AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್

ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಸಿದ್ಧಪಡಿಸಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ.

ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್
‘ಅನಿಮಲ್​’ ಸಿನಿಮಾ ಪೋಸ್ಟರ್​
Follow us
ರಾಜೇಶ್ ದುಗ್ಗುಮನೆ
|

Updated on:Jan 16, 2024 | 10:29 AM

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಥಿಯೇಟರ್​ನಲ್ಲಿ ಭರ್ಜರಿ ಗಳಿಕೆ ಮಾಡಿತ್ತು. ಈ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಜನವರಿ 26ರಂದು ನೆಟ್​ಫ್ಲಿಕ್ಸ್ ಮೂಲಕ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ತಿಳಿಸಿದ್ದರು. ಆದರೆ, ಈ ಚಿತ್ರಕ್ಕೆ ತೊಂದರೆ ಒಂದು ಎದುರಾಗಿದೆ. ಈ ಚಿತ್ರವನ್ನು ಟಿ-ಸೀರಿಸ್ (T-Series) ನಿರ್ಮಾಣ ಮಾಡಿದೆ. ಇದರ ಜೊತೆಗೆ ಒಂದಷ್ಟು ಮಂದಿ ಹಣ ಹೂಡಿದ್ದಾರೆ. ಆ ಪೈಕಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು. ಲಾಭದಲ್ಲಿ ಸರಿಯಾದ ಪಾಲು ಸಿಕ್ಕಿಲ್ಲ ಎಂದು ಈ ಸಂಸ್ಥೆ ಆರೋಪ ಮಾಡಿದೆ. ಜೊತೆಗೆ ಸಿನಿಮಾ ಒಟಿಟಿ ರಿಲೀಸ್​ಗೆ ತಡೆ ನೀಡಬೇಕು ಎಂದು ಕೋರಿ ಈ ಸಂಸ್ಥೆ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.

‘ಅನಿಮಲ್’ ಸಿನಿಮಾ ನಿರ್ಮಾಣ ಮಾಡಲು ಹಣ ಹೂಡಿದವರಲ್ಲಿ ‘ಸಿನಿ 1 ಸ್ಟುಡಿಯೋಸ್’ ಕೂಡ ಒಂದು ಎನ್ನಲಾಗಿದೆ. ಸಿನಿಮಾದಿಂದ ಬರುವ ಲಾಭ ಹಂಚಿಕೆಗೆ ಸಂಬಂಧಿಸಿ ಒಪ್ಪಂದ ಪತ್ರವೊಂದನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಟಿ-ಸೀರಿಸ್ ಇದನ್ನು ಪಾಲಿಸಿಲ್ಲ ಎನ್ನಲಾಗಿದೆ. ಹೀಗಾಗಿ ‘ಸಿನಿ 1 ಸ್ಟುಡಿಯೋ’ ಮಾಲೀಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ, ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಸಿನಿಮಾ ರಿಲೀಸ್ ಆಗುವುದಕ್ಕೆ ತಡೆ ನೀಡಬೇಕು ಹಾಗೂ ‘ಅನಿಮಲ್’ ಸಿನಿಮಾ ಸೀಕ್ವೆಲ್​​ನಲ್ಲಿ ತಮಗೂ ಹಕ್ಕು ನೀಡಬೇಕು ಎಂದು ಸಂಸ್ಥೆ ಕೋರ್ಟ್​ನಲ್ಲಿ ಹೇಳಿದೆ.

ನ್ಯಾಯಮೂರ್ತಿ ಸಂಜೀವ್ ನರುಲಾ ಅವರನ್ನೊಳಗೊಂಡ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ಮಾಡಿದೆ. ‘ಅನಿಮಲ್ ಸಿನಿಮಾದಿಂದ ಬಂದ ಲಾಭ ಹಾಗೂ ಇತರ ಹಕ್ಕು ಮಾರಾಟದಿಂದ ಬಂದ ಹಣದಲ್ಲಿ ಒಂದೇ ಒಂದು ರೂಪಾಯಿ ಕೂಡ ಸಂಸ್ಥೆಗೆ ಸಿಕ್ಕಿಲ್ಲ. ಬಂದ ಲಾಭದಲ್ಲಿ ಶೇ.35 ನಮಗೆ ನೀಡಬೇಕಿತ್ತು’ ಎಂದು ‘ಸಿನಿ 1 ಸ್ಟುಡಿಯೋಸ್’ ವಕೀಲ ಸಂದೀಪ್ ಸೇಥಿ ಅವರು ಕೋರ್ಟ್​ ಎದುರು ವಾದ ಮಂಡಿಸಿದ್ದಾರೆ. ಟಿ-ಸೀರಿಸ್ ವಕೀಲ ಅಮಿತ್ ಸಿಬಾ ಅವರು ತಮ್ಮ ವಾದ ಮುಂದಿಟ್ಟಿದ್ದಾರೆ. ‘ಸಿನಿ 1 ಯಾವುದೇ ಹೂಡಿಕೆ ಮಾಡಿಲ್ಲ’ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ: ‘ನಾನು ಕೆಟ್ಟ ವ್ಯಕ್ತಿಯ ಪಾತ್ರ ಮಾಡಿದರೆ…’; ‘ಅನಿಮಲ್​’ ಚಿತ್ರಕ್ಕೆ ಕುಟುಕಿದ್ರಾ ಶಾರುಖ್​ ಖಾನ್​?

ಸದ್ಯ ಮುಂದಿನ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಲಾಗಿದೆ. ಒಂದೊಮ್ಮೆ ಪ್ರಕರಣ ಇತ್ಯರ್ಥ ಆಗದೇ ಇದ್ದರೆ ಅದು ‘ಅನಿಮಲ್’ ಒಟಿಟಿ ರಿಲೀಸ್ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Tue, 16 January 24

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ