AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ; ಕಥೆಯಲ್ಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್

ಡಾರ್ಲಿಂಗ್ ಕೃಷ್ಣ ನಟನೆಯ 'ಬ್ರ್ಯಾಟ್' ಕನ್ನಡ ಸಿನಿಮಾ ಈಗ ಒಟಿಟಿಗೆ ಲಗ್ಗೆ ಇಟ್ಟಿದೆ. ಶಶಾಂಕ್ ನಿರ್ದೇಶನದ ಈ ಚಿತ್ರ ಬೆಟ್ಟಿಂಗ್ ಲೋಕದ ಬಗ್ಗೆ ವಿಸ್ತಾರವಾಗಿ ವಿವರಿಸುತ್ತದೆ. ಕಥೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದ್ದು, ಅದರಲ್ಲೂ ಕ್ಲೈಮ್ಯಾಕ್ಸ್ ರೋಚಕವಾಗಿದೆ. ವೀಕೆಂಡ್‌ನಲ್ಲಿ ನೋಡಲು ಇದೊಂದು ಅತ್ಯುತ್ತಮ ಆಯ್ಕೆ. ಈ ಹಿಟ್ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಆನಂದಿಸಿ.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ; ಕಥೆಯಲ್ಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್
ಬ್ರ್ಯಾಟ್
ರಾಜೇಶ್ ದುಗ್ಗುಮನೆ
|

Updated on: Nov 29, 2025 | 8:43 AM

Share

ಈ ವರ್ಷ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗಿದ್ದು ಬಹಳಷ್ಟು ಸಿನಿಮಾಗಳು ಹಿಟ್ ಆಗಿವೆ.‘ಸು ಫ್ರಮ್ ಸೋ’ ಸಿನಿಮಾ ಸಣ್ಣ ಬಜೆಟ್ ಚಿತ್ರವಾದರೂ ನೂರು ಕೋಟಿ ರೂಪಾಯಿ ಕ್ಲಬ್ ಸೇರಿತು. ಅದೇ ರೀತಿ ಕಳೆದ ಅಕ್ಟೋಬರ್ ಅಂತ್ಯಕ್ಕೆ ತೆರೆಗೆ ಬಂದ ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಈಗ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಆರಂಭಿಸಿದೆ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ವೀಕೆಂಡ್​ನಲ್ಲಿ ನೋಡಲು ಒಂದೊಳ್ಳೆಯ ಆಯ್ಕೆ.

ಚಿತ್ರದ ಒಂದೆಳೆ..

ಕ್ರಿಸ್ಟಿ (ಕೃಷ್ಣ) ನಿಷ್ಠಾವಂತ ಪೊಲೀಸ್ ಕಾನ್​ಸ್ಟೆಬಲ್ ಮಹದೇವಯ್ಯ (ಅಚ್ಯುತ್ ಕುಮಾರ್) ಮಗ. ಆದರೆ, ಈತನಿಗೆ ಒಳ್ಳೆಯ ರೀತಿಯಲ್ಲಿ ಹಣ ಮಾಡಿ ಅಭ್ಯಾಸವೇ ಇಲ್ಲ. ಅಡ್ಡ ದಾರಿ ಹಿಡಿಯುವ ಈತ ಸಾಕಷ್ಟು ಹಣ ಮಾಡುತ್ತಾನೆ. ನಂತರ ಹಣ ಆತನ ಕೈಯಲ್ಲಿ ಉಳಿಯುತ್ತಾ? ಕೊನೆಯಲ್ಲಿ ಏನಾಗುತ್ತದೆ ಎಂಬುದು ಸಿನಿಮಾದ ಕಥೆ.ಡ್ರ್ಯಾಗನ್ ಮಂಜು ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ.

ಬೆಟ್ಟಿಂಗ್ ವಿಷಯ

ಕನ್ನಡದಲ್ಲಿ ಬೆಟ್ಟಿಂಗ್ ಬಗ್ಗೆ ಒಂದಷ್ಟು ಸಿನಿಮಾಗಳು ಬಂದಿದ್ದವು. ಆದರೆ, ಯಾವುದರಲ್ಲೂ ಮಾಹಿತಿ ವಿಸ್ತಾರವಾಗಿ ಇರಲಿಲ್ಲ. ಆದರೆ, ನಿರ್ದೇಶಕ ಶಶಾಂಕ್ ಅವರು ಈ ಸಿನಿಮಾದಲ್ಲಿ ಅದನ್ನು ವಿಸ್ತೃತವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ಈ ದಂಧೆ ಹೇಗೆ ನಡೆಯುತ್ತದೆ ಎಂಬುದರ ಇಂಚಿಂಚು ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಬ್ರ್ಯಾಟ್ ವಿಮರ್ಶೆ: ಜೂಜಿನ ಅಡ್ಡೆಯಲ್ಲಿ ಡಾರ್ಲಿಂಗ್ ಕೃಷ್ಣ ಕಮಾಲ್; ಸಂದೇಶದ ಜೊತೆ ಥ್ರಿಲ್

ಕ್ಲೈಮ್ಯಾಕ್ಸ್

‘ಬ್ರ್ಯಾಟ್’ ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್ ಇದೆ. ಅದರಲ್ಲೂ ಕ್ಲೈಮ್ಯಾಕ್ಸ್​ನಲ್ಲಿ ದೊಡ್ಡ ಟ್ವಿಸ್ಟ್ ಕೊಡಲಾಗುತ್ತದೆ. ಅಷ್ಟಕ್ಕೂ ಏನು ಆ ಟ್ವಿಸ್ಟ್? ಅದನ್ನು ಸಿನಿಮಾ ನೋಡಿಯೇ ಎಂಜಾಯ್ ಮಾಡಬೇಕು. ವೀಕೆಂಡ್​ನಲ್ಲಿ ಕನ್ನಡದ್ದೇ ಒಂದು ಸಿನಿಮಾ ನೋಡಿ ಆನಂದಿಸಬೇಕು ಎಂದರೆ ‘ಬ್ರ್ಯಾಟ್’ ಉತ್ತಮ ಆಯ್ಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ