AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಂ 3’ ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

ಮೋಹನ್‌ಲಾಲ್ ನಟನೆಯ 'ದೃಶ್ಯಂ 3' ತೆಲುಗು ಆವೃತ್ತಿಯ OTT ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಿಮೇಕ್ ಹಕ್ಕುಗಳ ವಿವಾದದ ಹಿನ್ನೆಲೆಯಲ್ಲಿ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಅವರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜೂನ್ 18 ರಂದು ನಿಗದಿಯಾಗಿದ್ದ ಸ್ಟ್ರೀಮಿಂಗ್‌ಗೆ ಅಂತರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಇತರ ಭಾಷೆಗಳಲ್ಲಿ ಚಿತ್ರದ ಪ್ರಸಾರಕ್ಕೆ ಯಾವುದೇ ಅಡ್ಡಿ ಇಲ್ಲ.

'ದೃಶ್ಯಂ 3' ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ
ದೃಶ್ಯಂ 3 Image Credit source: Drishyam 3 Movie
ರಾಜೇಶ್ ದುಗ್ಗುಮನೆ
|

Updated on: Jun 18, 2026 | 6:51 AM

Share

ಮೋಹನ್‌ಲಾಲ್ ನಟನೆಯ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ (Drishaym 3) ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಹೀಗಿರುವಾಗಲೇ ಒಟಿಟಿ ಪ್ರಿಯರಿಗೆ ತೀವ್ರ ನಿರಾಶೆಯುಂಟುಮಾಡುವ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದ ತೆಲುಗು ವರ್ಷನ್‌ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಳಿದ ಭಾಷೆಯಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ತೊಂದರೆ ಇಲ್ಲ. ಹೀಗಾಗಿ, ತೆಲುಗು ಮಂದಿಗೆ ಕೊಂಚ ಬೇಸರ ಆಗಿದೆ.

‘ದೃಶ್ಯಂ’ ಮೊದಲ ಭಾಗವನ್ನು ತೆಲುಗಿನಲ್ಲಿ ರಿಮೇಕ್ ಮಾಡಿದ್ದ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಹಾಗೂ ಅವರ ಒಡೆತನದ ‘ರಾಜ್‌ಕುಮಾರ್ ಥಿಯೇಟರ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಈ ಫ್ರಾಂಚೈಸಿಯ ತೆಲುಗು ರಿಮೇಕ್ ಮತ್ತು ಹಕ್ಕುಗಳು ಕಾನೂನಾತ್ಮಕವಾಗಿ ತಮಗೆ ಸೇರಿದ್ದಾಗಿದೆ ಎಂದು ಅವರು ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಒಟಿಟಿಯಲ್ಲಿ ತೆಲುಗು ವರ್ಷನ್ ಪ್ರಸಾರವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಶ್ರೀಪ್ರಿಯಾ ಹಾಗೂ ರಾಜ್‌ಕುಮಾರ್ ಸೇತುಪತಿ ಜಂಟಿಯಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜೂನ್ 18 ರಂದು ‘ದೃಶ್ಯಂ 3’ ಚಿತ್ರವು ಅಮೆಜಾನ್ ಪ್ರೈಮ್ ಒಟಿಟಿ ವೇದಿಕೆಯಲ್ಲಿ ಭರ್ಜರಿಯಾಗಿ ಸ್ಟ್ರೀಮಿಂಗ್ ಆಗಲು ಸಜ್ಜಾಗಿತ್ತು. ಆದರೆ, ಒಟಿಟಿ ರಿಲೀಸ್ ಆಗುವ ಸಮಯದಲ್ಲೇ ಚಿತ್ರತಂಡಕ್ಕೆ ಈ ತೊಂದರೆ ಎದುರಾಗಿದೆ.

ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಕುಮರೇಶ್ ಬಾಬು ಅವರಿದ್ದ ಪೀಠವು ಈ ಮಹತ್ವದ ಆದೇಶ ನೀಡಿದೆ. ಪ್ರತಿವಾದಿಗಳಿಗೆ ಮುಂಚಿತವಾಗಿಯೇ ಖಾಸಗಿ ನೋಟಿಸ್ ಕಳುಹಿಸಿದ್ದರೂ ಸಹ, ಚಿತ್ರದ ತಯಾರಕರು ಅಥವಾ ಅವರ ಪ್ರತಿನಿಧಿಗಳು ಯಾರೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು

ಚಿತ್ರವು ಜೂನ್ 18 ರಂದೇ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದನ್ನು ಗಮನಿಸಿದ ಕೋರ್ಟ್, ತಕ್ಷಣವೇ ಜಾರಿಗೆ ಬರುವಂತೆ ತೆಲುಗು ವರ್ಷನ್ ಒಟಿಟಿ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಹೀಗಾಗಿ, ತೆಲುಗು ಪ್ರೇಕ್ಷಕರು ಈ ಥ್ರಿಲ್ಲರ್ ಸಿನೆಮಾವನ್ನು ವೀಕ್ಷಿಸಲು ಇನ್ನು ಕೆಲವು ದಿನ ಕಾಯುವುದು ಅನಿವಾರ್ಯವಾಗಿದೆ. ಕನ್ನಡದಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ಅಡ್ಡಿಯಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಉಜ್ಬೇಕಿಸ್ತಾನ್ ತಲುಪಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
'ತಪ್ಪಿಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ'
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ಗೃಹ ಸಚಿವರನ್ನ ಕೋರ್ಟ್​​ಗೆ ಕರೆಯಿಸಿದ ಆರ್​​ಎಸ್​ಎಸ್​ ಕೇಸ್
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ನಾಗೇಂದ್ರ ರಾಜೀನಾಮೆ ಹಿಂದಿನ ಮರ್ಮವನ್ನು ಬಿಚ್ಚಿಟ್ಟ ಸಚಿವ ಬಾಲಕೃಷ್ಣ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ಕಣ್ಣೂರಿನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಬೀಳುತ್ತಿದ್ದ ವೃದ್ಧನ ರಕ್ಷಣೆ
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನೇಪಾಳ ಪ್ರವಾಹ: ಪ್ರಧಾನಿ ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಿಸಲ್ಲ: ಆರ್ ಅಶೋಕ್
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಲ-ಮೂತ್ರ ಅಸುರಕ್ಷಿತ ರೀತಿಯಲ್ಲಿ ವಿಲೇವಾರಿ