ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್

ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಸಿದ್ಧಪಡಿಸಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ.

ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್
‘ಅನಿಮಲ್​’ ಸಿನಿಮಾ ಪೋಸ್ಟರ್​
Follow us
|

Updated on:Jan 16, 2024 | 10:29 AM

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಥಿಯೇಟರ್​ನಲ್ಲಿ ಭರ್ಜರಿ ಗಳಿಕೆ ಮಾಡಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಜನವರಿ 26ರಂದು ನೆಟ್​ಫ್ಲಿಕ್ಸ್ ಮೂಲಕ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ತಿಳಿಸಿದ್ದರು. ಆದರೆ, ಈ ಚಿತ್ರಕ್ಕೆ ತೊಂದರೆ ಒಂದು ಎದುರಾಗಿದೆ. ಈ ಚಿತ್ರವನ್ನು ಟಿ-ಸೀರಿಸ್ (T-Series) ನಿರ್ಮಾಣ ಮಾಡಿದೆ. ಇದರ ಜೊತೆಗೆ ಒಂದಷ್ಟು ಮಂದಿ ಹಣ ಹೂಡಿದ್ದಾರೆ. ಆ ಪೈಕಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು. ಲಾಭದಲ್ಲಿ ಸರಿಯಾದ ಪಾಲು ಸಿಕ್ಕಿಲ್ಲ ಎಂದು ಈ ಸಂಸ್ಥೆ ಆರೋಪ ಮಾಡಿದೆ. ಜೊತೆಗೆ ಸಿನಿಮಾ ಒಟಿಟಿ ರಿಲೀಸ್​ಗೆ ತಡೆ ನೀಡಬೇಕು ಎಂದು ಕೋರಿ ಈ ಸಂಸ್ಥೆ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.

‘ಅನಿಮಲ್’ ಸಿನಿಮಾ ನಿರ್ಮಾಣ ಮಾಡಲು ಹಣ ಹೂಡಿದವರಲ್ಲಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು ಎನ್ನಲಾಗಿದೆ. ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಹೀಗಾಗಿ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್ ಆಗುವುದಕ್ಕೆ ತಡೆ ನೀಡಬೇಕು ಹಾಗೂ ‘ಅನಿಮಲ್’ ಸಿನಿಮಾ ಸೀಕ್ವೆಲ್​​ನಲ್ಲಿ ತಮಗೂ ಹಕ್ಕು ನೀಡಬೇಕು ಎಂದು ಸಂಸ್ಥೆ ಕೋರ್ಟ್​ನಲ್ಲಿ ಹೇಳಿದೆ.

ನ್ಯಾಯಮೂರ್ತಿ ಸಂಜೀವ್ ನರುಲಾ ಅವರನ್ನೊಳಗೊಂಡ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ಮಾಡಿದೆ. ‘ಅನಿಮಲ್ ಸಿನಿಮಾದಿಂದ ಬಂದ ಲಾಭ ಹಾಗೂ ಇತರ ಹಕ್ಕು ಮಾರಾಟದಿಂದ ಬಂದ ಹಣದಲ್ಲಿ ಒಂದೇ ಒಂದು ರೂಪಾಯಿ ಕೂಡ ಸಂಸ್ಥೆಗೆ ಸಿಕ್ಕಿಲ್ಲ. ಬಂದ ಲಾಭದಲ್ಲಿ ಶೇ.35 ನಮಗೆ ನೀಡಬೇಕಿತ್ತು’ ಎಂದು ‘ಸಿನಿ 1 ಸ್ಟುಡಿಯೋಸ್’ ವಕೀಲ ಸಂದೀಪ್ ಸೇಥಿ ಅವರು ಕೋರ್ಟ್​ ಎದುರು ವಾದ ಮಂಡಿಸಿದ್ದಾರೆ. ಟಿ-ಸೀರಿಸ್ ವಕೀಲ ಅಮಿತ್ ಸಿಬಾ ಅವರು ತಮ್ಮ ವಾದ ಮುಂದಿಟ್ಟಿದ್ದಾರೆ. ‘ಸಿನಿ 1 ಯಾವುದೇ ಹೂಡಿಕೆ ಮಾಡಿಲ್ಲ’ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ: ‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ…’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಸದ್ಯ ಮುಂದಿನ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಲಾಗಿದೆ. ಒಂದೊಮ್ಮೆ ಪ್ರಕರಣ ಇತ್ಯರ್ಥ ಆಗದೇ ಇದ್ದರೆ ಅದು ‘ಅನಿಮಲ್’ ಒಟಿಟಿ ರಿಲೀಸ್ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Tue, 16 January 24

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?