AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ‘ಹೀರಾಮಂಡಿ’ ಸೀರಿಸ್​​ಗೆ ಅವರು ಪಡೆದ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವಿದೆ ಎಂದರೆ ಅದು ಅದಿತಿ ರಾವ್ ಹೈದರಿ. ಅವರು ಪ್ರತಿ ಫ್ರೇಮ್​ನಲ್ಲೂ ಮಿಂಚಿದ್ದಾರೆ.

‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೀರಾಮಂಡಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 08, 2024 | 8:04 AM

Share

ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಮೇ 1ರಂದು ರಿಲೀಸ್ ಆಗಿದೆ. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸೀರಿಸ್ ಪ್ರಸಾರ ಕಾಣುತ್ತಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬುದನ್ನು ಈ ಸೀರಿಸ್​ನಲ್ಲಿ ತೋರಿಸಲಾಗಿದೆ. ಈ ವೆಬ್​ ಸೀರಿಸ್​ಗಾಗಿ ಎಲ್ಲರೂ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ಅವರು ಈ ಚಿತ್ರದ ನಿರ್ದೇಶನಕ್ಕಾಗಿ 65 ಕೋಟಿ ರೂಪಾಯಿ ಪಡೆದಿದ್ದಾರೆ. ಇಡೀ ಸೀರಿಸ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದವರು ಎಂದರೆ ಅದು ಬನ್ಸಾಲಿ ಅವರು. ಇನ್ನು, ‘ಹೀರಾಮಂಡಿ’ ವೆಬ್​ ಸೀರಿಸ್​ನಲ್ಲಿ ನಟಿಸಿದ ನಟಿಯರ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ ಅವರು ಅತಿ ಹೆಚ್ಚಿ ಸಂಭಾವನೆ ಪಡೆದಿದ್ದಾರೆ. ಅವರಿಗೆ 2 ಕೋಟಿ ರೂಪಾಯಿ ಸಿಕ್ಕಿದೆ.

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ಅವರ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವಿದೆ ಎಂದರೆ ಅದು ಅದಿತಿ ರಾವ್ ಹೈದರಿ. ಅವರು ಪ್ರತಿ ಫ್ರೇಮ್​ನಲ್ಲೂ ಮಿಂಚಿದ್ದಾರೆ.

ಮನಿಶಾ ಕೊಯಿರಾಲಾ ಅವರು  ಬರೋಬ್ಬರಿ 1 ಕೋಟಿ ಸಂಭಾವನೆ ಪಡೆದಿದ್ದಾರೆ. ಅವರು ಸಿನಿಮಾಗಳಲ್ಲಿ ನಟಿಸಿದ್ದು ತುಂಬಾನೇ ಕಡಿಮೆ. ಅಳೆದು ತೂಗಿ ಆಫರ್​ಗಳನ್ನು ಅವರು ಒಪ್ಪಿಕೊಳ್ಳುತ್ತಾರೆ. ರಿಚಾ ಚಡ್ಡಾ ಅವರು ಈ ಸೀರಿಸ್​ನಲ್ಲಿ ರಾಜ್ಜೋ ಹೆಸರಿನ ಪಾತ್ರ ಮಾಡಿದ್ದಾರೆ. ಅವರು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಜೀದಾ ಶೇಖರ್ ಅವರು 40 ಲಕ್ಷ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಅವರ ಪಾತ್ರ ಹೆಚ್ಚು ಹೊತ್ತು ತೆರೆಮೇಲೆ ಬರುವುದಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಸಂಭಾವನೆ ನೀಡಲಾಗಿದೆ ಎಂದು ವರದಿ ಆಗಿದೆ.

ಸಂಜಯ್ ಲೀಲಾ ಬನ್ಸಾಲಿ ಅವರ ಸಿನಿಮಾಗಳಲ್ಲಿ ಸೆಟ್​ಗಳು ಸಾಕಷ್ಟು ಗಮನ ಸೆಳೆಯುತ್ತವೆ. ಅದೇ ರೀತಿ ಅದ್ದೂರಿತನ ಮನೆ ಮಾಡಿರುತ್ತದೆ. ‘ಹೀರಾಮಂಡಿ’ಯಲ್ಲೂ ಅದು ಮುಂದುವರಿದಿದೆ. ಇಷ್ಟು ವರ್ಷಗಳ ಕಾಲ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದ ಅವರು ಇದೇ ಮೊದಲ ಬಾರಿಗೆ ಸೀರಿಸ್ ಒಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ನಟಿಸೋಕೆ ರೆಡಿ ಆದ ನಯನತಾರಾ    

‘ಲವ್ ಆ್ಯಂಡ್ ವಾರ್’ ಸಿನಿಮಾನ ಸಂಜಯ್ ಲೀಲಾ ಬನ್ಸಾಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಣಬೀರ್ ಕಪೂರ್, ವಿಕ್ಕಿ ಕೌಶಲ್ ಹಾಗೂ ಆಲಿಯಾ ಭಟ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:55 am, Tue, 7 May 24

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ