AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈ ಭೀಮ್​’ ಚಿತ್ರ ಮಾಡಿದ್ದ ಸೂರ್ಯ, ಜ್ಯೋತಿಕಾ ವಿರುದ್ಧ ಎಫ್​ಐಆರ್​ ದಾಖಲಿಸಲು ಕೋರ್ಟ್​ ಆದೇಶ

Jai Bhim Movie | Vanniyar: ಈ ಪ್ರಕರಣದ ವಿಚಾರಣೆ ಏ.29ರಂದು ನಡೆಯಿತು. ನಟ ಸೂರ್ಯ, ನಿರ್ಮಾಪಕಿ ಜ್ಯೋತಿಕಾ ಹಾಗೂ ನಿರ್ದೇಶಕ ಜ್ಞಾನವೇಲ್​ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

‘ಜೈ ಭೀಮ್​’ ಚಿತ್ರ ಮಾಡಿದ್ದ ಸೂರ್ಯ, ಜ್ಯೋತಿಕಾ ವಿರುದ್ಧ ಎಫ್​ಐಆರ್​ ದಾಖಲಿಸಲು ಕೋರ್ಟ್​ ಆದೇಶ
ಸೂರ್ಯ
Follow us
TV9 Web
| Updated By: ಮದನ್​ ಕುಮಾರ್​

Updated on: May 05, 2022 | 11:42 AM

ಕಾಲಿವುಡ್​ನ ಖ್ಯಾತ ನಟ ಸೂರ್ಯ (Suriya) ಅಭಿನಯಿಸಿರುವ ‘ಜೈ ಭೀಮ್​’ ಸಿನಿಮಾ ಸಖತ್​ ಸದ್ದು ಮಾಡಿತ್ತು. ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾಗೆ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಕೆಲವರು ‘ಜೈ ಭೀಮ್​’ ಚಿತ್ರದ ಬಗ್ಗೆ ಆಕ್ಷೇಪ ಎತ್ತಿದ್ದರು. ವನ್ನಿಯಾರ್​ (Vanniyar) ಸಮುದಾಯದ ಜನರನ್ನು ಈ ಸಿನಿಮಾದಲ್ಲಿ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ತಕರಾರು ತೆಗೆದಿದ್ದರು. ಈ ಪ್ರಕರಣ ಈಗ ಕೋರ್ಟ್​ ಮೆಟ್ಟಿಲು ಏರಿದೆ. ಸಿನಿಮಾದ ನಟ ಸೂರ್ಯ, ನಿರ್ಮಾಪಕಿಯೂ ಆಗಿರುವ ಅವರ ಪತ್ನಿ ಜ್ಯೋತಿಕಾ ಹಾಗೂ ನಿರ್ದೇಶಕ ಜ್ಞಾನವೇಲ್​ ವಿರುದ್ಧ ಎಫ್​ಐಆರ್​ ದಾಖಲು ಮಾಡುವಂತೆ ಚೆನ್ನೈನ ನ್ಯಾಯಾಲಯವೊಂದು ಆದೇಶಿಸಿದೆ. ಇದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. 2021ರ ನವೆಂಬರ್​ 2ರಂದು ‘ಜೈ ಭೀಮ್​’ ಸಿನಿಮಾ (Jai Bhim Movie) ‘ಅಮೇಜಾನ್​ ಪ್ರೈಂ ವಿಡಿಯೋ’ ಮೂಲಕ ರಿಲೀಸ್​ ಆಗಿತ್ತು. ಬುಡಕಟ್ಟು ಸಮುದಾಯದ ಜನರ ಮೇಲೆ ನಡೆದ ಪೊಲೀಸ್​ ದೌರ್ಜನ್ಯದ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ. ಆದರೆ ಸಿನಿಮಾದ ಕೆಲವು ದೃಶ್ಯಗಳು ವನ್ನಿಯಾರ್​ ಸಮುದಾಯವನ್ನು ಅವಹೇಳಕಾರಿಯಾಗಿ ಚಿತ್ರಿಸಿವೆ ಎಂದು ಆ ಸಮುದಾಯದ ಕೆಲವರು ಕಾನೂನಿನ ಸಮರ ಸಾರಿದ್ದಾರೆ.

‘ರುದ್ರ ವನ್ನಿಯಾರ್​ ಸೇನಾ’ ಸಂಘಟನೆಯವರು ಈ ಕೇಸ್​ ದಾಖಲಿಸಿದ್ದಾರೆ. ಏ.29ರಂದು ಈ ಪ್ರಕರಣದ ವಿಚಾರಣೆ ನಡೆಯಿತು. ನಟ ಸೂರ್ಯ, ನಿರ್ಮಾಪಕಿ ಜ್ಯೋತಿಕಾ ಹಾಗೂ ನಿರ್ದೇಶಕ ಜ್ಞಾನವೇಲ್​ ಅವರು ವಿಚಾರಣೆಯಲ್ಲಿ ಹಾಜರಾಗಿಲ್ಲ. ‘ವನ್ನಿಯರ್​ ಸಮುದಾಯವನ್ನು ಕೆಟ್ಟದಾಗಿ ತೋರಿಸುವ ಸಲುವಾಗಿಯೇ ಈ ಸಿನಿಮಾವನ್ನು ಮಾಡಲಾಗಿದೆ’ ಎಂದು ದೂರುದಾರರು ಆರೋಪಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಸೂರ್ಯ, ಜ್ಯೋತಿಕಾ ಮತ್ತು ಜ್ಞಾನವೇಲ್​ ವಿರುದ್ಧ ಎಫ್​ಐಆರ್​ ದಾಖಲಿಸಿ, ಕಾನೂನು ಪ್ರಕಾರ ತನಿಖೆ ನಡೆಸುವಂತೆ ಚೆನ್ನೈ ಪೊಲೀಸರಿಗೆ ಕೋರ್ಟ್​ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮೇ 20ರಂದು ನಡೆಯಲಿದೆ.

ಕೆಲವು ಸತ್ಯ ಘಟನೆಗಳನ್ನು ಆಧರಿಸಿ ‘ಜೈ ಭೀಮ್​’ ಸಿನಿಮಾ ಮೂಡಿಬಂದಿದೆ. ಈ ಚಿತ್ರ ರಿಲೀಸ್​ ಆದಾಗಲೇ ವನ್ನಿಯಾರ್​ ಸಮುದಾಯದಿಂದ ವಿರೋಧ ವ್ಯಕ್ತವಾಗಿತ್ತು. ಸಿನಿಮಾದಲ್ಲಿನ ವಿಲನ್​ ಪಾತ್ರಗಳನ್ನು ವನ್ನಿಯಾರ್​ ಸಮುದಾಯದವರು ಎಂದು ತೋರಿಸಲಾಗಿದೆ. ಉದ್ದೇಶ ಪೂರ್ವಕವಾಗಿಯೇ ಈ ರೀತಿ ಮಾಡಲಾಗಿದೆ. ಸಮಾಜದಲ್ಲಿ ತಮ್ಮ ಸಮುದಾಯಕ್ಕೆ ಅವಮಾನ ಆದಂತಾಗಿದೆ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ
Image
ಆಸ್ಕರ್​ ರೇಸ್​ನಿಂದ ‘ಜೈ ಭೀಮ್​’ ಚಿತ್ರ ಹೊರಬಿದ್ದರೂ ಸೂರ್ಯ ಫ್ಯಾನ್ಸ್​ ಖುಷಿ ಕಡಿಮೆ ಆಗಿಲ್ಲ; ಕಾರಣ ಏನು?
Image
ಸಂಕಷ್ಟದಲ್ಲಿ ‘ಜೈ ಭೀಮ್’ ತಂಡ; ಕ್ಷಮೆ ಕೇಳಿ ಐದು ಕೋಟಿ ನೀಡುವಂತೆ ಸೂರ್ಯಗೆ ಬಂತು ನೋಟಿಸ್
Image
ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು
Image
‘ಜೈ ಭೀಮ್​’ ಎನ್ನುತ್ತ ಕರ್ನಾಟಕದಲ್ಲೂ ಸದ್ದು ಮಾಡಲು ಸಜ್ಜಾದ ತಮಿಳು ಸ್ಟಾರ್​ ನಟ ಸೂರ್ಯ

ಸೂರ್ಯ ಮತ್ತು ಜ್ಯೋತಿಕಾ ಒಡೆತನದ ‘2ಡಿ ಎಂಟರ್​ಟೇನ್​ಮೆಂಟ್​’ ಬ್ಯಾನರ್​ ಮೂಲಕ ‘ಜೈ ಭೀಮ್​’ ಸಿನಿಮಾ ಮೂಡಿಬಂದಿದೆ. ವಕೀಲ ಚಂದ್ರು ಅವರ ರಿಯಲ್​ ಲೈಫ್​ ಪಾತ್ರದಲ್ಲಿ ಸೂರ್ಯ ನಟಿಸಿದ್ದಾರೆ. ಬುಡಕಟ್ಟು ಸಮುದಾಯದ ಜನರಿಗೆ ನ್ಯಾಯ ಒದಗಿಸಿಕೊಡುವ ಮೂಲಕ ರಿಯಲ್​ ಹೀರೋ ಎನಿಸಿಕೊಂಡ ಚಂದ್ರು ಅವರ ಪಾತ್ರದಲ್ಲಿನ ಸೂರ್ಯ ನಟನೆಗೆ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈಗ ಈ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ‘ಜೈ ಭೀಮ್​’ ತಂಡ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ.

ಭಿನ್ನ ರೀತಿಯ ಸಿನಿಮಾಗಳನ್ನು ಮಾಡುವ ಮೂಲಕ ಸೂರ್ಯ ಗುರುತಿಸಿಕೊಂಡಿದ್ದಾರೆ. ‘ಜೈ ಭೀಮ್​’ ಚಿತ್ರಕ್ಕಿಂತಲೂ ಮುನ್ನ ಅವರು ಮಾಡಿದ್ದ ‘ಸೂರರೈ ಪೊಟ್ರು’ ಚಿತ್ರ ಕೂಡ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾ ಸಹ ‘ಅಮೇಜಾನ್​ ಪ್ರೈಂ ವಿಡಿಯೋ’ದಲ್ಲಿ ರಿಲೀಸ್​ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ