AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ

ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಮೂಲಕ ‘ಮಹಾರಾಜ್​’ ಚಿತ್ರ ನಿರ್ಮಾಣವಾಗಿದೆ. ಆಮಿರ್ ಖಾನ್​ ಮಗ ಜುನೈದ್​ ಖಾನ್​ ಅಭಿನಯದ ಮೊದಲ ಸಿನಿಮಾ ಇದು. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ದೃಶ್ಯಗಳು ಇವೆ ಎಂದು ಕೆಲವರು ಕೇಸ್​ ಹಾಕಿದ್ದರು. ಆದರೆ ಸಿನಿಮಾದ ಬಿಡುಗಡೆಗೆ ಗುಜರಾತ್​​ ಹೈಕೋರ್ಟ್​ ಅನುಮತಿ ನೀಡಿದೆ.

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ
‘ಮಹಾರಾಜ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 21, 2024 | 10:00 PM

Share

ಖ್ಯಾತ ನಟ ಆಮಿರ್​ ಖಾನ್​ ಅವರ ಪುತ್ರ ಜುನೈದ್​ ಖಾನ್​ (Junaid Khan) ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್​’ ಸಾಕಷ್ಟು ವಿಘ್ನಗಳನ್ನು ಎದುರಿಸಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಅನೇಕರು ತಕರಾರು ತೆಗೆದಿದ್ದರು. ಅಲ್ಲದೇ, ನ್ಯಾಯಾಲಯ ಕೂಡ ಈ ಸಿನಿಮಾದ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. ಹಾಗಾಗಿ ರಿಲೀಸ್​ ಮುಂದೂಡಲಾಗಿತ್ತು. ಆದರೆ ಈಗ ‘ಮಹಾರಾಜ್​’ (Maharaj) ಸಿನಿಮಾವನ್ನು ರಿಲೀಸ್​ ಮಾಡಬಹುದು ಎಂದು ಗುಜರಾತ್​ ಹೈಕೋರ್ಟ್​ ಆದೇಶ ನೀಡಿದೆ. ತಡೆಯಾಜ್ಞೆ ತೆರವುಗೊಳ್ಳುತ್ತಿದ್ದಂತೆಯೇ ‘ನೆಟ್​ಫ್ಲಿಕ್ಸ್​’ (Netflix) ಒಟಿಟಿ ಮೂಲಕ ಈ ಸಿನಿಮಾ ಬಿಡುಗಡೆ ಆಗಿದೆ.

ಬಾಲಿವುಡ್​ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಮೂಲಕ ‘ಮಹಾರಾಜ್​’ ಸಿನಿಮಾ ನಿರ್ಮಾಣ ಆಗಿದೆ. ಇದು ಜುನೈದ್​ ಖಾನ್​ ನಟನೆಯ ಮೊದಲ ಸಿನಿಮಾ. ‘ಪಾತಾಳ್​ ಲೋಕ್​’ ಖ್ಯಾತಿಯ ಜೈದೀಪ್​ ಅಹಲಾವತ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇವೆ ಎಂದು ಕೆಲವರು ಕೇಸ್​ ಹಾಕಿದ್ದರು.

View this post on Instagram

A post shared by Netflix India (@netflix_in)

ಸೌರಭ್​ ಶಾ ಬರೆದ ‘ಮಹಾರಾಜ್​’ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. 2013ರಿಂದಲೂ ಈ ಪುಸ್ತಕ ಲಭ್ಯವಿದೆ. ಈ ಪುಸ್ತಕದಿಂದ ಯಾವುದೇ ಗಲಭೆ ಆಗಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಹಾಗಿದ್ದಮೇಲೆ ‘ಮಹಾರಾಜ್​’ ಸಿನಿಮಾ ಕೂಡ ಯಾವುದೇ ಗಲಭೆಗೆ ಕಾರಣ ಆಗುವುದಿಲ್ಲ ಎಂದು ನಿರ್ಮಾಪಕರ ಪರ ಲಾಯರ್​ ವಾದಿಸಿದರು. ವಾದ ಆಲಿಸಿದ ಬಳಿಕ ಕೋರ್ಟ್​ ಈ ಆದೇಶ ನೀಡಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

‘ಮಹಾರಾಜ್​’ ಸಿನಿಮಾವನ್ನು ವೀಕ್ಷಿಸುವಂತೆ ನ್ಯಾಯಾಧೀಶರಿಗೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದರು. ಮನವಿ ಒಪ್ಪಿದ ನ್ಯಾಯಾಧೀಶರು ಸಿನಿಮಾ ವೀಕ್ಷಿಸಿದ ಬಳಿಕ ಇದರಲ್ಲಿ ಹಿಂದೂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಯಾವುದೇ ಅಂಶಗಳು ಇಲ್ಲ ಎಂದು ಹೇಳಿದ್ದಾರೆ. ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ನೆಟ್​ಫ್ಲಿಕ್ಸ್​ ಈ ಸಿನಿಮಾವನ್ನು ರಿಲೀಸ್​ ಮಾಡಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ