AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ‘ಹೀರಾಮಂಡಿ’ ಸೀರಿಸ್​​ಗೆ ಅವರು ಪಡೆದ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವಿದೆ ಎಂದರೆ ಅದು ಅದಿತಿ ರಾವ್ ಹೈದರಿ. ಅವರು ಪ್ರತಿ ಫ್ರೇಮ್​ನಲ್ಲೂ ಮಿಂಚಿದ್ದಾರೆ.

‘ಹೀರಾಮಂಡಿ’ ಸೀರಿಸ್​ಗೆ ನಿರ್ದೇಶಕ ಬನ್ಸಾಲಿ ಹಾಗೂ ಸ್ಟಾರ್ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೀರಾಮಂಡಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 08, 2024 | 8:04 AM

Share

ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ನಿರ್ದೇಶನದ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ಸೀರಿಸ್ ಮೇ 1ರಂದು ರಿಲೀಸ್ ಆಗಿದೆ. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಸೀರಿಸ್ ಪ್ರಸಾರ ಕಾಣುತ್ತಿದೆ. ಲಾಹೋರ್​​ನ ರೆಡ್​ಲೈಟ್ ಏರಿಯಾ ಹೀರಾಮಂಡಿಯ ಕಥೆಯನ್ನು ಈ ಸಿನಿಮಾ ಹೊಂದಿದೆ. ಬ್ರಿಟಿಷರ ಆಳ್ವಿಕೆ ವೇಳೆ ಇವರ ಪರಿಸ್ಥಿತಿ ಯಾವ ರೀತಿಯಲ್ಲಿ ಇತ್ತು ಎಂಬುದನ್ನು ಈ ಸೀರಿಸ್​ನಲ್ಲಿ ತೋರಿಸಲಾಗಿದೆ. ಈ ವೆಬ್​ ಸೀರಿಸ್​ಗಾಗಿ ಎಲ್ಲರೂ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ಅವರು ಈ ಚಿತ್ರದ ನಿರ್ದೇಶನಕ್ಕಾಗಿ 65 ಕೋಟಿ ರೂಪಾಯಿ ಪಡೆದಿದ್ದಾರೆ. ಇಡೀ ಸೀರಿಸ್​ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದವರು ಎಂದರೆ ಅದು ಬನ್ಸಾಲಿ ಅವರು. ಇನ್ನು, ‘ಹೀರಾಮಂಡಿ’ ವೆಬ್​ ಸೀರಿಸ್​ನಲ್ಲಿ ನಟಿಸಿದ ನಟಿಯರ ವಿಚಾರಕ್ಕೆ ಬರೋದಾದರೆ ಸೋನಾಕ್ಷಿ ಸಿನ್ಹಾ ಅವರು ಅತಿ ಹೆಚ್ಚಿ ಸಂಭಾವನೆ ಪಡೆದಿದ್ದಾರೆ. ಅವರಿಗೆ 2 ಕೋಟಿ ರೂಪಾಯಿ ಸಿಕ್ಕಿದೆ.

ಅದಿತಿ ರಾವ್ ಹೈದರಿ ಅವರು ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ಅವರ ಸಂಭಾವನೆ 1-1.5 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ ಎನ್ನಲಾಗಿದೆ. ಸೋನಾಕ್ಷಿ ಸಿನ್ಹಾ ಬಳಿಕ ಅತಿ ಹೆಚ್ಚು ಸಂಭಾವನೆ ಪಡೆದ ಕಲಾವಿದೆ ಎಂದರೆ ಅದು ಅದಿತಿ ರಾವ್ ಹೈದರಿ. ಅವರು ಪ್ರತಿ ಫ್ರೇಮ್​ನಲ್ಲೂ ಮಿಂಚಿದ್ದಾರೆ.

ಮನಿಶಾ ಕೊಯಿರಾಲಾ ಅವರು  ಬರೋಬ್ಬರಿ 1 ಕೋಟಿ ಸಂಭಾವನೆ ಪಡೆದಿದ್ದಾರೆ. ಅವರು ಸಿನಿಮಾಗಳಲ್ಲಿ ನಟಿಸಿದ್ದು ತುಂಬಾನೇ ಕಡಿಮೆ. ಅಳೆದು ತೂಗಿ ಆಫರ್​ಗಳನ್ನು ಅವರು ಒಪ್ಪಿಕೊಳ್ಳುತ್ತಾರೆ. ರಿಚಾ ಚಡ್ಡಾ ಅವರು ಈ ಸೀರಿಸ್​ನಲ್ಲಿ ರಾಜ್ಜೋ ಹೆಸರಿನ ಪಾತ್ರ ಮಾಡಿದ್ದಾರೆ. ಅವರು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಜೀದಾ ಶೇಖರ್ ಅವರು 40 ಲಕ್ಷ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಅವರ ಪಾತ್ರ ಹೆಚ್ಚು ಹೊತ್ತು ತೆರೆಮೇಲೆ ಬರುವುದಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಸಂಭಾವನೆ ನೀಡಲಾಗಿದೆ ಎಂದು ವರದಿ ಆಗಿದೆ.

ಸಂಜಯ್ ಲೀಲಾ ಬನ್ಸಾಲಿ ಅವರ ಸಿನಿಮಾಗಳಲ್ಲಿ ಸೆಟ್​ಗಳು ಸಾಕಷ್ಟು ಗಮನ ಸೆಳೆಯುತ್ತವೆ. ಅದೇ ರೀತಿ ಅದ್ದೂರಿತನ ಮನೆ ಮಾಡಿರುತ್ತದೆ. ‘ಹೀರಾಮಂಡಿ’ಯಲ್ಲೂ ಅದು ಮುಂದುವರಿದಿದೆ. ಇಷ್ಟು ವರ್ಷಗಳ ಕಾಲ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದ ಅವರು ಇದೇ ಮೊದಲ ಬಾರಿಗೆ ಸೀರಿಸ್ ಒಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ನಟಿಸೋಕೆ ರೆಡಿ ಆದ ನಯನತಾರಾ    

‘ಲವ್ ಆ್ಯಂಡ್ ವಾರ್’ ಸಿನಿಮಾನ ಸಂಜಯ್ ಲೀಲಾ ಬನ್ಸಾಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಣಬೀರ್ ಕಪೂರ್, ವಿಕ್ಕಿ ಕೌಶಲ್ ಹಾಗೂ ಆಲಿಯಾ ಭಟ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:55 am, Tue, 7 May 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ