AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇಗಿದೆ ಫ್ಯಾಮಿಲಿ ಮ್ಯಾನ್ 3’; ಮನೋಜ್ ನಟನೆಯ ಸೀರಿಸ್ ನೋಡಿದವರು ಹೇಳಿದ್ದಿಷ್ಟು

ಫ್ಯಾಮಿಲಿ ಮ್ಯಾನ್ 3 ಸರಣಿ ಇಂದು (ನವೆಂಬರ್ 21) ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಗಳಿಸಿದೆ. ಈ ಸೀಸನ್ ಈಶಾನ್ಯ ಭಾರತದಲ್ಲಿ ನಡೆಯುವ ದಂಗೆಗಳು ಮತ್ತು ವಿದೇಶಿ ಶಕ್ತಿಗಳ ಪಿತೂರಿಗಳನ್ನು ಕೇಂದ್ರೀಕರಿಸುತ್ತದೆ. ವಿಜಯ್ ಸೇತುಪತಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಲವು ಟ್ವಿಸ್ಟ್‌ಗಳು ಇವೆ.

‘ಹೇಗಿದೆ ಫ್ಯಾಮಿಲಿ ಮ್ಯಾನ್ 3’; ಮನೋಜ್ ನಟನೆಯ ಸೀರಿಸ್ ನೋಡಿದವರು ಹೇಳಿದ್ದಿಷ್ಟು
ಫ್ಯಾಮಿಲಿ ಮ್ಯಾನ್ 3
ರಾಜೇಶ್ ದುಗ್ಗುಮನೆ
|

Updated on: Nov 21, 2025 | 12:47 PM

Share

ರಾಜ್ ಮತ್ತು ಡಿಕೆ ನಿರ್ದೇಶನ ಮಾಡಿದ ‘ಫ್ಯಾಮಿಲಿ ಮ್ಯಾನ್’ ಸರಣಿ ಗಮನ ಸೆಳೆದಿವೆ. ಈಗಾಗಲೇ ಈ ಸರಣಿಯಲ್ಲಿ ಎರಡು ಪಾರ್ಟ್​ಗಳು ಬಂದು ಹಿಟ್ ಆದವು. ಈಗ ಮೂರನೇ ಪಾರ್ಟ್ ರಿಲೀಸ್ ಆಗಿದೆ. ಈ ಸರಣಿ ಕೂಡ ವೀಕ್ಷಕರ ಗಮನ ಸೆಳೆದಿದೆ. ಇಂದು (ನವೆಂಬರ್ 21) ‘ಫ್ಯಾಮಿಲಿ ಮ್ಯಾನ್ 3’ ರಿಲೀಸ್ ಆಗಿದ್ದು, ಇದನ್ನು ನೋಡಿದವರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸಿದ್ದಾರೆ. ಬಹುತೇಕರು ಸರಣಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಮೊದಲ ಸೀಸನ್​ ಅಲ್ಲಿ ದೆಹಲಿ ಮೇಲೆ ಗ್ಯಾಸ್ ಅಟ್ಯಾಕ್ ಆಗುತ್ತದೆ. ಇದನ್ನು ಶ್ರೀಕಾಂತ್ ತಡೆಯುವ ಪ್ರಯತ್ನ ಮಾಡುತ್ತಾನೆ. ಆದರೆ, ಸಂಪೂರ್ಣವಾಗಿ ಯಶಸ್ಸು ಕಾಣೋದಿಲ್ಲ. ಒಂದಷ್ಟು ಸಾವು-ನೋವು ಸಂಭವಿಸುತ್ತದೆ. ಎರಡನೇ ಪಾರ್ಟ್​ನಲ್ಲಿ ಶ್ರೀಲಂಕಾ ಎಲ್​ಟಿಟಿ ಹಾಗೂ ಐಸಿಸ್​ ಒಟ್ಟಾಗಿ ಚೆನ್ನೈನಲ್ಲಿ ಪ್ರಧಾನಿ ಮೇಲೆ ದಾಳಿ ಮಾಡಲು ಮುಂದಾದಾಗ ಶ್ರೀಕಾಂತ್ ಅದನ್ನು ತಡೆಯುತ್ತಾರೆ.

ಕಳೆದ ಸೀಸನ್​ಗಳಿಗೆ ಹೋಲಿಕೆ ಮಾಡಿದೆ ಈ ಸೀಸನ್​ ಅಲ್ಲಿ ಹೆಚ್ಚು ಇಂಟಿಮೇಟ್ ದೃಶ್ಯಗಳು ಇವೆ ಎನ್ನಲಾಗಿದೆ. ಈ ಸರಣಿಯ ಕಥೆ ಈಶಾನ್ಯ ಭಾರತದಲ್ಲಿ ಸಾಗುತ್ತದೆ. ಈ ಭಾಗದಲ್ಲಿ ನಡೆಯುತ್ತಿರುವ ಧಂಗೆ ಹಾಗೂ ಅದನ್ನು ಬಳಸಿಕೊಳ್ಳಲು ವಿದೇಶಿ ದುಷ್ಟ ಶಕ್ತಿಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತೋರಿಸಲಾಗಿದೆ.

ಇದನ್ನೂ ಓದಿ: ‘ಫ್ಯಾಮಿಲಿ ಮ್ಯಾನ್ 3’ ಸರಣಿಯಲ್ಲಿ ಶ್ರೀಕಾಂತ್ ತಿವಾರಿ ಪಾತ್ರ ಹೇಗಿದೆ? ಏನನ್ನು ನಿರೀಕ್ಷಿಸಬಹುದು?

‘ಫ್ಯಾಮಿಲಿ ಮ್ಯಾನ್ 1’ ಸರಣಿಯಲ್ಲಿ ಶ್ರೀಕಾಂತ್ ಪತ್ನಿ ಸುಚಿತ್ರಾ ಸಹೋದ್ಯೋಗಿ ಜೊತೆ ಮೀಟಿಂಗ್ ಒಂದಕ್ಕೆ ತೆರಳಿದ್ದಳು. ಇವರ ಮಧ್ಯೆ ಏನಾದರೂ ನಡೆದಿತ್ತೇ ಎಂಬ ಪ್ರಶ್ನೆ ಹುಟ್ಟುವಂತೆ ಮಾಡಿತ್ತು. ಇದಕ್ಕೆ ಈ ಸರಣಿಯಲ್ಲೂ ಉತ್ತರ ನೀಡಿಲ್ಲವಂತೆ. ‘ಫರ್ಜಿ’ ಸರಣಿಯಲ್ಲಿ ಶ್ರೀಕಾಂತ್ ತಿವಾರಿ ಧ್ವನಿ ಇತ್ತು. ಈಗ ಈ ಸರಣಿಯಲ್ಲಿ ವಿಜಯ್ ಸೇತುಪತಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಹಲವು ಟ್ವಿಸ್ಟ್​ಗಳು ಸರಣಿಯಲ್ಲಿ ಇವೆ. ಹೊಸ ಹೊಸ ಪಾತ್ರಗಳು ಪರಿಚಯಗೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ