AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ

Ek Villain Returns | John Abraham: ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಜಾನ್​ ಅಬ್ರಾಹಂ ಅವರು ಈ ರೀತಿ ಉತ್ತರ ನೀಡಿದ್ದಾರೆ. ‘ನಾನು ಬಿಗ್​ ಸ್ಕ್ರೀನ್​ ಹೀರೋ’ ಎಂದು ಅವರು ಹೇಳಿದ್ದಾರೆ.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ
ಜಾನ್ ಅಬ್ರಾಹಂ
TV9 Web
| Updated By: ಮದನ್​ ಕುಮಾರ್​|

Updated on:Jun 23, 2022 | 9:16 AM

Share

ಬಾಲಿವುಡ್​ನ ಸ್ಟಾರ್​ ನಟ ಜಾನ್​ ಅಬ್ರಾಹಂ (John Abraham) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ನಿಜ. ಆದರೆ ಇತ್ತೀಚಿನ ದಿನಗಳಲ್ಲಿ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಜಾನ್​ ಅಬ್ರಾಹಂ ನಟಿಸಿದ ‘ಅಟ್ಯಾಕ್​’ ಸಿನಿಮಾ 2022ರ ಏಪ್ರಿಲ್​ 1ರಂದು ತೆರೆಕಂಡಿತು. ಆದರೆ ಆ ಚಿತ್ರ ಹೀನಾಯವಾಗಿ ಸೋಲುಂಡಿತು. ಆ ಚಿತ್ರದ ಪ್ರಚಾರದ ವೇಳೆ ‘ನಾನು ಬಾಲಿವುಡ್​ ಹೀರೋ. ಪ್ರಾದೇಶಿಕ ಭಾಷೆಯ ಸಿನಿಮಾ ಮಾಡಲ್ಲ’ ಎಂದು ಹೇಳುವ ಮೂಲಕ ಜಾನ್​ ಅಬ್ರಾಹಂ ಅವರು ಅನೇಕರ ಟೀಕೆಗೆ ಒಳಗಾಗಿದ್ದರು. ಈಗ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾರೆ. ಒಟಿಟಿ (OTT) ಬಗ್ಗೆ ಅವರು ಹಗುರವಾಗಿ ಮಾತನಾಡಿದ್ದಾರೆ. ‘ಒಟಿಟಿಯಲ್ಲಿ 299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. ಜಾನ್​ ಅಬ್ರಾಹಂ ನಟಿಸಿರುವ ‘ಏಕ್​ ವಿಲನ್​ ರಿಟರ್ನ್ಸ್​’ (Ek Villain Returns) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರದ ವೇಳೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ತಾರಾ ಸುತಾರಿಯಾ, ದಿಶಾ ಪಟಾನಿ, ಅರ್ಜುನ್​ ಕಪೂರ್​ ನಟಿಸಿದ್ದಾರೆ. ಜುಲೈ 29ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅದರ ಸಲುವಾಗಿ ಅನೇಕ ಕಡೆಗಳಲ್ಲಿ ಜಾನ್​ ಅಬ್ರಾಹಂ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದ್ದಾರೆ.

‘ನಾನು ಬಿಗ್​ ಸ್ಕ್ರೀನ್​ ಹೀರೋ. ಅಲ್ಲಿಯೇ ನಾನು ಕಾಣಿಸಿಕೊಳ್ಳಲು ಬಯಸುತ್ತೇನೆ. ಈ ಸಂದರ್ಭದಲ್ಲಿ ನಾನು ದೊಡ್ಡ ಪರದೆಗಾಗಿಯೇ ಸಿನಿಮಾಗಳನ್ನು ಮಾಡುತ್ತೇನೆ. ಟ್ಯಾಬ್ಲೆಟ್​ನಲ್ಲಿ ಯಾರಾದರೂ ನನ್ನ ಸಿನಿಮಾ ನೋಡುತ್ತಾ ಅರ್ಧಕ್ಕೆ ನಿಲ್ಲಿಸಿ ವಾಶ್​ರೂಮ್​ಗೆ ಹೋದರೆ ನನಗೆ ಅವಮಾನ ಆದಂತೆ ಅನಿಸುತ್ತದೆ. 299 ಅಥವಾ 499 ರೂಪಾಯಿಗೆ ಒಟಿಟಿಯಲ್ಲಿ ಲಭ್ಯವಾಗಲು ನನಗೆ ಇಷ್ಟವಿಲ್ಲ. ಅದರಲ್ಲಿ ನನಗೆ ಸಮಸ್ಯೆ ಇದೆ’ ಎಂದು ಜಾನ್​ ಅಬ್ರಾಹಂ ಹೇಳಿದ್ದಾರೆ.

ಇದನ್ನೂ ಓದಿ: ‘777 ಚಾರ್ಲಿ’ ಡೈರೆಕ್ಟರ್​ಗೆ ಬಂತು ಬಾಲಿವುಡ್​ ಸ್ಟಾರ್ ನಟ ಜಾನ್​ ಅಬ್ರಾಹಂ​ ಕಾಲ್​; ಎಲ್ಲಾ ಚಾರ್ಲಿ ಮಹಿಮೆ

ನಟನೆ ಮಾತ್ರವಲ್ಲದೇ ನಿರ್ಮಾಣದಲ್ಲಿಯೂ ಜಾನ್​ ಅಬ್ರಾಹಂ ತೊಡಗಿಕೊಂಡಿದ್ದಾರೆ. ನಿರ್ಮಾಪಕನಾಗಿ ಅವರು ಒಟಿಟಿಗೆ ಸಿನಿಮಾ ಮಾಡುತ್ತಾರಂತೆ. ಆದರೆ ನಟನಾಗಿ ತಮಗೆ ಒಟಿಟಿ ಇಷ್ಟವಿಲ್ಲ ಎಂದು ಅವರು ಹೇಳಿದ್ದಾರೆ. ಇಷ್ಟೆಲ್ಲ ಮಾತನಾಡಿರುವ ಅವರ ‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾ ಚಿತ್ರಮಂದಿರದಲ್ಲಿ ಗೆಲ್ಲುತ್ತೋ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:16 am, Thu, 23 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ