AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೂಟ್​ ಸೆಲೆಕ್ಟ್​ನಲ್ಲಿ ಬರಲಿದೆ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​; ಗಮನ ಸೆಳೆದ ಟೀಸರ್​

Danish Sait: ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ.

ವೂಟ್​ ಸೆಲೆಕ್ಟ್​ನಲ್ಲಿ ಬರಲಿದೆ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​; ಗಮನ ಸೆಳೆದ ಟೀಸರ್​
ದಾನಿಶ್​ ಸೇಠ್
TV9 Web
| Edited By: |

Updated on: Dec 18, 2021 | 9:04 AM

Share

ದಾನಿಶ್​ ಸೇಠ್​ (Danish Sait) ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟ, ನಿರೂಪಕನಾಗಿ ಅವರು ಈಗಾಗಲೇ ಗಮನ ಸೆಳೆದಿದ್ದಾರೆ. ಆರ್​ಸಿಬಿ ಇನ್​ಸೈಡರ್​ ಆಗಿಯೂ ಅವರು ವಿಶ್ವಾದ್ಯಂತ ಫೇಮಸ್​ ಆಗಿದ್ದಾರೆ. ಅವರು ಅಭಿನಯಿಸಿರುವ ‘ಫ್ರೆಂಚ್​​ ಬಿರಿಯಾನಿ’, ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ (Humble Politician Nograj) ಚಿತ್ರಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಈಗ ಅವರ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್​ (Web Series) ರೂಪದಲ್ಲಿ ಬರುತ್ತಿದೆ. ವೂಟ್​ ಸೆಲೆಕ್ಟ್​ (Voot Select) ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್​ ಸರಣಿಯ ಟೀಸರ್​ ಈಗ ಬಿಡುಗಡೆ ಆಗಿದೆ. ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಮನರಂಜನೆ ಬಯಸುವ ಪ್ರೇಕ್ಷಕರ ವಲಯದಲ್ಲಿ ಈ ಟೀಸರ್​ ಹೊಸ ಹೈಪ್​ ಸೃಷ್ಟಿ ಮಾಡಿದೆ.

ದಾನಿಶ್ ಸೇಠ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಫೇಮಸ್​. ಕಾಮಿಡಿ ವಿಡಿಯೋಗಳ ಮೂಲಕ ಅವರು ಆಗಾಗ ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತಾರೆ. ಅವರ ಹಾಸ್ಯಪ್ರಜ್ಞೆಗೆ ಎಲ್ಲರೂ ಫಿದಾ ಆಗುತ್ತಾರೆ. ಈಗ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗುತ್ತಿರುವ ಕುರಿತು ದಾನಿಶ್​ ಅವರು ಸಂತಸ ಹಂಚಿಕೊಂಡಿದ್ದಾರೆ.

‘ನಮಸ್ಕಾರ ಸ್ನೇಹಿತರೆ. ಇಂದು ನಾನು ತುಂಬ ಭಾವುಕನಾಗಿದ್ದೇನೆ. ರೇಡಿಯೋದಲ್ಲಿ ಒಂದು ಧ್ವನಿಯಾಗಿ ನೋಗರಾಜ್​ ಪಾತ್ರ ಮೂಡಿಬಂದಿತ್ತು. ನಂತರ ಅದು ಸಿನಿಮಾ ಆಯಿತು. ಈಗ ಅದು ಒಂದು ವೆಬ್​ ಸಿರೀಸ್​ ಆಗಿದೆ’ ಎಂದು ಪೋಸ್ಟ್​ ಮಾಡುವ ಮೂಲಕ ದಾನಿಶ್​ ಸೇಠ್​ ಅವರು ಟೀಸರ್ ಹಂಚಿಕೊಂಡಿದ್ದಾರೆ.

ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ಈ ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ. ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ 2022ರ ಜ.6ರಂದು ಈ ವೆಬ್​ ಸರಣಿ ಬಿಡುಗಡೆ ಆಗಲಿದೆ.

View this post on Instagram

A post shared by Danish sait (@danishsait)

‘ಹಂಬಲ್ ಪೊಲಿಟಿಷಿಯನ್ ನಾಗರಾಜ್’​ ಕಥೆ ಏನು?

ಇದು ಒಟ್ಟು 10 ಎಪಿಸೋಡ್ ಹೊಂದಿರುವ ಕಾಮಿಡಿ ಆಧಾರಿತ ವೆಬ್‌ ಸೀರಿಸ್. ನಾಗರಾಜ್​ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾನೆ. ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾನೆ ಎಂಬುದು ಇಲ್ಲಿನ ಹೈಲೈಟ್​. ಅಧಿಕಾರದ ದುರಾಸೆ ಮತ್ತು ಭ್ರಷ್ಟಾಚಾರವನ್ನು ವಿಡಂಬನಾತ್ಮಕವಾಗಿ ನಿರೂಪಿಸುವ ಮೂಲಕ ಪ್ರೇಕ್ಷಕರನ್ನು ನಗಿಸುವ ಭರವಸೆ ಮೂಡಿಸಿದೆ ಈ ಟೀಸರ್​. ದಾನಿಶ್​ ಸೇಠ್​ ಅವರ ಈ ಪ್ರಯತ್ನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಅವರ ಅಭಿಮಾನಿ ಬಳಗಕ್ಕೆ ಈ ವೆಬ್​ ಸರಣಿ ಖುಷಿ ನೀಡಲಿದೆ.

ಇದನ್ನೂ ಓದಿ:

ದಾನಿಶ್​ ಸೇಠ್​ ಸಹೋದರಿ ಕುಬ್ರಾ ಸೇಠ್​ಗೆ ‘ಫೌಂಡೇಶನ್​’ ಅವಕಾಶ; ಹಾಲಿವುಡ್​ ಕಲಾವಿದರ ಜತೆ ನಟನೆ

ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ