AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaami Movie: ಒಟಿಟಿಗೆ ಕಾಲಿಟ್ಟ ‘ಗಾಮಿ’ಗೆ ಮೆಚ್ಚುಗೆ; ವಿಶ್ವಕ್ ಸೇನ್ ಸಿನಿಮಾದ ಕಥೆ ಏನು?

ವಿಶ್ವಕ್ ಸೇನ್ ಅವರು ಶಂಕರ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್​ಗೆ ವಿಚಿತ್ರ ವ್ಯಕ್ತಿ. ಯಾವುದಾದರೂ ಮನುಷ್ಯನ ಸ್ಪರ್ಶ ಆದರೆ ಆತನ ದೇಹ ಇದನ್ನು ತಡೆದುಕೊಳ್ಳುವುದೇ ಇಲ್ಲ. ಇದಕ್ಕೆ ಪರಿಹಾರ ಏನು? ಅದರ ಹುಡುಕಾಟದಲ್ಲಿ ಆತ ಏನು ಮಾಡುತ್ತಾನೆ ಅನ್ನೋದು ‘ಗಾಮಿ’ ಸಿನಿಮಾದ ಕಥೆ.

Gaami Movie: ಒಟಿಟಿಗೆ ಕಾಲಿಟ್ಟ ‘ಗಾಮಿ’ಗೆ ಮೆಚ್ಚುಗೆ; ವಿಶ್ವಕ್ ಸೇನ್ ಸಿನಿಮಾದ ಕಥೆ ಏನು?
ಗಾಮಿ
ರಾಜೇಶ್ ದುಗ್ಗುಮನೆ
|

Updated on:Apr 15, 2024 | 2:30 PM

Share

ವಿಶ್ವಕ್ ಸೇನ್ ನಟನೆಯ ‘ಗಾಮಿ’ ಸಿನಿಮಾ (Gaami Movie) ಜೀ 5 ಮೂಲಕ ಪ್ರಸಾರ ಕಂಡು ಮೆಚ್ಚುಗೆ ಪಡೆದಿದೆ. ತೆಲುಗು ಸಿನಿಮಾ ಇದಾಗಿದ್ದು, ಕನ್ನಡ ಮೊದಲಾದ ಭಾಷೆಗೆ ಡಬ್ ಆಗಿ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ನೋಡಿ ಜನರು ಮೆಚ್ಚಿಕೊಂಡಿದ್ದಾರೆ. ಅಡ್ವೆಂಚರ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಸಾಕಷ್ಟು ಟ್ವಿಸ್ಟ್​ಗಳನ್ನು ಈ ಹೊಂದಿದೆ. ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ವಿಶ್ವಕ್ ಸೇನ್ ಅವರು ಶಂಕರ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್​ಗೆ ವಿಚಿತ್ರ ವ್ಯಕ್ತಿ. ಯಾವುದಾದರೂ ಮನುಷ್ಯನ ಸ್ಪರ್ಶ ಆದರೆ ಆತನ ದೇಹ ಇದನ್ನು ತಡೆದುಕೊಳ್ಳುವುದೇ ಇಲ್ಲ. ಇದಕ್ಕೆ ಪರಿಹಾರ ಏನು? ಅದರ ಹುಡುಕಾಟದಲ್ಲಿ ಆತ ಏನು ಮಾಡುತ್ತಾನೆ ಅನ್ನೋದು ‘ಗಾಮಿ’ ಸಿನಿಮಾದ ಕಥೆ. ‘ಗಾಮಿ’ಯಲ್ಲಿ ಈ ಕಥೆ ಪ್ರಮುಖವಾಗಿ ಸಾಗಿದರೆ ಇದರ ಜೊತೆಗೆ ಇನ್ನೂ ಎರಡು ಕಥೆಗಳು ತೆರೆಮೇಲೆ ಬರುತ್ತವೆ. ಅದು ಯಾರ ಕಥೆ? ಆ ಕಥೆಗೂ ಶಂಕರ್​ಗೂ ಏನು ಸಂಬಂಧ ಎನ್ನುವುದನ್ನು ಸಿನಿಮಾ ನೋಡಿ ತಿಳಿಯಬೇಕು.

ವಿದ್ಯಾಧರ್ ಕಗಿತ ಅವರು ‘ಗಾಮಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ಅವರು ಶಾರ್ಟ್​ ಫಿಲ್ಮ್​ಗಳನ್ನು ನಿರ್ದೇಶನ ಮಾಡಿದ್ದರು. ಸಿನಿಮಾ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಅನುಭವ. ಈ ಸಿನಿಮಾದಲ್ಲಿ ಅಲ್ಲಲ್ಲಿ ಒಂದಷ್ಟು ಗೊಂದಲಗಳು ಹುಟ್ಟಿಕೊಳ್ಳುತ್ತವೆ. ಅವುಗಳನ್ನು ಪರಿಹರಿಸುವತ್ತ ನಿರ್ದೇಶಕರು ಗಮನ ಹರಿಸಬೇಕಿತ್ತು. ಅಲ್ಲಲ್ಲಿ ವಿಜ್ಞಾನವೂ ಬರುತ್ತದೆ. ಕೆಲವು ದೃಶ್ಯಗಳು ಲಾಜಿಕ್​ನಿಂದ ದೂರ ಇದೆ. ಸಿನಿಮಾದಲ್ಲಿ ಬರೋ ಟ್ವಿಸ್ಟ್ ಗಮನ ಸೆಳೆಯೋ ರೀತಿಯಲ್ಲಿದೆ. ಚಿತ್ರದ ಬಹುತೇಕ ಶೂಟ್ ಗ್ರೀನ್ ಮ್ಯಾಟ್​ನಲ್ಲೇ ಮಾಡಿದಂತಿದೆ.

ಇದನ್ನೂ ಓದಿ: ನನ್ನ ಸಿನಿಮಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ನಟ ವಿಶ್ವಕ್ ಸೇನ್ ಆರೋಪ

‘ಗಾಮಿ’ ಜೀ 5ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಈ ಸಿನಿಮಾ ಮಾರ್ಚ್ 8ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಈ ಚಿತ್ರವನ್ನು ಕಾರ್ತಿಕ್ ಶಬರೀಶ್ ಅವರು ನಿರ್ಮಾಣ ಮಾಡಿದ್ದಾರೆ. ಏಪ್ರಿಲ್ 12ರಂದು ಈ ಚಿತ್ರ ಒಟಿಟಿಗೆ ಲಗ್ಗೆ ಇಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:30 pm, Mon, 15 April 24

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ