AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ

Ek Villain Returns | John Abraham: ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಜಾನ್​ ಅಬ್ರಾಹಂ ಅವರು ಈ ರೀತಿ ಉತ್ತರ ನೀಡಿದ್ದಾರೆ. ‘ನಾನು ಬಿಗ್​ ಸ್ಕ್ರೀನ್​ ಹೀರೋ’ ಎಂದು ಅವರು ಹೇಳಿದ್ದಾರೆ.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ
ಜಾನ್ ಅಬ್ರಾಹಂ
TV9 Web
| Updated By: ಮದನ್​ ಕುಮಾರ್​|

Updated on:Jun 23, 2022 | 9:16 AM

Share

ಬಾಲಿವುಡ್​ನ ಸ್ಟಾರ್​ ನಟ ಜಾನ್​ ಅಬ್ರಾಹಂ (John Abraham) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ನಿಜ. ಆದರೆ ಇತ್ತೀಚಿನ ದಿನಗಳಲ್ಲಿ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಜಾನ್​ ಅಬ್ರಾಹಂ ನಟಿಸಿದ ‘ಅಟ್ಯಾಕ್​’ ಸಿನಿಮಾ 2022ರ ಏಪ್ರಿಲ್​ 1ರಂದು ತೆರೆಕಂಡಿತು. ಆದರೆ ಆ ಚಿತ್ರ ಹೀನಾಯವಾಗಿ ಸೋಲುಂಡಿತು. ಆ ಚಿತ್ರದ ಪ್ರಚಾರದ ವೇಳೆ ‘ನಾನು ಬಾಲಿವುಡ್​ ಹೀರೋ. ಪ್ರಾದೇಶಿಕ ಭಾಷೆಯ ಸಿನಿಮಾ ಮಾಡಲ್ಲ’ ಎಂದು ಹೇಳುವ ಮೂಲಕ ಜಾನ್​ ಅಬ್ರಾಹಂ ಅವರು ಅನೇಕರ ಟೀಕೆಗೆ ಒಳಗಾಗಿದ್ದರು. ಈಗ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾರೆ. ಒಟಿಟಿ (OTT) ಬಗ್ಗೆ ಅವರು ಹಗುರವಾಗಿ ಮಾತನಾಡಿದ್ದಾರೆ. ‘ಒಟಿಟಿಯಲ್ಲಿ 299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. ಜಾನ್​ ಅಬ್ರಾಹಂ ನಟಿಸಿರುವ ‘ಏಕ್​ ವಿಲನ್​ ರಿಟರ್ನ್ಸ್​’ (Ek Villain Returns) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರದ ವೇಳೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ತಾರಾ ಸುತಾರಿಯಾ, ದಿಶಾ ಪಟಾನಿ, ಅರ್ಜುನ್​ ಕಪೂರ್​ ನಟಿಸಿದ್ದಾರೆ. ಜುಲೈ 29ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅದರ ಸಲುವಾಗಿ ಅನೇಕ ಕಡೆಗಳಲ್ಲಿ ಜಾನ್​ ಅಬ್ರಾಹಂ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದ್ದಾರೆ.

‘ನಾನು ಬಿಗ್​ ಸ್ಕ್ರೀನ್​ ಹೀರೋ. ಅಲ್ಲಿಯೇ ನಾನು ಕಾಣಿಸಿಕೊಳ್ಳಲು ಬಯಸುತ್ತೇನೆ. ಈ ಸಂದರ್ಭದಲ್ಲಿ ನಾನು ದೊಡ್ಡ ಪರದೆಗಾಗಿಯೇ ಸಿನಿಮಾಗಳನ್ನು ಮಾಡುತ್ತೇನೆ. ಟ್ಯಾಬ್ಲೆಟ್​ನಲ್ಲಿ ಯಾರಾದರೂ ನನ್ನ ಸಿನಿಮಾ ನೋಡುತ್ತಾ ಅರ್ಧಕ್ಕೆ ನಿಲ್ಲಿಸಿ ವಾಶ್​ರೂಮ್​ಗೆ ಹೋದರೆ ನನಗೆ ಅವಮಾನ ಆದಂತೆ ಅನಿಸುತ್ತದೆ. 299 ಅಥವಾ 499 ರೂಪಾಯಿಗೆ ಒಟಿಟಿಯಲ್ಲಿ ಲಭ್ಯವಾಗಲು ನನಗೆ ಇಷ್ಟವಿಲ್ಲ. ಅದರಲ್ಲಿ ನನಗೆ ಸಮಸ್ಯೆ ಇದೆ’ ಎಂದು ಜಾನ್​ ಅಬ್ರಾಹಂ ಹೇಳಿದ್ದಾರೆ.

ಇದನ್ನೂ ಓದಿ: ‘777 ಚಾರ್ಲಿ’ ಡೈರೆಕ್ಟರ್​ಗೆ ಬಂತು ಬಾಲಿವುಡ್​ ಸ್ಟಾರ್ ನಟ ಜಾನ್​ ಅಬ್ರಾಹಂ​ ಕಾಲ್​; ಎಲ್ಲಾ ಚಾರ್ಲಿ ಮಹಿಮೆ

ನಟನೆ ಮಾತ್ರವಲ್ಲದೇ ನಿರ್ಮಾಣದಲ್ಲಿಯೂ ಜಾನ್​ ಅಬ್ರಾಹಂ ತೊಡಗಿಕೊಂಡಿದ್ದಾರೆ. ನಿರ್ಮಾಪಕನಾಗಿ ಅವರು ಒಟಿಟಿಗೆ ಸಿನಿಮಾ ಮಾಡುತ್ತಾರಂತೆ. ಆದರೆ ನಟನಾಗಿ ತಮಗೆ ಒಟಿಟಿ ಇಷ್ಟವಿಲ್ಲ ಎಂದು ಅವರು ಹೇಳಿದ್ದಾರೆ. ಇಷ್ಟೆಲ್ಲ ಮಾತನಾಡಿರುವ ಅವರ ‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾ ಚಿತ್ರಮಂದಿರದಲ್ಲಿ ಗೆಲ್ಲುತ್ತೋ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:16 am, Thu, 23 June 22

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್