AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್

ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಸಿದ್ಧಪಡಿಸಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ.

ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್
‘ಅನಿಮಲ್​’ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on:Jan 16, 2024 | 10:29 AM

Share

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಥಿಯೇಟರ್​ನಲ್ಲಿ ಭರ್ಜರಿ ಗಳಿಕೆ ಮಾಡಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಜನವರಿ 26ರಂದು ನೆಟ್​ಫ್ಲಿಕ್ಸ್ ಮೂಲಕ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ತಿಳಿಸಿದ್ದರು. ಆದರೆ, ಈ ಚಿತ್ರಕ್ಕೆ ತೊಂದರೆ ಒಂದು ಎದುರಾಗಿದೆ. ಈ ಚಿತ್ರವನ್ನು ಟಿ-ಸೀರಿಸ್ (T-Series) ನಿರ್ಮಾಣ ಮಾಡಿದೆ. ಇದರ ಜೊತೆಗೆ ಒಂದಷ್ಟು ಮಂದಿ ಹಣ ಹೂಡಿದ್ದಾರೆ. ಆ ಪೈಕಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು. ಲಾಭದಲ್ಲಿ ಸರಿಯಾದ ಪಾಲು ಸಿಕ್ಕಿಲ್ಲ ಎಂದು ಈ ಸಂಸ್ಥೆ ಆರೋಪ ಮಾಡಿದೆ. ಜೊತೆಗೆ ಸಿನಿಮಾ ಒಟಿಟಿ ರಿಲೀಸ್​ಗೆ ತಡೆ ನೀಡಬೇಕು ಎಂದು ಕೋರಿ ಈ ಸಂಸ್ಥೆ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.

‘ಅನಿಮಲ್’ ಸಿನಿಮಾ ನಿರ್ಮಾಣ ಮಾಡಲು ಹಣ ಹೂಡಿದವರಲ್ಲಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು ಎನ್ನಲಾಗಿದೆ. ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಹೀಗಾಗಿ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್ ಆಗುವುದಕ್ಕೆ ತಡೆ ನೀಡಬೇಕು ಹಾಗೂ ‘ಅನಿಮಲ್’ ಸಿನಿಮಾ ಸೀಕ್ವೆಲ್​​ನಲ್ಲಿ ತಮಗೂ ಹಕ್ಕು ನೀಡಬೇಕು ಎಂದು ಸಂಸ್ಥೆ ಕೋರ್ಟ್​ನಲ್ಲಿ ಹೇಳಿದೆ.

ನ್ಯಾಯಮೂರ್ತಿ ಸಂಜೀವ್ ನರುಲಾ ಅವರನ್ನೊಳಗೊಂಡ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ಮಾಡಿದೆ. ‘ಅನಿಮಲ್ ಸಿನಿಮಾದಿಂದ ಬಂದ ಲಾಭ ಹಾಗೂ ಇತರ ಹಕ್ಕು ಮಾರಾಟದಿಂದ ಬಂದ ಹಣದಲ್ಲಿ ಒಂದೇ ಒಂದು ರೂಪಾಯಿ ಕೂಡ ಸಂಸ್ಥೆಗೆ ಸಿಕ್ಕಿಲ್ಲ. ಬಂದ ಲಾಭದಲ್ಲಿ ಶೇ.35 ನಮಗೆ ನೀಡಬೇಕಿತ್ತು’ ಎಂದು ‘ಸಿನಿ 1 ಸ್ಟುಡಿಯೋಸ್’ ವಕೀಲ ಸಂದೀಪ್ ಸೇಥಿ ಅವರು ಕೋರ್ಟ್​ ಎದುರು ವಾದ ಮಂಡಿಸಿದ್ದಾರೆ. ಟಿ-ಸೀರಿಸ್ ವಕೀಲ ಅಮಿತ್ ಸಿಬಾ ಅವರು ತಮ್ಮ ವಾದ ಮುಂದಿಟ್ಟಿದ್ದಾರೆ. ‘ಸಿನಿ 1 ಯಾವುದೇ ಹೂಡಿಕೆ ಮಾಡಿಲ್ಲ’ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ: ‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ…’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಸದ್ಯ ಮುಂದಿನ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಲಾಗಿದೆ. ಒಂದೊಮ್ಮೆ ಪ್ರಕರಣ ಇತ್ಯರ್ಥ ಆಗದೇ ಇದ್ದರೆ ಅದು ‘ಅನಿಮಲ್’ ಒಟಿಟಿ ರಿಲೀಸ್ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Tue, 16 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು