AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 10: ಫೆ.23ರಂದು ಸಿನಿ ತಾರೆಯರ ಕ್ರಿಕೆಟ್​ ಹಬ್ಬ ಸಿಸಿಎಲ್​ ಶುರು; ‘ಜಿಯೋ ಸಿನಿಮಾ’ ಮೂಲಕ ಪ್ರಸಾರ

ಕ್ರಿಕೆಟ್​ ಮತ್ತು ಮನರಂಜನೆಯ ಅಪರೂಪದ ಕಾಂಬಿನೇಷನ್​ ಆಗಿರುವ ‘ಸೆಲೆಬ್ರಿಟಿ ಕ್ರಿಕೆಟ್​ ಲೀಗ್​​’ (ಸಿಸಿಎಲ್) ಪಂದ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 10ನೇ ಸೀಸನ್​ ‘ಸಿಸಿಎಲ್’ ಫೆಬ್ರವರಿ 23ರಿಂದ ಶುರುವಾಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಇದು ಪ್ರಸಾರ ಆಗಲಿದೆ. ಭಾರತದ ಎಂಟು ಭಾಷೆಗಳ ಚಿತ್ರರಂಗದ ಸೆಲೆಬ್ರಿಟಿಗಳು ಸಿಸಿಎಲ್‌ನಲ್ಲಿ ಆಟ ಆಡಲಿದ್ದಾರೆ. ಆ ಕುರಿತು ಇಲ್ಲಿದೆ ವಿವರ..

CCL 10: ಫೆ.23ರಂದು ಸಿನಿ ತಾರೆಯರ ಕ್ರಿಕೆಟ್​ ಹಬ್ಬ ಸಿಸಿಎಲ್​ ಶುರು; ‘ಜಿಯೋ ಸಿನಿಮಾ’ ಮೂಲಕ ಪ್ರಸಾರ
ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ಸೀಸನ್​ 10
ಮದನ್​ ಕುಮಾರ್​
|

Updated on: Feb 02, 2024 | 5:47 PM

Share

ಭಾರತೀಯ ಚಿತ್ರರಂಗದ ಖ್ಯಾತ ನಟರನ್ನು ಒಂದೆಡೆ ಸೇರಿಸುವ ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ (Celebrity Cricket League) ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಈ ಬಾರಿ ಸಿಸಿಎಲ್​ (CCL) ಜೊತೆ ಒಟಿಟಿ ಪ್ಲಾಟ್​ಫಾರ್ಮ್​ ‘ಜಿಯೋ ಸಿನಿಮಾ’ ಕೈ ಜೋಡಿಸಿದೆ. ಅಂದರೆ, ಫೆಬ್ರವರಿ 23ರಿಂದ ಶುರುವಾಗಲಿರುವ ಸಿಸಿಎಲ್​ನ ಎಲ್ಲ ಪಂದ್ಯಗಳು ‘ಜಿಯೋ ಸಿನಿಮಾ’ (Jio Cinema) ಮೂಲಕ ನೇರವಾಗಿ ಪ್ರಸಾರ ಆಗಲಿವೆ. 4 ವೀಕೆಂಡ್​ಗಳಲ್ಲಿ ನಡೆಯುವ ‘ಸಿಸಿಎಲ್‌ 10ನೇ ಸೀಸನ್‌’ನಲ್ಲಿ 20 ಪಂದ್ಯಗಳು ಇರಲಿವೆ. ಕ್ರಿಕೆಟ್‌ ಪ್ರಿಯರು ಮಾತ್ರವಲ್ಲದೇ, ಸಿನಿಮಾಸಕ್ತರು ಕುತೂಹಲದಿಂದ ವೀಕ್ಷಿಸುವ ಈ ಕ್ರಿಕೆಟ್‌ ಲೀಗ್‌ ಅನ್ನು ಪ್ರೇಕ್ಷಕರಿಗೆ ನೇರವಾಗಿ ತಲುಪಿಸಲು ‘ಜಿಯೋ ಸಿನಿಮಾ’ ಒಟಿಟಿ ಸಜ್ಜಾಗಿದೆ.

2011ರಲ್ಲಿ ಪ್ರಾರಂಭವಾದ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ ನಂತರದ ವರ್ಷಗಳಲ್ಲಿ ಬಹಳ ಜನಪ್ರಿಯತೆ ಪಡೆಯಿತು. ಈಗ ಈ ಪಂದ್ಯಗಳಿಗೆ ದೊಡ್ಡ ವೀಕ್ಷಕವರ್ಗ ಇದೆ. ಇದು ಕ್ರೀಡೆ ಮತ್ತು ಮನರಂಜನೆಯ ಸಮ್ಮಿಲನದ ರೀತಿ ಇದೆ. ಕಳೆದ ವರ್ಷ ಟಿವಿ ಹಾಗೂ ಡಿಜಿಟಲ್‌ ಮಾಧ್ಯಮದ ಮೂಲಕ ಪ್ರಸಾರ ಕಂಡಿದ್ದ ಸಿಸಿಎಲ್‌ ಪಂದ್ಯಗಳನ್ನು ದೇಶದಾದ್ಯಂತ 25 ಕೋಟಿಗೂ ಅಧಿಕ ಜನರು ವೀಕ್ಷಿಸಿದ್ದರು. ಸಿಸಿಎಲ್​ಗೆ ಎಷ್ಟು ಜನಪ್ರಿಯತೆ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿಯಾಗಿದೆ.

ಇದನ್ನೂ ಓದಿ: CCL 2024: ಸಿಸಿಎಲ್​ನಲ್ಲಿ ಅಬ್ಬರಿಸಲು ಸಜ್ಜಾದ ಪಂಜಾಬ್ ದಿ ಶೇರ್

ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್​ ಮಾತ್ರವಲ್ಲ. ಹಲವು ಭಾಷೆಯ ಚಿತ್ರರಂಗಗಳು ಸಕ್ರಿಯವಾಗಿವೆ. ಆ ಎಲ್ಲ ಚಿತ್ರರಂಗವನ್ನು ಒಂದುಗೂಡಿಸುವ ಪಂದ್ಯವೇ ಸಿಸಿಎಲ್​. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಪಂಜಾಬ್‌, ಭೋಜಪುರಿ, ಬೆಂಗಾಲಿ ಸೇರಿ 8 ತಂಡಗಳು ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ನಲ್ಲಿ ಭಾಗವಹಿಸಲಿವೆ. 200ಕ್ಕೂ ಅಧಿಕ ಜನಪ್ರಿಯ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗಿ ಪ್ರೇಕ್ಷಕರಿಗೆ ಮನರಂಜನೆ ನೀಡಲಿದ್ದಾರೆ. ಸ್ಟಾರ್​ ನಟರು ಕ್ರಿಕೆಟ್​ ಮೈದಾನಕ್ಕೆ ಇಳಿಯಲು ಸಜ್ಜಾಗುತ್ತಿದ್ದಾರೆ.

ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ತಂಡಗಳ ವಿವರ:

‘ಮುಂಬೈ ಹೀರೋಸ್’ ತಂಡಕ್ಕೆ ನಟ ಸಲ್ಮಾನ್‌ ಖಾನ್‌ ಬ್ರ್ಯಾಂಡ್ ಅಂಬಾಸಿಡರ್‍ ಆಗಿದ್ದು, ರಿತೇಶ್‌ ದೇಶಮುಖ್ ಕ್ಯಾಪ್ಟನ್​ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. ‘ತೆಲುಗು ವಾರಿಯರ್ಸ್‌’ ಟೀಮ್​ಗೆ ವೆಂಕಟೇಶ್‌ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ. ‘ಕರ್ನಾಟಕ ಬುಲ್ಡೋಜರ್ಸ್‌’ ಟೀಮ್​ಗೆ ಕಿಚ್ಚ ಸುದೀಪ್‌ ಕ್ಯಾಪ್ಟನ್​ ಆಗಿದ್ದಾರೆ. ಮೋಹನ್‌ಲಾಲ್‌ ಸಹ-ಮಾಲೀಕರಾಗಿರುವ ‘ಕೇರಳ ಸ್ಟ್ರೈಕರ್ಸ್‌’ ತಂಡವನ್ನು ಕ್ಯಾಪ್ಟನ್​ ಇಂದ್ರಜಿತ್ ಮುನ್ನಡೆಸಲಿದ್ದಾರೆ. ‘ಭೋಜಪುರಿ ದಬಾಂಗ್ಸ್‌’ ಟೀಮ್​ಗೆ ಮನೋಜ್‌ ತಿವಾರಿ ನಾಯಕ. ಸೋನು ಸೂದ್‌ ಅವರು ‘ಪಂಜಾಬ್‌ ದೆ ಶೇರ್’ ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ ‘ಬೆಂಗಾಲ್ ಟೈಗರ್ಸ್‌’ ಟೀಮ್​ಗೆ ಜಿಸ್ಸು ಸೇನ್‌ಗುಪ್ತ ಕ್ಯಾಪ್ಟನ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ