AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು’ ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!

ಚಂದು ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ತೆರಳುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಬೇಕು ಎಂಬುದು ಕೆಲವರ ಆಸೆ.

'ಕಾಫಿ ನಾಡು ಚಂದು ಬಿಗ್ ಬಾಸ್‌ಗೆ ಹೋಗಬೇಕು' ಅಭಿಯಾನ ಶುರು; ಸ್ವತಃ ಬೆಂಬಲ ನೀಡಿದ ವೈರಲ್ ಸಿಂಗರ್!
ಚಂದು
TV9 Web
| Edited By: |

Updated on:Aug 12, 2022 | 5:53 PM

Share

ಕಾಫಿ ನಾಡು ಚಂದು (Cofffe Nadu Chandu) ಅವರು ಸಖತ್ ಟ್ರೆಂಡ್​ನಲ್ಲಿದ್ದಾರೆ. ಫೇಸ್​ಬುಕ್​, ಇನ್​ಸ್ಟಾಗ್ರಾಮ್​, ವಾಟ್ಸಾಪ್ ಸ್ಟೇಟಸ್​ ಹೀಗೆ ಎಲ್ಲ ಕಡೆಗಳಲ್ಲೂ ಅವರದ್ದೇ ವಿಡಿಯೋ ರಾರಾಜಿಸುತ್ತಿದೆ. ‘ನಾನು ಶಿವಣ್ಣ..ಪುನೀತಣ್ಣ (Puneeth Rajkumar) ಅವರ ಅಭಿಮಾನಿ..’ ಎಂದು ಆರಂಭ ಆಗುವ ವಿಡಿಯೋ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಕಾಫಿ ನಾಡು ಚಂದು ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆಯಲಿದ್ದಾರೆ ಎಂಬ ಚರ್ಚೆ ಈ ಮೊದಲಿನಿಂದಲೂ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆಯಬೇಕು ಎಂಬ ಒತ್ತಾಯ ಜೋರಾಗಿದೆ. ಇದನ್ನು ಸ್ವತಃ ಕಾಫಿ ನಾಡು ಚಂದು ಅವರು ಬೆಂಬಲಿಸಿದ್ದಾರೆ.

ಕಾಫಿ ನಾಡು ಚಂದು ಅವರು ಚಿಕ್ಕಮಗಳೂರಿನವರು. ಅವರು ವೃತ್ತಿಯಲ್ಲಿ ಆಟೋ ಡ್ರೈವರ್. ಈ ಮಧ್ಯೆ ಅವರು ರೀಲ್ಸ್ ಮಾಡೋಕೆ ಆರಂಭಿಸಿದ್ದರು. ಶಿವರಾಜ್​ಕುಮಾರ್ ಹಾಗೂ ಪುನೀತ್ ಅಭಿಮಾನಿ ಆಗಿರುವ ಅವರು ಅದನ್ನು ಪ್ರತಿ ವಿಡಿಯೋದಲ್ಲಿ ಹೇಳುತ್ತಾರೆ. ಚಂದು ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ತೆರಳುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಬೇಕು ಎಂಬುದು ಕೆಲವರ ಆಸೆ. ಇದಕ್ಕಾಗಿ ಆಂದೋಲನ ಶುರುವಾಗಿದೆ.

‘ಬಿಗ್ ಬಾಸ್ ಒಟಿಟಿಗೆ ವೈಲ್ಡ್ ಕಾರ್ಡ್ ಮೂಲಕ ಯಾರು ಎಂಟ್ರಿ ಪಡೆಯಬೇಕು’ ಎಂಬ ಪ್ರಶ್ನೆಯೊಂದಿಗೆ ಸ್ಥಳೀಯ ಮಾಧ್ಯಮವೊಂದು ವೀಕ್ಷಕರ ಎದುರು ಹೋಗಿತ್ತು. ಇದರಲ್ಲಿ ಬಹುತೇಕರು ಕಾಫಿ ನಾಡು ಚಂದು ಅವರ ಹೆಸರನ್ನು ಹೇಳಿದ್ದಾರೆ. ಈ ಮೂಲಕ ಅವರನ್ನು ಬೆಂಬಲಿಸಿದ್ದಾರೆ. ಈ ವಿಡಿಯೋವನ್ನು ಸ್ವತಃ ಚಂದು ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ಈ ಆಂದೋಲನಕ್ಕೆ ತಮ್ಮ ಬೆಂಬಲವೂ ಇದೆ ಎಂಬುದನ್ನು ಹೇಳಿದ್ದಾರೆ.

ಇದನ್ನೂ ಓದಿ
Image
Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು
Image
Coffee Nadu Chandu: ‘ಅನುಶ್ರೀ ಅಕ್ಕ.. ಅನುಶ್ರೀ ಅಕ್ಕ’ ಅಂತ ವಿಶೇಷ ಬೇಡಿಕೆ ಇಟ್ಟ ಕಾಫಿ ನಾಡು ಚಂದು; ಇದನ್ನು ಶಿವಣ್ಣ ಈಡೇರಿಸ್ತಾರಾ?
Image
ಕಾಫಿನಾಡು ಚಂದು ತನ್ನದೇ ಶೈಲಿಯಲ್ಲಿ ಸಿದ್ದರಾಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯ ಹೇಳಿದರು!
Image
‘5 ಸಾವಿರ ಕರೆ ಬರ್ತಿದೆ, ದಿನಕ್ಕೊಂದು ನಂಬರ್ ಬದಲಿಸುತ್ತಿದ್ದೇನೆ’; ಕಾಫಿ ನಾಡು ಚಂದು

ಇದನ್ನೂ ಓದಿ: Bigg Boss OTT Kannada: ಚಂದುಗೆ ಇಲ್ಲ ಚಾನ್ಸ್​: ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು

‘ಬಿಗ್ ಬಾಸ್ ಒಟಿಟಿ’ಗೆ 16 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಈ ಪೈಕಿ ಅನೇಕರು ಗಮನ ಸೆಳೆದಿದ್ದಾರೆ. ಕೇವಲ 42 ದಿನಗಳ ಕಾಲ ನಡೆಯುವ ಈ ಶೋನಲ್ಲಿ ಒಂದಷ್ಟು ಮಂದಿ ವಿನ್ನರ್ಸ್​ ಇರಲಿದ್ದಾರೆ. ವಿನ್ನರ್ಸ್​​ಗೆ ಅವಾರ್ಡ್ ಇರುವುದಿಲ್ಲ. ಬದಲಿಗೆ ಟಿವಿಯಲ್ಲಿ ಪ್ರಸಾರವಾಗುವ ಬಿಗ್​ ಬಾಸ್ ಮನೆಗೆ ಪ್ರವೇಶ ಇರುತ್ತದೆ. ಈ ಸಂದರ್ಭದಲ್ಲೂ ಕಾಫಿ ನಾಡು ಚಂದು ಅವರ ಎಂಟ್ರಿಗೆ ಅವಕಾಶ ಇದೆ. ಅವರು ದೊಡ್ಮನೆಗೆ ಬರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Published On - 5:26 pm, Fri, 12 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್