AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವೇ ನಿರ್ಮಿಸಿದ ‘ಗೆಹರಾಯಿಯಾ’ ಚಿತ್ರವನ್ನು ಟ್ರೋಲ್​ ಮಾಡಿದ ಧರ್ಮ ಪ್ರೊಡಕ್ಷನ್​

‘ಗೆಹರಾಯಿಯಾ’ ಚಿತ್ರವನ್ನು ಟೀಕಿಸಿ ಓರ್ವ ಟ್ವೀಟ್​ ಒಂದನ್ನು ಮಾಡಿದ್ದ. ಸಿನಿಮಾ ನೋಡಿದ ನಂತರದಲ್ಲಿ ಮಿದುಳು ಹಾಳಾಯಿತು ಎಂಬರ್ಥ ಬರುವ ರೀತಿಯಲ್ಲಿ ಈ ಟ್ವೀಟ್​ ಇತ್ತು. ಇದನ್ನು ಧರ್ಮ ಪ್ರೊಡಕ್ಷನ್​ ಇನ್​ಸ್ಟಾಗ್ರಾಮ್​ ಸ್ಟೇಟಸ್​​ನಲ್ಲಿ ಹಂಚಿಕೊಂಡಿತ್ತು. ಅರ್ಧ ಗಂಟೆಗೂ ಅಧಿಕ ಕಾಲ ಈ ಸ್ಟೇಟಸ್​ ಹಾಗೆಯೇ ಇತ್ತು.

ತಾವೇ ನಿರ್ಮಿಸಿದ ‘ಗೆಹರಾಯಿಯಾ’ ಚಿತ್ರವನ್ನು ಟ್ರೋಲ್​ ಮಾಡಿದ ಧರ್ಮ ಪ್ರೊಡಕ್ಷನ್​
ದೀಪಿಕಾ-ಕರಣ್​
TV9 Web
| Edited By: |

Updated on: Feb 13, 2022 | 9:15 PM

Share

ದೀಪಿಕಾ ಪಡುಕೋಣೆ (Deepika Padukone) , ಸಿದ್ಧಾಂತ್​ ಚತುರ್ವೇದಿ, ಅನನ್ಯಾ ಪಾಂಡೆ ಮೊದಲಾದವರು ನಟಿಸಿರುವ ‘ಗೆಹರಾಯಿಯಾ’ ಸಿನಿಮಾ (Gehraiyaan Movie) ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಆಧುನಿಕ ಜಗತ್ತಿನ ಗೊಂದಲಮಯ ಮನಸ್ಸುಗಳ ಬಗ್ಗೆ ನಿರ್ದೇಶಕ ಶಕುನ್​ ಭಾತ್ರ  ಹೇಳಿದ ಕಥೆ ಅನೇಕರಿಗೆ ಇಷ್ಟವಾಗಿಲ್ಲ. ಕೆಲವರು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಅದ್ಭುತವಾಗಿದೆ ಸಿನಿಮಾ ಎಂದು ಕೊಂಡಾಡಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ಮೀಮ್​ಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೆಲವರು ಈ ಚಿತ್ರವನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ್ದಾರೆ. ವಿಚಿತ್ರ ಎಂದರೆ ಸ್ವತಃ ಧರ್ಮ ಪ್ರೊಡಕ್ಷನ್ (Dharma Production)​ ಅವರು ಈ ಚಿತ್ರದ ಬಗ್ಗೆ ಟೀಕೆ ​ ಮಾಡಿದ್ದಾರೆ! ಸದ್ಯ, ಈ ಪೋಸ್ಟ್ ಸಾಕಷ್ಟು ವೈರಲ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಟೀಕೆ ಮಾಡೋಕೆ ಟ್ರೋಲಿಗರಿಗೆ ಮತ್ತಷ್ಟು ಸರಕು ಸಿಕ್ಕಂತಾಗಿದೆ.ದನ್ನು ಮಾಡಿಕೊಂಡಿದೆ.

‘ಗೆಹರಾಯಿಯಾ’ ಚಿತ್ರವನ್ನು ಟೀಕಿಸಿ ಓರ್ವ ಟ್ವೀಟ್​ ಒಂದನ್ನು ಮಾಡಿದ್ದ. ಸಿನಿಮಾ ನೋಡಿದ ನಂತರದಲ್ಲಿ ಮಿದುಳು ಹಾಳಾಯಿತು ಎಂಬರ್ಥ ಬರುವ ರೀತಿಯಲ್ಲಿ ಈ ಟ್ವೀಟ್​ ಇತ್ತು. ಇದನ್ನು ಧರ್ಮ ಪ್ರೊಡಕ್ಷನ್​ ಇನ್​ಸ್ಟಾಗ್ರಾಮ್​ ಸ್ಟೇಟಸ್​​ನಲ್ಲಿ ಹಂಚಿಕೊಂಡಿತ್ತು. ಅರ್ಧ ಗಂಟೆಗೂ ಅಧಿಕ ಕಾಲ ಈ ಸ್ಟೇಟಸ್​ ಹಾಗೆಯೇ ಇತ್ತು. ತಪ್ಪಿನ ಅರಿವಾದ ನಂತರದಲ್ಲಿ ಇದನ್ನು ಡಿಲೀಟ್​ ಮಾಡಲಾಗಿದೆ.

ಈ ಘಟನೆ ಬಳಿಕ ‘ಗೆಹರಾಯಿಯಾ’ಚಿತ್ರವನ್ನು ಮತ್ತಷ್ಟು ಟ್ರೋಲ್​ ಮಾಡಲಾಗುತ್ತಿದೆ. ದೀಪಿಕಾ ಹಾಗೂ ಅನನ್ಯಾ ಅವರನ್ನು ಮಾತ್ರ ಹೈಲೈಟ್​ ಮಾಡಲಾಗುತ್ತಿದೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ದೀಪಿಕಾ ಈ ಬಗ್ಗೆ ಯಾವುದೇ ನೆಗೆಟಿವ್ ಕಮೆಂಟ್​ಗಳನ್ನು ಹಂಚಿಕೊಳ್ಳುತ್ತಿಲ್ಲ. ಅವರು ಈ ಸಿನಿಮಾ ಬಗ್ಗೆ ಸಂತಸ ಹೊಂದಿದ್ದಾರೆ.

ಇದನ್ನೂ ಓದಿ: Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

‘ಬಿಗ್​ ಬಾಸ್ 15’​ ಫಿನಾಲೆಯಲ್ಲಿ ಶಮಿತಾ ಶೆಟ್ಟಿ; ವಿನ್ನರ್​ ಪಟ್ಟಕ್ಕಾಗಿ ಹಣಾಹಣಿ ನಡೆಸುತ್ತಿರೋದು ಯಾರೆಲ್ಲ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್