AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaami Movie: ಒಟಿಟಿಗೆ ಕಾಲಿಟ್ಟ ‘ಗಾಮಿ’ಗೆ ಮೆಚ್ಚುಗೆ; ವಿಶ್ವಕ್ ಸೇನ್ ಸಿನಿಮಾದ ಕಥೆ ಏನು?

ವಿಶ್ವಕ್ ಸೇನ್ ಅವರು ಶಂಕರ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್​ಗೆ ವಿಚಿತ್ರ ವ್ಯಕ್ತಿ. ಯಾವುದಾದರೂ ಮನುಷ್ಯನ ಸ್ಪರ್ಶ ಆದರೆ ಆತನ ದೇಹ ಇದನ್ನು ತಡೆದುಕೊಳ್ಳುವುದೇ ಇಲ್ಲ. ಇದಕ್ಕೆ ಪರಿಹಾರ ಏನು? ಅದರ ಹುಡುಕಾಟದಲ್ಲಿ ಆತ ಏನು ಮಾಡುತ್ತಾನೆ ಅನ್ನೋದು ‘ಗಾಮಿ’ ಸಿನಿಮಾದ ಕಥೆ.

Gaami Movie: ಒಟಿಟಿಗೆ ಕಾಲಿಟ್ಟ ‘ಗಾಮಿ’ಗೆ ಮೆಚ್ಚುಗೆ; ವಿಶ್ವಕ್ ಸೇನ್ ಸಿನಿಮಾದ ಕಥೆ ಏನು?
ಗಾಮಿ
ರಾಜೇಶ್ ದುಗ್ಗುಮನೆ
|

Updated on:Apr 15, 2024 | 2:30 PM

Share

ವಿಶ್ವಕ್ ಸೇನ್ ನಟನೆಯ ‘ಗಾಮಿ’ ಸಿನಿಮಾ (Gaami Movie) ಜೀ 5 ಮೂಲಕ ಪ್ರಸಾರ ಕಂಡು ಮೆಚ್ಚುಗೆ ಪಡೆದಿದೆ. ತೆಲುಗು ಸಿನಿಮಾ ಇದಾಗಿದ್ದು, ಕನ್ನಡ ಮೊದಲಾದ ಭಾಷೆಗೆ ಡಬ್ ಆಗಿ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ನೋಡಿ ಜನರು ಮೆಚ್ಚಿಕೊಂಡಿದ್ದಾರೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಸಾಕಷ್ಟು ಟ್ವಿಸ್ಟ್​ಗಳನ್ನು ಈ ಹೊಂದಿದೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ವಿಶ್ವಕ್ ಸೇನ್ ಅವರು ಶಂಕರ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್​ಗೆ ವಿಚಿತ್ರ ವ್ಯಕ್ತಿ. ಯಾವುದಾದರೂ ಮನುಷ್ಯನ ಸ್ಪರ್ಶ ಆದರೆ ಆತನ ದೇಹ ಇದನ್ನು ತಡೆದುಕೊಳ್ಳುವುದೇ ಇಲ್ಲ. ಇದಕ್ಕೆ ಪರಿಹಾರ ಏನು? ಅದರ ಹುಡುಕಾಟದಲ್ಲಿ ಆತ ಏನು ಮಾಡುತ್ತಾನೆ ಅನ್ನೋದು ‘ಗಾಮಿ’ ಸಿನಿಮಾದ ಕಥೆ. ‘ಗಾಮಿ’ಯಲ್ಲಿ ಈ ಕಥೆ ಪ್ರಮುಖವಾಗಿ ಸಾಗಿದರೆ ಇದರ ಜೊತೆಗೆ ಇನ್ನೂ ಎರಡು ಕಥೆಗಳು ತೆರೆಮೇಲೆ ಬರುತ್ತವೆ. ಅದು ಯಾರ ಕಥೆ? ಆ ಕಥೆಗೂ ಶಂಕರ್​ಗೂ ಏನು ಸಂಬಂಧ ಎನ್ನುವುದನ್ನು ಸಿನಿಮಾ ನೋಡಿ ತಿಳಿಯಬೇಕು.

ವಿದ್ಯಾಧರ್ ಕಗಿತ ಅವರು ‘ಗಾಮಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ಅವರು ಶಾರ್ಟ್​ ಫಿಲ್ಮ್​ಗಳನ್ನು ನಿರ್ದೇಶನ ಮಾಡಿದ್ದರು. ಸಿನಿಮಾ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಅನುಭವ. ಈ ಸಿನಿಮಾದಲ್ಲಿ ಅಲ್ಲಲ್ಲಿ ಒಂದಷ್ಟು ಗೊಂದಲಗಳು ಹುಟ್ಟಿಕೊಳ್ಳುತ್ತವೆ. ಅವುಗಳನ್ನು ಪರಿಹರಿಸುವತ್ತ ನಿರ್ದೇಶಕರು ಗಮನ ಹರಿಸಬೇಕಿತ್ತು. ಅಲ್ಲಲ್ಲಿ ವಿಜ್ಞಾನವೂ ಬರುತ್ತದೆ. ಕೆಲವು ದೃಶ್ಯಗಳು ಲಾಜಿಕ್​ನಿಂದ ದೂರ ಇದೆ. ಸಿನಿಮಾದಲ್ಲಿ ಬರೋ ಟ್ವಿಸ್ಟ್ ಗಮನ ಸೆಳೆಯೋ ರೀತಿಯಲ್ಲಿದೆ. ಚಿತ್ರದ ಬಹುತೇಕ ಶೂಟ್ ಗ್ರೀನ್ ಮ್ಯಾಟ್​ನಲ್ಲೇ ಮಾಡಿದಂತಿದೆ.

ಇದನ್ನೂ ಓದಿ: ನನ್ನ ಸಿನಿಮಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ನಟ ವಿಶ್ವಕ್ ಸೇನ್ ಆರೋಪ

‘ಗಾಮಿ’ ಜೀ 5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾ ಮಾರ್ಚ್ 8ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಶಬರೀಶ್ ಅವರು ನಿರ್ಮಾಣ ಮಾಡಿದ್ದಾರೆ. ಏಪ್ರಿಲ್ 12ರಂದು ಈ ಚಿತ್ರ ಒಟಿಟಿಗೆ ಲಗ್ಗೆ ಇಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:30 pm, Mon, 15 April 24

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ