AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಡವ ರಾಸ್ಕಲ್’​ ಒಟಿಟಿ ರಿಲೀಸ್​ ದಿನಾಂಕ ಘೋಷಣೆ; ಯಾವ ಪ್ಲಾಟ್​ಫಾರ್ಮ್​ನಲ್ಲಿ ತೆರೆಕಾಣಲಿದೆ ಧನಂಜಯ​ ಚಿತ್ರ?

ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ಪ್ರೇಕ್ಷಕರಿಗೆ ಸಾಕಷ್ಟು ನಗುವಿನ ಕಚಗುಳಿ ನೀಡಿತ್ತು. ಧನಂಜಯ ಅವರು ಹೀರೋ ಆಗಿ ಮಿಂಚಿದರೆ, ಅಮೃತಾ ಅಯ್ಯಂಗಾರ್ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

‘ಬಡವ ರಾಸ್ಕಲ್’​ ಒಟಿಟಿ ರಿಲೀಸ್​ ದಿನಾಂಕ ಘೋಷಣೆ; ಯಾವ ಪ್ಲಾಟ್​ಫಾರ್ಮ್​ನಲ್ಲಿ ತೆರೆಕಾಣಲಿದೆ ಧನಂಜಯ​ ಚಿತ್ರ?
ಧನಂಜಯ-ಅಮೃತಾ ಅಯ್ಯಂಗಾರ್
TV9 Web
| Edited By: |

Updated on: Jan 19, 2022 | 6:42 PM

Share

ಧನಂಜಯ (Dhananjaya)​ ನಟನೆಯ ‘ಬಡವ ರಾಸ್ಕಲ್​’ (Badava Rascal) ಸಿನಿಮಾ ಡಿಸೆಂಬರ್​ ಅಂತ್ಯದಲ್ಲಿ ತೆರೆಕಂಡು ಯಶಸ್ಸು ಗಳಿಸಿದೆ. ನಿರ್ಮಾಪಕನಾಗಿ ಮೊದಲ ಸಿನಿಮಾದಲ್ಲೇ ಧನಂಜಯ ಅವರು ಗೆದ್ದಿದ್ದಾರೆ. ಹಾಸ್ಯ ಕಥಾ ಹಂದರ ಇರುವ ಈ ಸಿನಿಮಾ ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ. ಕೊವಿಡ್​ ಕಾರಣದಿಂದ ಸಿನಿಮಾವನ್ನು ಎಲ್ಲರಿಂದಲೂ ಕಣ್ತುಂಬಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ಕೆಲವರು ಕೊರೊನಾ ಭಯದಿಂದ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿರಲಿಲ್ಲ. ಹೀಗಾಗಿ, ಈ ಚಿತ್ರ ಒಟಿಟಿಗೆ ಯಾವಾಗ ಬರಲಿದೆ ಎಂದು ಅನೇಕರು ಕಾದಿದ್ದರು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಚಿತ್ರ ಗಣರಾಜ್ಯೋತ್ಸವದ ಪ್ರಯುಕ್ತ ಒಟಿಟಿ ಪ್ಲಾಟ್​ಫಾರ್ಮ್​ಗೆ ಲಗ್ಗೆ ಇಡುತ್ತಿದೆ.  

ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ಪ್ರೇಕ್ಷಕರಿಗೆ ಸಾಕಷ್ಟು ನಗುವಿನ ಕಚಗುಳಿ ನೀಡಿತ್ತು. ಧನಂಜಯ ಅವರು ಹೀರೋ ಆಗಿ ಮಿಂಚಿದರೆ, ಅಮೃತಾ ಅಯ್ಯಂಗಾರ್ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಂಗಾಯಣ ರಘು ಹಾಗೂ ತಾರಾ ಅವರು ಧನಂಜಯ ಅವರ ತಂದೆ-ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಭಾವನಾತ್ಮಕ ದೃಶ್ಯಗಳು ಪ್ರೇಕ್ಷಕರ ಕಣ್ಣನ್ನು ಒದ್ದೆಯಾಗಿಸಿತ್ತು. ಸ್ವರ್ಶ ರೇಖಾ, ನಾಗಭೂಷಣ್, ಪೂರ್ಣ ಚಂದ್ರ ಮೊದಲಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಈಗ ಜನವರಿ 26ರಂದು ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ವೂಟ್​ ಆ್ಯಪ್​ನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ.

ಕೊವಿಡ್​ ಹೆಚ್ಚಾಗುವುದಕ್ಕೂ ಕೆಲವೇ ವಾರಗಳ ಮೊದಲು ಈ ಚಿತ್ರ ರಿಲೀಸ್​ (ಡಿಸೆಂಬರ್ 24) ಆಗಿತ್ತು. ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡಿದೆ. ಆದರೆ, ಇತ್ತೀಚೆಗೆ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಹಾಗೂ ವೀಕೆಂಡ್​ ಕರ್ಫ್ಯೂ ಜಾರಿಗೆ ಬಂದಿರುವುದರಿಂದ ಎಲ್ಲರಿಂದಲೂ ‘ಬಡವ ರಾಸ್ಕಲ್​’ ವೀಕ್ಷಿಸೋಕೆ ಸಾಧ್ಯವಾಗಿಲ್ಲ. ಅವರೆಲ್ಲರೂ ಈಗ ವೂಟ್​ನಲ್ಲಿ ಸಿನಿಮಾ ವೀಕ್ಷಿಸಬಹುದು.

ಇತ್ತೀಚೆಗೆ ಸಿನಿಮಾ ಗೆಲುವಿನ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿತ್ತು. ಈ ಮೂಲಕ ಗೆಲುವನ್ನು ಸಂಭ್ರಮಿಸಿತ್ತು. ಆದರೆ, ಕೊವಿಡ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಿಗೆ ಭೇಟಿ ನೀಡೋಕೆ ಚಿತ್ರತಂಡದ ಬಳಿ ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಧನಂಜಯ ಅವರು ಬೇಸರ ಹೊರ ಹಾಕಿದ್ದರು. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಕೋರಿಕೊಂಡಿದ್ದರು.

ಇದನ್ನೂ ಓದಿ: ಪ್ರೇಕ್ಷಕರಿಗೆ ‘ಬಡವ ರಾಸ್ಕಲ್​’ ಚಿತ್ರ ಇಷ್ಟವಾಯ್ತಾ? ಧನಂಜಯ ಅಭಿಮಾನಿಗಳು ಹೇಳಿದ್ದೇನು?

‘ಬಡವ ರಾಸ್ಕಲ್​’ ಕಲೆಕ್ಷನ್​ 15 ಕೋಟಿ ರೂಪಾಯಿ? ಧನಂಜಯ ಹೇಳಿದ್ದು ಇಷ್ಟು

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​