AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಪಾತದಲ್ಲಿ ಸಿಕ್ತು ‘ಫ್ಯಾಮಿಲಿ ಮ್ಯಾನ್ 3’ ನಟನ ಶವ; ಗೆಳೆಯರಿಂದಲೇ ಕೊಲೆ ಆದ ರೋಹಿತ್?

‘ಫ್ಯಾಮಿಲಿ ಮ್ಯಾನ್ 3’ ನಟ ರೋಹಿತ್ ಬಾಸ್ಫೋರ್ ಅವರ ಮೃತದೇಹ ಅಸ್ಸಾಂನಲ್ಲಿ ಪತ್ತೆಯಾಗಿದೆ. ಅವರ ಸಾವು ಆಕಸ್ಮಿಕವೋ ಅಥವಾ ಕೊಲೆಯೋ ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೋಹಿತ್ ಅವರ ಮೇಲೆ ಕೆಲವರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ.

ಜಲಪಾತದಲ್ಲಿ ಸಿಕ್ತು ‘ಫ್ಯಾಮಿಲಿ ಮ್ಯಾನ್ 3’ ನಟನ ಶವ; ಗೆಳೆಯರಿಂದಲೇ ಕೊಲೆ ಆದ ರೋಹಿತ್?
ಫ್ಯಾಮಿಲಿ ಮ್ಯಾನ್ ನಟ
ರಾಜೇಶ್ ದುಗ್ಗುಮನೆ
|

Updated on: Apr 29, 2025 | 12:54 PM

Share

‘ಫ್ಯಾಮಿಲಿ ಮ್ಯಾನ್ ಸೀಸನ್ 3’ (Family Man Season 3) ವೆಬ್ ಸೀರಿಸ್​ನಲ್ಲಿ ನಟಿಸಿದ್ದ ರೋಹಿತ್ ಬಸ್ಫೋರೆ ಅವರು ಹೆಣವಾಗಿ ಪತ್ತೆಯಾಗಿದ್ದಾರೆ.  ಅಸ್ಸಾಂನಲ್ಲಿರೋ ಗರ್ಭಾಗಂ ಫಾರೆಸ್ಟ್​ನ ಜಲಪಾತದಲ್ಲಿ ಇವರ ಹೆಣ ಸಿಕ್ಕಿದೆ. ಈ ಘಟನೆ ಶಾಕಿಂಗ್ ಎನಿಸಿದೆ. ನಟನ ಸಾವು ಆಕಸ್ಮಿಕವೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಮೂಡಿದೆ. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲವರ ಮೇಲೆ ಅನುಮಾನ ಮೂಡಿದೆ. ‘ಫ್ಯಾಮಿಲಿಮ್ಯಾನ್ 3’ ಸೀಸನ್​ನ ಶೂಟಿಂಗ್ ನಡೆಯುತ್ತಿರುವಾಗಲೇ ಅವರ ಹತ್ಯೆ ಆಗಿದೆ.

ರೋಹಿತ್ ಅವರು ಮುಂಬೈನಲ್ಲಿ ವಾಸವಿದ್ದರು. ಕೆಲ ತಿಂಗಳ ಹಿಂದೆ ಅವರು ತಮ್ಮ ಹುಟ್ಟೂರಾದ ಗುವಾಹಟಿಗೆ ಮರಳಿದ್ದರು. ಭಾನುವಾರ (ಏಪ್ರಿಲ್ 27) ರೋಹಿತ್ ಅವರು ಗೆಳೆಯರ ಜೊತೆ ಹೊರಕ್ಕೆ ಹೋಗೋದಾಗಿ ಹೇಳಿದ್ದರು. ಆದರೆ, ಸಂಜೆ ಆದರೂ ಅವರು ಮನೆಗೆ ಬರಲಿಲ್ಲ ಮತ್ತು ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿತು. ಆ ಬಳಿಕ ಗೆಳೆಯರು ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಅವರು ನಿಧನ ಹೊಂದಿದ್ದಾಗಿ ಘೋಷಣೆ ಮಾಡಲಾಯಿತು.

ಈಗ ರೋಹಿತ್ ಕುಟುಂಬ ಮಗನ ಮರ್ಡರ್ ಆಗಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಇತ್ತೀಚೆಗೆ ಪಾರ್ಕಿಂಗ್ ವಿಚಾರಕ್ಕೆ ರಂಜಿತ್, ಅಶೋಕ್, ಧರಮ್ ಜೊತೆ ಕಿತ್ತಾಟ ನಡೆದಿತ್ತು.  ಈ ವೇಳೆ ಅವರು ರೋಹಿತ್​ಗೆ ಕೊಲೆ ಮಾಡೋ ಬೆದರಿಕೆ ಹಾಕಿದ್ದರು. ಅಲ್ಲದೆ, ರೋಹಿತ್ ಅವರ ಸಂಬಂಧಿ, ಅಮರ್​ದೀಪ್ ಕೂಡ ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಟ್ರಿಪ್​ನ ಪ್ಲ್ಯಾನ್ ಮಾಡಿದ್ದೇ ಅವರು ಎನ್ನಲಾಗಿದೆ.

ಇದನ್ನೂ ಓದಿ
Image
‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ
Image
ಅವನು ಗೆಳೆಯನಲ್ಲ, ಸಹೋದ್ಯೋಗಿ; ಅಕ್ಷಯ್-ಪರೇಶ್ ಮಧ್ಯೆ ಯಾವುದೂ ಸರಿ ಇಲ್ಲ?
Image
ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ; ಹೊಸ ಬ್ಯಾನರ್ ಶುರು?
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ

ಇದನ್ನೂ ಓದಿ: ಕೊನೆಗೂ ಹೊರಬಿತ್ತು ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ದಿನಾಂಕ; ಮನೋಜ್ ಜೊತೆ ಮತ್ತೋರ್ವ ಸ್ಟಾರ್ ಹೀರೋ

ಶಾಕಿಂಗ್ ವಿಚಾರ ಎಂದರೆ ನಟನ ದೇಹದ ಮೇಲೆ ಸಾಕಷ್ಟು ಗಾಯಗಳಿವೆ. ಹೀಗಾಗಿ, ಇದು ಆಕಸ್ಮಿಕ ಸಾವು ಎಂದು ಹೇಳಲು ಸಾಧ್ಯವಿಲ್ಲ. ಇದು ಕೊಲೆ ಇದ್ದರೂ ಇರಬಹುದು ಎಂದು ಹೇಳಲಾಗುತ್ತಿದೆ. ‘ಈಗಾಗಲೇ ನಟ ಮರಣೋತ್ತರ ಪರೀಕ್ಷೆ ನಡೆದಿದೆ. ಅವರ ದೇಹದ ಮೇಲೆ ಸಾಕಷ್ಟು ಕಲೆಗಳು ಕಂಡಿವೆ. ಮುಖ, ತಲೆಗೆ ಗಾಯಗಳಾಗಿವೆ.  ನಾವು ಪ್ರಕರಣದ ತನಿಖೆ ನಡೆಸುತ್ತೇವೆ’ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್