AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ನಿರೂಪಕನನ್ನೇ ಎದುರು ಹಾಕಿಕೊಂಡ ಸ್ಪರ್ಧಿ; ನನ್ನನ್ನು ಮನೆಯಿಂದ ಹೊರಹಾಕಿದರೂ ಬೇಸರವಿಲ್ಲ ಎಂದ ನಟಿ

ಶಿಲ್ಪಾ ಶೆಟ್ಟಿ ತಂಗಿ ಹಾಗೂ ದಿವ್ಯಾ ಅಗರ್​ವಾಲ್​ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ದಿವ್ಯಾಗೆ ಕರಣ್​ ಕ್ಲಾಸ್​ ತೆಗೆದುಕೊಂಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಬಿಗ್​ ಬಾಸ್​ ನಿರೂಪಕನನ್ನೇ ಎದುರು ಹಾಕಿಕೊಂಡ ಸ್ಪರ್ಧಿ; ನನ್ನನ್ನು ಮನೆಯಿಂದ ಹೊರಹಾಕಿದರೂ ಬೇಸರವಿಲ್ಲ ಎಂದ ನಟಿ
ಬಿಗ್​ ಬಾಸ್​ ನಿರೂಪಕನನ್ನೇ ಎದುರು ಹಾಕಿಕೊಂಡ ಸ್ಪರ್ಧಿ; ನನ್ನನ್ನು ಮನೆಯಿಂದ ಹೊರಹಾಕಿದರೂ ಬೇಸರವಿಲ್ಲ ಎಂದ ನಟಿ
TV9 Web
| Edited By: |

Updated on: Aug 29, 2021 | 9:37 PM

Share

‘ಬಿಗ್​ ಬಾಸ್​ ಒಟಿಟಿ’ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದೆ. ಈ ಶೋನ ನಿರೂಪಕ ಕರಣ್​ ಜೋಹರ್​ ಪಕ್ಷಪಾತ ಮಾಡುತ್ತಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೆಲವರಿಗೆ ಇದು ಹೌದು ಎನಿಸಿದರೆ ಇನ್ನೂ ಕೆಲವರು ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಈ ಮಧ್ಯೆ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಅಗರ್​ವಾಲ್​ ನಿರೂಪಕ ಕರಣ್​ ಅವರನ್ನೇ ಎದುರು ಹಾಕಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮನೆಯಿಂದ ನನ್ನನ್ನು ಹೊರಹಾಕಿದರೂ ನಾನು ಅದಕ್ಕೆ ಅಂಜುವುದಿಲ್ಲ ಎಂದಿದ್ದಾರೆ.

ಶಿಲ್ಪಾ ಶೆಟ್ಟಿ ತಂಗಿ ಹಾಗೂ ದಿವ್ಯಾ ಅಗರ್​ವಾಲ್​ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ದಿವ್ಯಾಗೆ ಕರಣ್​ ಕ್ಲಾಸ್​ ತೆಗೆದುಕೊಂಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ದಿವ್ಯಾ ಅವರು ಮನೆಯಲ್ಲಿ ಮಾತನಾಡಿದ್ದಾರೆ. ‘ಕರಣ್​ ಟೀಕೆಗಳು ನನ್ನನ್ನು ಬದಲಾಯಿಸುವುದಿಲ್ಲ. ನಾನು ಹೀಗೆಯೇ ಇರುತ್ತೇನೆ. ಅವರಿಗೆ ನನ್ನ ಬಗ್ಗೆ ಗೊತ್ತಿಲ್ಲದೆ ಇದ್ದರೂ ಅಸಹ್ಯವಾಗಿ ಮಾತನಾಡುವ ಹಕ್ಕು ಅವರಿಗೆ ಇಲ್ಲ’ ಎಂದು ಖಾರವಾಗಿಯೇ ಹೇಳಿದ್ದಾರೆ. ಅವರ ಡೇರಿಂಗ್​ ನೋಡಿ ಅನೇಕರು ಅಚ್ಚರಿ ಹೊರ ಹಾಕಿದ್ದಾರೆ.

‘ನನ್ನ ಬಗ್ಗೆ ಯಾರೇ ತಪ್ಪು ಮಾತನಾಡಿದರೂ ನಾನು ಆ ಬಗ್ಗೆ ಧ್ವನಿ ಎತ್ತುತ್ತೇನೆ. ನನ್ನ ಎದುರು ಇರುವ ವ್ಯಕ್ತಿ ಯಾರು ಎಂಬುದನ್ನು ನಾನು ಕೇರ್​ ಮಾಡುವುದಿಲ್ಲ. ನನ್ನನ್ನು ಈ ಮನೆಯಿಂದ ಹೊರ ಹಾಕಿದರೂ ನನಗೆ ಬೇಸರವಿಲ್ಲ. ನಾನು ಕಲಾವಿದೆ. ಇಲ್ಲಲ್ಲದಿದ್ದರೆ ಮತ್ತೊಂದು ಕಡೆ ಹೋಗಿ ನಟನೆ ಮಾಡುತ್ತೇನೆ’ ಎಂದು ಹೇಳುವ ಮೂಲಕ ಹಲವು ವೀಕ್ಷಕರ ಮನ ಗೆದ್ದಿದ್ದಾರೆ.

‘ನನ್ನ ಬಗ್ಗೆ ಕರಣ್​ ಹೇಳಿದ ಕೆಲವು ಮಾತುಗಳು ನಿಜವಲ್ಲ. ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳುವ ಹಕ್ಕು ಅವರಿಗೆ ಇಲ್ಲ. ಅವರು ಆ ರೀತಿ ಹೇಳಿದ್ದು ನನ್ನ ಜೀವನದ ಮೇಲೆ ಪ್ರಭಾವ ಬೀರುತ್ತದೆ. ನನಗೆ ತೊಂದರೆ ಉಂಟಾಗುತ್ತಿದೆ ಎಂದಾಗ ನಾನು ಧ್ವನಿ ಎತ್ತುವುದರಲ್ಲಿ ತಪ್ಪೇನಿದೆ? ನೀವು ನಿಮ್ಮನ್ನು ಬಾಲಿವುಡ್​ನ ಕಿಂಗ್​ ಎಂದು ಪರಿಗಣಿಸಿದ್ದೀರಿ. ನಿಮ್ಮ ಹೇಳಿಕೆ ಪ್ರಭಾವ ಬೀರುತ್ತದೆ ಎಂಬುದು ಗೊತ್ತಿದ್ದೂ ಈ ರೀತಿ ಏಕೆ ಮಾತನಾಡುತ್ತೀರಿ’ ಎಂದು ಕೇಳಿದ್ದಾರೆ ಅವರು.

ದಿವ್ಯಾ ಈ ಹೇಳಿಕೆ ಕರಣ್​ ಜೋಹರ್​ ವಿರೋಧಿಗಳಿಗೆ ಇಷ್ಟವಾಗಿದೆ. ಅವರು ಸೋಶಿಯಲ್​ ಮೀಡಿಯಾದಲ್ಲಿ ದಿವ್ಯಾ ಅವರನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ‘ಬಿಗ್​ ಬಾಸ್ ಮನೆ ತಲುಪುವ ಮೊದಲು ಸ್ಪರ್ಧಿಗಳು ದಟ್ಟ ಅರಣ್ಯವನ್ನು ಹಾದು ಬರಬೇಕು’; ಕುತೂಹಲ ಹೆಚ್ಚಿಸಿದ ನೂತನ ಪ್ರೊಮೊ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ