Sign In

By signing in or creating an account, you agree with Associated Broadcasting Company's Terms & Conditions and Privacy Policy.

Taapsee Pannu: ‘ನನ್ನ ಲೈಂಗಿಕ ಜೀವನ ಇಂಟರೆಸ್ಟಿಂಗ್​ ಆಗಿಲ್ಲ, ಹಾಗಾಗಿ ಕರಣ್​ ನನ್ನ ಕರೆದಿಲ್ಲ’: ತಾಪ್ಸಿ ಪನ್ನು ನೇರ ಮಾತು

Koffee with Karan | Karan Johar: ಸೆಲೆಬ್ರಿಟಿಗಳ ಲೈಂಗಿಕತೆ ಬಗ್ಗೆ ಬೇಕಂತಲೇ ಪ್ರಶ್ನೆ ಮಾಡಲಾಗುತ್ತದೆ ಎಂಬ ಕಾರಣಕ್ಕೆ ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮವನ್ನು ಅನೇಕರು ಟೀಕಿಸುತ್ತಿದ್ದಾರೆ. ಈಗ ತಾಪ್ಸಿ ಪನ್ನು ಕೂಡ ಆ ಬಗ್ಗೆ ಮಾತಾಡಿದ್ದಾರೆ.

Taapsee Pannu: ‘ನನ್ನ ಲೈಂಗಿಕ ಜೀವನ ಇಂಟರೆಸ್ಟಿಂಗ್​ ಆಗಿಲ್ಲ, ಹಾಗಾಗಿ ಕರಣ್​ ನನ್ನ ಕರೆದಿಲ್ಲ’: ತಾಪ್ಸಿ ಪನ್ನು ನೇರ ಮಾತು
ತಾಪ್ಸಿ ಪನ್ನು, ಕರಣ್ ಜೋಹರ್
Follow us
TV9 Web
| Updated By: ಮದನ್​ ಕುಮಾರ್​

Updated on:Aug 08, 2022 | 8:19 AM

ನಟಿ ತಾಪ್ಸಿ ಪನ್ನು (Taapsee Pannu) ಅವರು ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣದಿಂದಲೂ ಅವರು ಆಗಾಗ ಸುದ್ದಿ ಆಗುತ್ತಾರೆ. ಅವರದ್ದು ನೇರ ನಡೆ-ನುಡಿಯ ವ್ಯಕ್ತಿತ್ವ. ತಮಗೆ ಅನಿಸಿದ್ದನ್ನು ಅವರು ನೇರವಾಗಿ ಹೇಳುತ್ತಾರೆ. ಅದೇ ಕಾರಣಕ್ಕಾಗಿ ತಾಪ್ಸಿ ಪನ್ನು ಅನೇಕ ಬಾರಿ ಕಾಂಟ್ರವರ್ಸಿ ಮಾಡಿಕೊಂಡಿದ್ದುಂಟು. ಈಗ ಅವರ ‘ಕಾಫಿ ವಿತ್​ ಕರಣ್​ ಸೀಸನ್​ 7’ (Koffee with Karan) ಬಗ್ಗೆ ಮಾತನಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅವರನ್ನು ಈ ಬಾರಿ ಆಹ್ವಾನಿಸಲಾಗಿಲ್ಲ. ಯಾಕೆ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ‘ನನ್ನ ಲೈಂಗಿಕ ಜೀವನ ಅಷ್ಟೊಂದು ಇಂಟರೆಸ್ಟಿಂಗ್​ ಆಗಿಲ್ಲ. ಹಾಗಾಗಿ ಕರಣ್​ ಜೋಹರ್​ (Karan Johar) ಅವರು ನನ್ನನ್ನು ಕರೆದಿಲ್ಲ’ ಎಂದು ಅವರು ಹೇಳಿದ್ದಾರೆ.

ತಾಪ್ಸಿ ಪನ್ನು ಅವರು ಸದ್ಯ ‘ದೋಬಾರಾ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್​ 19ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಇದರ ಪ್ರಚಾರದ ಸಲುವಾಗಿ ಅವರು ಅನೇಕ ಕಡೆಗಳಿಗೆ ತೆರಳಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಆದರೆ ‘ಕಾಫಿ ವಿತ್​ ಕರಣ್​​’​ ಶೋನಲ್ಲಿ ಸಿನಿಮಾ ಪ್ರಚಾರ ಮಾಡಲು ತಾಪ್ಸಿಗೆ ಅವಕಾಶ ಸಿಕ್ಕಿಲ್ಲ. ಆ ಕುರಿತು ಕೇಳಿದ್ದಕ್ಕೆ ಹೀಗೆ ನೇರವಾಗಿ ಅವರು ಉತ್ತರ ನೀಡಿದ್ದಾರೆ.

‘ಕಾಫಿ ವಿತ್​ ಕರಣ್​​’ ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ. ಹಾಗಾಗಿ ಹೆಚ್ಚು ಬೋಲ್ಡ್​ ಪ್ರಶ್ನೆಗಳನ್ನು ಕರಣ್​ ಜೋಹರ್​ ಕೇಳುತ್ತಿದ್ದಾರೆ. ಅದಕ್ಕೆ ಕೆಲವು ಸೆಲೆಬ್ರಿಟಿಗಳು ಕೂಡ ನೇರವಾಗಿಯೇ ಉತ್ತರ ನೀಡುತ್ತಾರೆ. ಆದರೆ ಕೆಲವರು ವಿರೋಧ ವ್ಯಕ್ತಪಡಿಸುತ್ತಾರೆ. ಇತ್ತೀಚಿನ ಎಪಿಸೋಡ್​ನಲ್ಲಿ ಅತಿಥಿಯಾಗಿ ಬಂದಿದ್ದ ಆಮಿರ್ ಖಾನ್​ ಅವರು ಕರಣ್​ ಜೋಹರ್​ಗೆ ತಿರುಗೇಟು ನೀಡಿದ್ದರು.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಈ ಸೀಸನ್​ನಲ್ಲಿ ಅಕ್ಷಯ್​ ಕುಮಾರ್​, ಸಮಂತಾ ರುತ್​ ಪ್ರಭು, ಅನನ್ಯಾ ಪಾಂಡೆ, ವಿಜಯ್​ ದೇವರಕೊಂಡ, ಆಮಿರ್​ ಖಾನ್​, ಕರೀನಾ ಕಪೂರ್ ಖಾನ್​, ಸಾರಾ ಅಲಿ ಖಾನ್​, ಜಾನ್ವಿ ಕಪೂರ್​, ಆಲಿಯಾ ಭಟ್​, ರಣವೀರ್​ ಸಿಂಗ್​ ಅವರು ಅತಿಥಿಗಳಾಗಿ ಬಂದಿದ್ದಾರೆ. ನಟ, ನಿರ್ಮಾಪಕ, ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಕರಣ್​ ಜೋಹರ್​ ಫೇಮಸ್​ ಆಗಿದ್ದಾರೆ. ಅವರು ತಮ್ಮದೇ ಶೈಲಿಯಲ್ಲಿ ‘ಕಾಫಿ ವಿತ್​ ಕರಣ್​’ ಶೋ ನಡೆಸಿಕೊಡುತ್ತಿದ್ದಾರೆ. ಆದರೆ ಸೆಲೆಬ್ರಿಟಿಗಳ ಲೈಂಗಿಕತೆ ಬಗ್ಗೆ ಬೇಕಂತಲೇ ಪ್ರಶ್ನೆ ಮಾಡಲಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅನೇಕರು ಟೀಕಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:26 am, Mon, 8 August 22

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ