AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ; ಕಥೆಯಲ್ಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್

ಡಾರ್ಲಿಂಗ್ ಕೃಷ್ಣ ನಟನೆಯ 'ಬ್ರ್ಯಾಟ್' ಕನ್ನಡ ಸಿನಿಮಾ ಈಗ ಒಟಿಟಿಗೆ ಲಗ್ಗೆ ಇಟ್ಟಿದೆ. ಶಶಾಂಕ್ ನಿರ್ದೇಶನದ ಈ ಚಿತ್ರ ಬೆಟ್ಟಿಂಗ್ ಲೋಕದ ಬಗ್ಗೆ ವಿಸ್ತಾರವಾಗಿ ವಿವರಿಸುತ್ತದೆ. ಕಥೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದ್ದು, ಅದರಲ್ಲೂ ಕ್ಲೈಮ್ಯಾಕ್ಸ್ ರೋಚಕವಾಗಿದೆ. ವೀಕೆಂಡ್‌ನಲ್ಲಿ ನೋಡಲು ಇದೊಂದು ಅತ್ಯುತ್ತಮ ಆಯ್ಕೆ. ಈ ಹಿಟ್ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಆನಂದಿಸಿ.

ಒಟಿಟಿಗೆ ಬಂತು ಕನ್ನಡದ ಹಿಟ್ ಚಿತ್ರ; ಕಥೆಯಲ್ಲಿದೆ ಟ್ವಿಸ್ಟ್ ಮೇಲೆ ಟ್ವಿಸ್ಟ್
ಬ್ರ್ಯಾಟ್
ರಾಜೇಶ್ ದುಗ್ಗುಮನೆ
|

Updated on: Nov 29, 2025 | 8:43 AM

Share

ಈ ವರ್ಷ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗಿದ್ದು ಬಹಳಷ್ಟು ಸಿನಿಮಾಗಳು ಹಿಟ್ ಆಗಿವೆ.‘ಸು ಫ್ರಮ್ ಸೋ’ ಸಿನಿಮಾ ಸಣ್ಣ ಬಜೆಟ್ ಚಿತ್ರವಾದರೂ ನೂರು ಕೋಟಿ ರೂಪಾಯಿ ಕ್ಲಬ್ ಸೇರಿತು. ಅದೇ ರೀತಿ ಕಳೆದ ಅಕ್ಟೋಬರ್ ಅಂತ್ಯಕ್ಕೆ ತೆರೆಗೆ ಬಂದ ಡಾರ್ಲಿಂಗ್ ಕೃಷ್ಣ ನಟನೆಯ ‘ಬ್ರ್ಯಾಟ್’ ಈಗ ಒಟಿಟಿಗೆ ಕಾಲಿಟ್ಟಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಆರಂಭಿಸಿದೆ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ವೀಕೆಂಡ್​ನಲ್ಲಿ ನೋಡಲು ಒಂದೊಳ್ಳೆಯ ಆಯ್ಕೆ.

ಚಿತ್ರದ ಒಂದೆಳೆ..

ಕ್ರಿಸ್ಟಿ (ಕೃಷ್ಣ) ನಿಷ್ಠಾವಂತ ಪೊಲೀಸ್ ಕಾನ್​ಸ್ಟೆಬಲ್ ಮಹದೇವಯ್ಯ (ಅಚ್ಯುತ್ ಕುಮಾರ್) ಮಗ. ಆದರೆ, ಈತನಿಗೆ ಒಳ್ಳೆಯ ರೀತಿಯಲ್ಲಿ ಹಣ ಮಾಡಿ ಅಭ್ಯಾಸವೇ ಇಲ್ಲ. ಅಡ್ಡ ದಾರಿ ಹಿಡಿಯುವ ಈತ ಸಾಕಷ್ಟು ಹಣ ಮಾಡುತ್ತಾನೆ. ನಂತರ ಹಣ ಆತನ ಕೈಯಲ್ಲಿ ಉಳಿಯುತ್ತಾ? ಕೊನೆಯಲ್ಲಿ ಏನಾಗುತ್ತದೆ ಎಂಬುದು ಸಿನಿಮಾದ ಕಥೆ.ಡ್ರ್ಯಾಗನ್ ಮಂಜು ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ.

ಬೆಟ್ಟಿಂಗ್ ವಿಷಯ

ಕನ್ನಡದಲ್ಲಿ ಬೆಟ್ಟಿಂಗ್ ಬಗ್ಗೆ ಒಂದಷ್ಟು ಸಿನಿಮಾಗಳು ಬಂದಿದ್ದವು. ಆದರೆ, ಯಾವುದರಲ್ಲೂ ಮಾಹಿತಿ ವಿಸ್ತಾರವಾಗಿ ಇರಲಿಲ್ಲ. ಆದರೆ, ನಿರ್ದೇಶಕ ಶಶಾಂಕ್ ಅವರು ಈ ಸಿನಿಮಾದಲ್ಲಿ ಅದನ್ನು ವಿಸ್ತೃತವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ಈ ದಂಧೆ ಹೇಗೆ ನಡೆಯುತ್ತದೆ ಎಂಬುದರ ಇಂಚಿಂಚು ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ಬ್ರ್ಯಾಟ್ ವಿಮರ್ಶೆ: ಜೂಜಿನ ಅಡ್ಡೆಯಲ್ಲಿ ಡಾರ್ಲಿಂಗ್ ಕೃಷ್ಣ ಕಮಾಲ್; ಸಂದೇಶದ ಜೊತೆ ಥ್ರಿಲ್

ಕ್ಲೈಮ್ಯಾಕ್ಸ್

‘ಬ್ರ್ಯಾಟ್’ ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್ ಇದೆ. ಅದರಲ್ಲೂ ಕ್ಲೈಮ್ಯಾಕ್ಸ್​ನಲ್ಲಿ ದೊಡ್ಡ ಟ್ವಿಸ್ಟ್ ಕೊಡಲಾಗುತ್ತದೆ. ಅಷ್ಟಕ್ಕೂ ಏನು ಆ ಟ್ವಿಸ್ಟ್? ಅದನ್ನು ಸಿನಿಮಾ ನೋಡಿಯೇ ಎಂಜಾಯ್ ಮಾಡಬೇಕು. ವೀಕೆಂಡ್​ನಲ್ಲಿ ಕನ್ನಡದ್ದೇ ಒಂದು ಸಿನಿಮಾ ನೋಡಿ ಆನಂದಿಸಬೇಕು ಎಂದರೆ ‘ಬ್ರ್ಯಾಟ್’ ಉತ್ತಮ ಆಯ್ಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು