AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ

Ek Villain Returns | John Abraham: ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಜಾನ್​ ಅಬ್ರಾಹಂ ಅವರು ಈ ರೀತಿ ಉತ್ತರ ನೀಡಿದ್ದಾರೆ. ‘ನಾನು ಬಿಗ್​ ಸ್ಕ್ರೀನ್​ ಹೀರೋ’ ಎಂದು ಅವರು ಹೇಳಿದ್ದಾರೆ.

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ
ಜಾನ್ ಅಬ್ರಾಹಂ
TV9 Web
| Edited By: |

Updated on:Jun 23, 2022 | 9:16 AM

Share

ಬಾಲಿವುಡ್​ನ ಸ್ಟಾರ್​ ನಟ ಜಾನ್​ ಅಬ್ರಾಹಂ (John Abraham) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ನಿಜ. ಆದರೆ ಇತ್ತೀಚಿನ ದಿನಗಳಲ್ಲಿ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಜಾನ್​ ಅಬ್ರಾಹಂ ನಟಿಸಿದ ‘ಅಟ್ಯಾಕ್​’ ಸಿನಿಮಾ 2022ರ ಏಪ್ರಿಲ್​ 1ರಂದು ತೆರೆಕಂಡಿತು. ಆದರೆ ಆ ಚಿತ್ರ ಹೀನಾಯವಾಗಿ ಸೋಲುಂಡಿತು. ಆ ಚಿತ್ರದ ಪ್ರಚಾರದ ವೇಳೆ ‘ನಾನು ಬಾಲಿವುಡ್​ ಹೀರೋ. ಪ್ರಾದೇಶಿಕ ಭಾಷೆಯ ಸಿನಿಮಾ ಮಾಡಲ್ಲ’ ಎಂದು ಹೇಳುವ ಮೂಲಕ ಜಾನ್​ ಅಬ್ರಾಹಂ ಅವರು ಅನೇಕರ ಟೀಕೆಗೆ ಒಳಗಾಗಿದ್ದರು. ಈಗ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾರೆ. ಒಟಿಟಿ (OTT) ಬಗ್ಗೆ ಅವರು ಹಗುರವಾಗಿ ಮಾತನಾಡಿದ್ದಾರೆ. ‘ಒಟಿಟಿಯಲ್ಲಿ 299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ. ಜಾನ್​ ಅಬ್ರಾಹಂ ನಟಿಸಿರುವ ‘ಏಕ್​ ವಿಲನ್​ ರಿಟರ್ನ್ಸ್​’ (Ek Villain Returns) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರದ ವೇಳೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಜೊತೆ ತಾರಾ ಸುತಾರಿಯಾ, ದಿಶಾ ಪಟಾನಿ, ಅರ್ಜುನ್​ ಕಪೂರ್​ ನಟಿಸಿದ್ದಾರೆ. ಜುಲೈ 29ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅದರ ಸಲುವಾಗಿ ಅನೇಕ ಕಡೆಗಳಲ್ಲಿ ಜಾನ್​ ಅಬ್ರಾಹಂ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಒಟಿಟಿ ಕುರಿತು ಎದುರಾದ ಪ್ರಶ್ನೆಗೆ ಅವರು ಈ ರೀತಿ ಉತ್ತರ ನೀಡಿದ್ದಾರೆ.

‘ನಾನು ಬಿಗ್​ ಸ್ಕ್ರೀನ್​ ಹೀರೋ. ಅಲ್ಲಿಯೇ ನಾನು ಕಾಣಿಸಿಕೊಳ್ಳಲು ಬಯಸುತ್ತೇನೆ. ಈ ಸಂದರ್ಭದಲ್ಲಿ ನಾನು ದೊಡ್ಡ ಪರದೆಗಾಗಿಯೇ ಸಿನಿಮಾಗಳನ್ನು ಮಾಡುತ್ತೇನೆ. ಟ್ಯಾಬ್ಲೆಟ್​ನಲ್ಲಿ ಯಾರಾದರೂ ನನ್ನ ಸಿನಿಮಾ ನೋಡುತ್ತಾ ಅರ್ಧಕ್ಕೆ ನಿಲ್ಲಿಸಿ ವಾಶ್​ರೂಮ್​ಗೆ ಹೋದರೆ ನನಗೆ ಅವಮಾನ ಆದಂತೆ ಅನಿಸುತ್ತದೆ. 299 ಅಥವಾ 499 ರೂಪಾಯಿಗೆ ಒಟಿಟಿಯಲ್ಲಿ ಲಭ್ಯವಾಗಲು ನನಗೆ ಇಷ್ಟವಿಲ್ಲ. ಅದರಲ್ಲಿ ನನಗೆ ಸಮಸ್ಯೆ ಇದೆ’ ಎಂದು ಜಾನ್​ ಅಬ್ರಾಹಂ ಹೇಳಿದ್ದಾರೆ.

ಇದನ್ನೂ ಓದಿ: ‘777 ಚಾರ್ಲಿ’ ಡೈರೆಕ್ಟರ್​ಗೆ ಬಂತು ಬಾಲಿವುಡ್​ ಸ್ಟಾರ್ ನಟ ಜಾನ್​ ಅಬ್ರಾಹಂ​ ಕಾಲ್​; ಎಲ್ಲಾ ಚಾರ್ಲಿ ಮಹಿಮೆ

ನಟನೆ ಮಾತ್ರವಲ್ಲದೇ ನಿರ್ಮಾಣದಲ್ಲಿಯೂ ಜಾನ್​ ಅಬ್ರಾಹಂ ತೊಡಗಿಕೊಂಡಿದ್ದಾರೆ. ನಿರ್ಮಾಪಕನಾಗಿ ಅವರು ಒಟಿಟಿಗೆ ಸಿನಿಮಾ ಮಾಡುತ್ತಾರಂತೆ. ಆದರೆ ನಟನಾಗಿ ತಮಗೆ ಒಟಿಟಿ ಇಷ್ಟವಿಲ್ಲ ಎಂದು ಅವರು ಹೇಳಿದ್ದಾರೆ. ಇಷ್ಟೆಲ್ಲ ಮಾತನಾಡಿರುವ ಅವರ ‘ಏಕ್​ ವಿಲನ್​ ರಿಟರ್ನ್ಸ್​’ ಸಿನಿಮಾ ಚಿತ್ರಮಂದಿರದಲ್ಲಿ ಗೆಲ್ಲುತ್ತೋ ಇಲ್ಲವೋ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:16 am, Thu, 23 June 22

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್