​ ಅರ್ಬನ್​ ಕೋ-ಆಪರೇಟಿವ್​ ಬ್ಯಾಂಕ್​ ದೂರು ದಾಖಲಿಸಿತ್ತು. ಅದಕ್ಕೆ ಸಂಬಂಧಿಸಿದ ತನಿಖೆಗೆ ಬಾಂಬೆ ಹೈಕೋರ್ಟ್​ (Bombay High Court) ತಡೆ ನೀಡಿದೆ.

‘ಸ್ಕ್ಯಾಮ್​ 1992’ ವೆಬ್​ ಸಿರೀಸ್​ನ ಮೂರನೇ ಎಪಿಸೋಡ್​ನಲ್ಲಿ ಒಂದು ಬ್ಯಾಂಕ್​ನ ಲೋಗೋ ತೋರಿಸಲಾಗಿದೆ. ಅದು ಕರಾಡ್​ ಅರ್ಬನ್​ ಕೋ-ಆಪರೇಟಿವ್​ ಬ್ಯಾಂಕ್ ಲೋಗೋ ರೀತಿ ಇದೆ. ಅದರಿಂದ ಈ ಬ್ಯಾಂಕ್​ನ ಪ್ರತಿಷ್ಠೆಗೆ ಧಕ್ಕೆ ಆಗಿದೆ. ಇದು ಬ್ಯಾಂಕ್​ನ ವ್ಯವಹಾರದ ಮೇಲೂ ಪರಿಣಾಮ ಬೀರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಹಾಗಾಗಿ ಈ ವರ್ಷ ಜುಲೈನಲ್ಲಿ ಪುಣೆಯ ಸಹಕಾರ್​ ನಗರ್ ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು.

ಈ ದೂರನ್ನು ಪ್ರಶ್ನಿಸಿ ‘ಸ್ಕ್ಯಾಮ್​ 1992’ ನಿರ್ಮಾಪಕರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ಕೇಸ್​ನ ತನಿಖೆಗೆ ತಡೆ ನೀಡಿದೆ. ಮುಂದಿನ ಮೂರು ವಾರಗಳ ಕಾಲ ಯಾವುದೇ ರೀತಿ ವಿಚಾರಣೆ ನಡೆಸಬಾರದು ಎಂದು ಆದೇಶಿಸಿದೆ. ಆ ಮೂಲಕ ನಿರ್ಮಾಪಕರಿಗೆ ರಿಲೀಫ್​ ಸಿಕ್ಕಂತಾಗಿದೆ.

‘ಸ್ಕ್ಯಾಮ್​ 1992’ ವೆಬ್​ ಸರಣಿ ದೊಡ್ಡ ಮಟ್ಟದಲ್ಲಿ ಹಿಟ್​ ಆಯಿತು. ಹರ್ಷದ್​ ಮೆಹ್ತಾ ಮಾಡಿದ್ದ ಹಗರಣಗಳನ್ನು ಇದರಲ್ಲಿ ಎಳೆಎಳೆಯಾಗಿ ತೆರೆದಿಡಲಾಗಿದೆ. ಈ ವೆಬ್ ​ಸಿರೀಸ್​ಗೆ ಹನ್ಸಲ್​ ಮೆಹ್ತಾ ಮತ್ತು ಜೈ ಮೆಹ್ತಾ ನಿರ್ದೇಶನವಿದೆ. ಹರ್ಷದ್​ ಮೆಹ್ತಾ ಪಾತ್ರದಲ್ಲಿ ಪ್ರತೀಕ್ ಗಾಂಧಿ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಯಿತು. ಹರ್ಷದ್​ ಮೆಹ್ತಾ ನಡೆಸಿದ ಹಗರಣದ ಕುರಿತು ಬಾಲಿವುಡ್​ನಲ್ಲಿ ‘ಬಿಗ್​ ಬುಲ್​’ ಸಿನಿಮಾ ಮೂಡಿಬಂತು. ಅದರಲ್ಲಿ ಅಭಿಷೇಕ್​ ಬಚ್ಚನ್​ ಮುಖ್ಯಭೂಮಿಕೆ ನಿಭಾಯಿಸಿದರು. ಅದು ಕೂಡ ಓಟಿಟಿ ಮೂಲಕವೇ ಬಿಡುಗಡೆ ಆಯಿತು.

ಇದನ್ನೂ ಓದಿ:

ನೆಟ್​ಫ್ಲಿಕ್ಸ್​ನಲ್ಲಿ ಮಣಿರತ್ನಂ ಧಮಾಕಾ; ‘ನವರಸ’ ವೆಬ್​ ಸಿರೀಸ್​ ಟ್ರೇಲರ್​ನಲ್ಲಿ ಘಟಾನುಘಟಿಗಳ ಸಂಗಮ

ವೆಬ್​ ಸೀರಿಸ್​ ಡೈರೆಕ್ಷನ್​ ಮಾಡೋಕೆ ಬನ್ಸಾಲಿ ಪಡೆಯೋ ಹಣ ಇಷ್ಟೊಂದಾ?; ಸ್ಟಾರ್​ ನಟರ ಸಂಭಾವನೆಯನ್ನೂ ಹಿಂದಿಕ್ಕಿದ ನಿರ್ದೇಶಕ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್