‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!

ಚಂದು ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ತೆರಳುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಬೇಕು ಎಂಬುದು ಕೆಲವರ ಆಸೆ.

'ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು' ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!
ಚಂದು
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 12, 2022 | 5:53 PM

ಕಾಫಿ ನಾಡು ಚಂದು (Cofffe Nadu Chandu) ಅವರು ಸಖತ್ ಟ್ರೆಂಡ್​ನಲ್ಲಿದ್ದಾರೆ. ಫೇಸ್​ಬುಕ್​, ಇನ್​ಸ್ಟಾಗ್ರಾಮ್​, ವಾಟ್ಸಾಪ್ ಸ್ಟೇಟಸ್​ ಹೀಗೆ ಎಲ್ಲ ಕಡೆಗಳಲ್ಲೂ ಅವರದ್ದೇ ವಿಡಿಯೋ ರಾರಾಜಿಸುತ್ತಿದೆ. ‘ನಾನು ಶಿವಣ್ಣ..ಪುನೀತಣ್ಣ (Puneeth Rajkumar) ಅವರ ಅಭಿಮಾನಿ..’ ಎಂದು ಆರಂಭ ಆಗುವ ವಿಡಿಯೋ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಕಾಫಿ ನಾಡು ಚಂದು ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆಯಲಿದ್ದಾರೆ ಎಂಬ ಚರ್ಚೆ ಈ ಮೊದಲಿನಿಂದಲೂ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆಯಬೇಕು ಎಂಬ ಒತ್ತಾಯ ಜೋರಾಗಿದೆ. ಇದನ್ನು ಸ್ವತಃ ಕಾಫಿ ನಾಡು ಚಂದು ಅವರು ಬೆಂಬಲಿಸಿದ್ದಾರೆ.

ಕಾಫಿ ನಾಡು ಚಂದು ಅವರು ಚಿಕ್ಕಮಗಳೂರಿನವರು. ಅವರು ವೃತ್ತಿಯಲ್ಲಿ ಆಟೋ ಡ್ರೈವರ್. ಈ ಮಧ್ಯೆ ಅವರು ರೀಲ್ಸ್ ಮಾಡೋಕೆ ಆರಂಭಿಸಿದ್ದರು. ಶಿವರಾಜ್​ಕುಮಾರ್ ಹಾಗೂ ಪುನೀತ್ ಅಭಿಮಾನಿ ಆಗಿರುವ ಅವರು ಅದನ್ನು ಪ್ರತಿ ವಿಡಿಯೋದಲ್ಲಿ ಹೇಳುತ್ತಾರೆ. ಚಂದು ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ತೆರಳುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಬೇಕು ಎಂಬುದು ಕೆಲವರ ಆಸೆ. ಇದಕ್ಕಾಗಿ ಆಂದೋಲನ ಶುರುವಾಗಿದೆ.

‘ಬಿಗ್ ಬಾಸ್ ಒಟಿಟಿಗೆ ವೈಲ್ಡ್ ಕಾರ್ಡ್ ಮೂಲಕ ಯಾರು ಎಂಟ್ರಿ ಪಡೆಯಬೇಕು’ ಎಂಬ ಪ್ರಶ್ನೆಯೊಂದಿಗೆ ಸ್ಥಳೀಯ ಮಾಧ್ಯಮವೊಂದು ವೀಕ್ಷಕರ ಎದುರು ಹೋಗಿತ್ತು. ಇದರಲ್ಲಿ ಬಹುತೇಕರು ಕಾಫಿ ನಾಡು ಚಂದು ಅವರ ಹೆಸರನ್ನು ಹೇಳಿದ್ದಾರೆ. ಈ ಮೂಲಕ ಅವರನ್ನು ಬೆಂಬಲಿಸಿದ್ದಾರೆ. ಈ ವಿಡಿಯೋವನ್ನು ಸ್ವತಃ ಚಂದು ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಈ ಆಂದೋಲನಕ್ಕೆ ತಮ್ಮ ಬೆಂಬಲವೂ ಇದೆ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು
Image
Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?
Image
ಕಾಫಿನಾಡು ಚಂದು ತನ್ನದೇ ಶೈಲಿಯಲ್ಲಿ ಸಿದ್ದರಾಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯ ಹೇಳಿದರು!
Image
‘5 ಸಾವಿರ ಕರೆ ಬರ್ತಿದೆ, ದಿನಕ್ಕೊಂದು ನಂಬರ್ ಬದಲಿಸುತ್ತಿದ್ದೇನೆ’; ಕಾಫಿ ನಾಡು ಚಂದು

ಇದನ್ನೂ ಓದಿ: Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು

‘ಬಿಗ್ ಬಾಸ್ ಒಟಿಟಿ’ಗೆ 16 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಈ ಪೈಕಿ ಅನೇಕರು ಗಮನ ಸೆಳೆದಿದ್ದಾರೆ. ಕೇವಲ 42 ದಿನಗಳ ಕಾಲ ನಡೆಯುವ ಈ ಶೋನಲ್ಲಿ ಒಂದಷ್ಟು ಮಂದಿ ವಿನ್ನರ್ಸ್​ ಇರಲಿದ್ದಾರೆ. ವಿನ್ನರ್ಸ್​​ಗೆ ಅವಾರ್ಡ್ ಇರುವುದಿಲ್ಲ. ಬದಲಿಗೆ ಟಿವಿಯಲ್ಲಿ ಪ್ರಸಾರವಾಗುವ ಬಿಗ್​ ಬಾಸ್ ಮನೆಗೆ ಪ್ರವೇಶ ಇರುತ್ತದೆ. ಈ ಸಂದರ್ಭದಲ್ಲೂ ಕಾಫಿ ನಾಡು ಚಂದು ಅವರ ಎಂಟ್ರಿಗೆ ಅವಕಾಶ ಇದೆ. ಅವರು ದೊಡ್ಮನೆಗೆ ಬರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Published On - 5:26 pm, Fri, 12 August 22

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ