AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ

ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಮೂಲಕ ‘ಮಹಾರಾಜ್​’ ಚಿತ್ರ ನಿರ್ಮಾಣವಾಗಿದೆ. ಆಮಿರ್ ಖಾನ್​ ಮಗ ಜುನೈದ್​ ಖಾನ್​ ಅಭಿನಯದ ಮೊದಲ ಸಿನಿಮಾ ಇದು. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ದೃಶ್ಯಗಳು ಇವೆ ಎಂದು ಕೆಲವರು ಕೇಸ್​ ಹಾಕಿದ್ದರು. ಆದರೆ ಸಿನಿಮಾದ ಬಿಡುಗಡೆಗೆ ಗುಜರಾತ್​​ ಹೈಕೋರ್ಟ್​ ಅನುಮತಿ ನೀಡಿದೆ.

ಆಮಿರ್​ ಖಾನ್​ ಮಗನ ‘ಮಹಾರಾಜ್​’ ಸಿನಿಮಾ ಬಿಡುಗಡೆಗೆ ಕೋರ್ಟ್​ ಅನುಮತಿ
‘ಮಹಾರಾಜ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 21, 2024 | 10:00 PM

Share

ಖ್ಯಾತ ನಟ ಆಮಿರ್​ ಖಾನ್​ ಅವರ ಪುತ್ರ ಜುನೈದ್​ ಖಾನ್​ (Junaid Khan) ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್​’ ಸಾಕಷ್ಟು ವಿಘ್ನಗಳನ್ನು ಎದುರಿಸಿದೆ. ಈ ಸಿನಿಮಾವನ್ನು ಬಿಡುಗಡೆ ಮಾಡಬಾರದು ಎಂದು ಅನೇಕರು ತಕರಾರು ತೆಗೆದಿದ್ದರು. ಅಲ್ಲದೇ, ನ್ಯಾಯಾಲಯ ಕೂಡ ಈ ಸಿನಿಮಾದ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. ಹಾಗಾಗಿ ರಿಲೀಸ್​ ಮುಂದೂಡಲಾಗಿತ್ತು. ಆದರೆ ಈಗ ‘ಮಹಾರಾಜ್​’ (Maharaj) ಸಿನಿಮಾವನ್ನು ರಿಲೀಸ್​ ಮಾಡಬಹುದು ಎಂದು ಗುಜರಾತ್​ ಹೈಕೋರ್ಟ್​ ಆದೇಶ ನೀಡಿದೆ. ತಡೆಯಾಜ್ಞೆ ತೆರವುಗೊಳ್ಳುತ್ತಿದ್ದಂತೆಯೇ ‘ನೆಟ್​ಫ್ಲಿಕ್ಸ್​’ (Netflix) ಒಟಿಟಿ ಮೂಲಕ ಈ ಸಿನಿಮಾ ಬಿಡುಗಡೆ ಆಗಿದೆ.

ಬಾಲಿವುಡ್​ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಮೂಲಕ ‘ಮಹಾರಾಜ್​’ ಸಿನಿಮಾ ನಿರ್ಮಾಣ ಆಗಿದೆ. ಇದು ಜುನೈದ್​ ಖಾನ್​ ನಟನೆಯ ಮೊದಲ ಸಿನಿಮಾ. ‘ಪಾತಾಳ್​ ಲೋಕ್​’ ಖ್ಯಾತಿಯ ಜೈದೀಪ್​ ಅಹಲಾವತ್​ ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆಗುವಂತಹ ಅಂಶಗಳು ಇವೆ ಎಂದು ಕೆಲವರು ಕೇಸ್​ ಹಾಕಿದ್ದರು.

View this post on Instagram

A post shared by Netflix India (@netflix_in)

ಸೌರಭ್​ ಶಾ ಬರೆದ ‘ಮಹಾರಾಜ್​’ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. 2013ರಿಂದಲೂ ಈ ಪುಸ್ತಕ ಲಭ್ಯವಿದೆ. ಈ ಪುಸ್ತಕದಿಂದ ಯಾವುದೇ ಗಲಭೆ ಆಗಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಹಾಗಿದ್ದಮೇಲೆ ‘ಮಹಾರಾಜ್​’ ಸಿನಿಮಾ ಕೂಡ ಯಾವುದೇ ಗಲಭೆಗೆ ಕಾರಣ ಆಗುವುದಿಲ್ಲ ಎಂದು ನಿರ್ಮಾಪಕರ ಪರ ಲಾಯರ್​ ವಾದಿಸಿದರು. ವಾದ ಆಲಿಸಿದ ಬಳಿಕ ಕೋರ್ಟ್​ ಈ ಆದೇಶ ನೀಡಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮಗ ಜುನೈದ್​ ಖಾನ್​ಗೆ ಶ್ರೀದೇವಿಯ 2ನೇ ಮಗಳು ಖುಷಿ ಕಪೂರ್​ ಜೋಡಿ

‘ಮಹಾರಾಜ್​’ ಸಿನಿಮಾವನ್ನು ವೀಕ್ಷಿಸುವಂತೆ ನ್ಯಾಯಾಧೀಶರಿಗೆ ನಿರ್ಮಾಪಕರು ಮನವಿ ಮಾಡಿಕೊಂಡಿದ್ದರು. ಮನವಿ ಒಪ್ಪಿದ ನ್ಯಾಯಾಧೀಶರು ಸಿನಿಮಾ ವೀಕ್ಷಿಸಿದ ಬಳಿಕ ಇದರಲ್ಲಿ ಹಿಂದೂ ಧರ್ಮದವರ ಭಾವನೆಗೆ ಧಕ್ಕೆ ಆಗುವಂತಹ ಯಾವುದೇ ಅಂಶಗಳು ಇಲ್ಲ ಎಂದು ಹೇಳಿದ್ದಾರೆ. ನ್ಯಾಯಾಲಯದ ತೀರ್ಪು ಹೊರಬಿದ್ದ ಬಳಿಕ ನೆಟ್​ಫ್ಲಿಕ್ಸ್​ ಈ ಸಿನಿಮಾವನ್ನು ರಿಲೀಸ್​ ಮಾಡಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ