AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೂಟ್​ ಸೆಲೆಕ್ಟ್​ನಲ್ಲಿ ಬರಲಿದೆ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​; ಗಮನ ಸೆಳೆದ ಟೀಸರ್​

Danish Sait: ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ.

ವೂಟ್​ ಸೆಲೆಕ್ಟ್​ನಲ್ಲಿ ಬರಲಿದೆ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​; ಗಮನ ಸೆಳೆದ ಟೀಸರ್​
ದಾನಿಶ್​ ಸೇಠ್
TV9 Web
| Edited By: |

Updated on: Dec 18, 2021 | 9:04 AM

Share

ದಾನಿಶ್​ ಸೇಠ್​ (Danish Sait) ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ನಟ, ನಿರೂಪಕನಾಗಿ ಅವರು ಈಗಾಗಲೇ ಗಮನ ಸೆಳೆದಿದ್ದಾರೆ. ಆರ್​ಸಿಬಿ ಇನ್​ಸೈಡರ್​ ಆಗಿಯೂ ಅವರು ವಿಶ್ವಾದ್ಯಂತ ಫೇಮಸ್​ ಆಗಿದ್ದಾರೆ. ಅವರು ಅಭಿನಯಿಸಿರುವ ‘ಫ್ರೆಂಚ್​​ ಬಿರಿಯಾನಿ’, ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ (Humble Politician Nograj) ಚಿತ್ರಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಈಗ ಅವರ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ಕಥೆ ವೆಬ್​ ಸಿರೀಸ್​ (Web Series) ರೂಪದಲ್ಲಿ ಬರುತ್ತಿದೆ. ವೂಟ್​ ಸೆಲೆಕ್ಟ್​ (Voot Select) ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿರುವ ಈ ವೆಬ್​ ಸರಣಿಯ ಟೀಸರ್​ ಈಗ ಬಿಡುಗಡೆ ಆಗಿದೆ. ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಮನರಂಜನೆ ಬಯಸುವ ಪ್ರೇಕ್ಷಕರ ವಲಯದಲ್ಲಿ ಈ ಟೀಸರ್​ ಹೊಸ ಹೈಪ್​ ಸೃಷ್ಟಿ ಮಾಡಿದೆ.

ದಾನಿಶ್ ಸೇಠ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಫೇಮಸ್​. ಕಾಮಿಡಿ ವಿಡಿಯೋಗಳ ಮೂಲಕ ಅವರು ಆಗಾಗ ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತಾರೆ. ಅವರ ಹಾಸ್ಯಪ್ರಜ್ಞೆಗೆ ಎಲ್ಲರೂ ಫಿದಾ ಆಗುತ್ತಾರೆ. ಈಗ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್​’ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗುತ್ತಿರುವ ಕುರಿತು ದಾನಿಶ್​ ಅವರು ಸಂತಸ ಹಂಚಿಕೊಂಡಿದ್ದಾರೆ.

‘ನಮಸ್ಕಾರ ಸ್ನೇಹಿತರೆ. ಇಂದು ನಾನು ತುಂಬ ಭಾವುಕನಾಗಿದ್ದೇನೆ. ರೇಡಿಯೋದಲ್ಲಿ ಒಂದು ಧ್ವನಿಯಾಗಿ ನೋಗರಾಜ್​ ಪಾತ್ರ ಮೂಡಿಬಂದಿತ್ತು. ನಂತರ ಅದು ಸಿನಿಮಾ ಆಯಿತು. ಈಗ ಅದು ಒಂದು ವೆಬ್​ ಸಿರೀಸ್​ ಆಗಿದೆ’ ಎಂದು ಪೋಸ್ಟ್​ ಮಾಡುವ ಮೂಲಕ ದಾನಿಶ್​ ಸೇಠ್​ ಅವರು ಟೀಸರ್ ಹಂಚಿಕೊಂಡಿದ್ದಾರೆ.

ದಾನಿಶ್​ ಸೇಠ್ ಜೊತೆಗೆ ಪ್ರಕಾಶ್​ ಬೆಳವಾಡಿ, ವಿಜಯ್​ ಚೆಂಡೂರ್​, ದಿಶಾ ಮದನ್​ ಮುಂತಾದವರು ಈ ವೆಬ್​ ಸರಣಿಯಲ್ಲಿ ನಟಿಸಿದ್ದಾರೆ. ಸಾದ್​​ ಖಾನ್​ ನಿರ್ದೇಶನ ಮಾಡಿದ್ದಾರೆ. ನಕುಲ್​ ಅಭ್ಯಂಕರ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ವೂಟ್​ ಸೆಲೆಕ್ಟ್​ ಮೂಲಕ 2022ರ ಜ.6ರಂದು ಈ ವೆಬ್​ ಸರಣಿ ಬಿಡುಗಡೆ ಆಗಲಿದೆ.

View this post on Instagram

A post shared by Danish sait (@danishsait)

‘ಹಂಬಲ್ ಪೊಲಿಟಿಷಿಯನ್ ನಾಗರಾಜ್’​ ಕಥೆ ಏನು?

ಇದು ಒಟ್ಟು 10 ಎಪಿಸೋಡ್ ಹೊಂದಿರುವ ಕಾಮಿಡಿ ಆಧಾರಿತ ವೆಬ್‌ ಸೀರಿಸ್. ನಾಗರಾಜ್​ ಒಬ್ಬ ಸ್ವಯಂ ಸೇವಕನಾಗಿ ಸೇವೆ ಸಲ್ಲಿಸುತ್ತಾ ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾನೆ. ನಂತರ ಮುಖ್ಯಮಂತ್ರಿ ಸ್ಥಾನಕ್ಕೇರಲು ಏನೆಲ್ಲಾ ಸರ್ಕಸ್ ಮಾಡಲಿದ್ದಾನೆ ಎಂಬುದು ಇಲ್ಲಿನ ಹೈಲೈಟ್​. ಅಧಿಕಾರದ ದುರಾಸೆ ಮತ್ತು ಭ್ರಷ್ಟಾಚಾರವನ್ನು ವಿಡಂಬನಾತ್ಮಕವಾಗಿ ನಿರೂಪಿಸುವ ಮೂಲಕ ಪ್ರೇಕ್ಷಕರನ್ನು ನಗಿಸುವ ಭರವಸೆ ಮೂಡಿಸಿದೆ ಈ ಟೀಸರ್​. ದಾನಿಶ್​ ಸೇಠ್​ ಅವರ ಈ ಪ್ರಯತ್ನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಅವರ ಅಭಿಮಾನಿ ಬಳಗಕ್ಕೆ ಈ ವೆಬ್​ ಸರಣಿ ಖುಷಿ ನೀಡಲಿದೆ.

ಇದನ್ನೂ ಓದಿ:

ದಾನಿಶ್​ ಸೇಠ್​ ಸಹೋದರಿ ಕುಬ್ರಾ ಸೇಠ್​ಗೆ ‘ಫೌಂಡೇಶನ್​’ ಅವಕಾಶ; ಹಾಲಿವುಡ್​ ಕಲಾವಿದರ ಜತೆ ನಟನೆ

ದಾನಿಶ್​ ಸೇಠ್​ಗೆ ಕರೆ ಮಾಡಿ ಹೊಗಳಿದ ರಣಬೀರ್​ ಕಪೂರ್​; ಈ ವಿಡಿಯೋ ಅಪ್​ಲೋಡ್​ ಮಾಡಿದ್ದಕ್ಕೆ ಬೈದ ಬಾಲಿವುಡ್​ ನಟ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ